ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

ಸಕಲೇಶಪುರ: ಸಕಲೇಶಪುರ ತಾಲೂಕಿನ ಕರಗೂರು ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ” ಶ್ರೀ ವಾಯುಪುತ್ರ ದೇವಾಲಯಕ್ಕೆ ಶ್ರೀ ಕ್ಷೇತ್ರದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ 2,00,000/- ಲಕ್ಷ ರೂಗಳನ್ನು ಅನುದಾನ ಮಂಜೂರುಗೊಳಿಸಿದ್ದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ.ನವೀನ್ ಚಂದ್ರ ಶೆಟ್ಟಿ ಯವರು ಸಮಿತಿಯವರಿಗೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎಲ್ಲಾ ದೇವಸ್ಥಾನಗಳಿಗೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಮಠ ಮಂದಿರಗಳಿಗೆ ಸಹಾಯ ಹಸ್ತ ನೀಡುವ ಮೂಲಕ ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರ, ಭಜನಾ ಮಂಡಳಿಗಳಿಗೆ ಕಟ್ಟಡ ರಚನೆ, ತರಬೇತಿ ಮತ್ತು ಸ್ವಚ್ಛತಾ ಕಾರ್ಯಕ್ರಮಗಳಿಗೆ ಸಹಾಯ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಪ್ರಯತ್ನಗಳು ಕರ್ನಾಟಕದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿವೆ ಮದ್ಯವರ್ಜನ ಶಿಬಿರಗಳು, ವಾತ್ಸಲ್ಯ ಕಿಟ್ ವಿತರಣೆ, ವಾತ್ಸಲ್ಯ ಮನೆ ನಿರ್ಮಾಣ, ನಿರ್ಗತಿಕರಿಗೆ ಮಾಸಾಶನ, ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳು, ಕೆರೆ ಹೂಳೆತ್ತುವುದು, ಸರ್ಕಾರಿ ಶಾಲೆಗಳಿಗೆ ಅನುದಾನ ನೀಡುವಂತಹ ಹತ್ತು ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದು ನಾವೆಲ್ಲರೂ ಈ ನಿಟ್ಟಿನಲ್ಲಿ ಸಮಾಜದ ಸ್ವಾಸ್ಥ್ಯ ನಿರ್ಮಾಣದಲ್ಲಿ ಪೂಜ್ಯರೊಂದಿಗೆ ಕೈ ಜೋಡಿಸಬೇಕು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಭಜನೆಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವಜನತೆಗೆ ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಿ ಶ್ರಮಿಸಬೇಕು ಎಂದರು. ದೇವಸ್ಥಾನದ ನಿರ್ಮಾಣ ಕೆಲಸ ಬಹಳ ಪುಣ್ಯ ಕೆಲಸ ಇಂತಹ ಸ್ಥಳಗಳಲ್ಲಿ ನಿರಂತರವಾಗಿ ಧಾರ್ಮಿಕ ಆಚರಣೆಗಳು ಹಾಗೂ ಮಕ್ಕಳಿಗೆ ಉತ್ತಮ ಸಂಸ್ಕಾರಯುತ ಶಿಕ್ಷಣ, ಯೋಗ, ಧ್ಯಾನಗಳನ್ನು ಕಲಿಸಿಕೊಡುವ ಕೇಂದ್ರಗಳು ಹೆಚ್ಚಾಗಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ರಾಜೇಶ.ಎಂ, ಸಮಿತಿಯ ಅಧ್ಯಕ್ಷರಾದ ಲೋಲಾಕ್ಷ ,ಮತ್ತು ಪದಾಧಿಕಾರಿಗಳು ಊರಿನ ಗಣ್ಯರು, ಒಕ್ಕೂಟ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ವಲಯದ ಮೇಲ್ವಿಚಾರಕರು,ಸೇವಾ ಪ್ರತಿನಿಧಿ ರವರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ