ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ ಮಾಡಿದ ಫಸಲಿಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿರುತ್ತಾರೆ.

ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರವು ಈ ಬೆಳೆಗಳನ್ನು ಬೆಳೆದು ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರಿಗೆ ಗರಿಷ್ಠ ರೂ.15000 ಗಳಂತೆ (ಪ್ರತೀ ಸೆಂಟ್ಸ್‍ಗೆ ರೂ.60 ರಂತೆ) ಗರಿಷ್ಟ ಒಂದು ಹೆಕ್ಟೇರ್‍ವರೆಗೆ ಪರಿಹಾರ ನೀಡುವ ಕಾರ್ಯಕ್ರಮ ಜಾರಿಗೆ ತಂದಿರುತ್ತದೆ.

“ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.”

ಈ ಹಿನ್ನೆಲೆಯಲ್ಲಿ ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ಬೆಳೆದು 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಾಗೂ ದಿನಾಂಕ 24-03-2020 ರಿಂದ 31-05-2020 ರವರೆಗಿನ ಅವಧಿಯಲ್ಲಿ ಫಸಲು ಕಟಾವು ಆಗಿರುವ, ಮೇಲಿನ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದ ರೈತರು ಮಾತ್ರ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು. ತಾಲೂಕು ಹಾಗೂ ಜಿಲ್ಲಾ ಸಮಿತಿಗಳಿಂದ ಅನುಮೋದಿತವಾದ ರೈತರಿಗೆ ಪರಿಹಾರಧನವನ್ನು ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ರೈತರು ಅರ್ಜಿಯೊಂದಿಗೆ ಆಧಾರ್ ಲಿಂಕ್ ಹಾಗೂ NPCI ಸೀಡಿಂಗ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಆಧಾರ್ ಪ್ರತಿಯೊಂದಿಗೆ ಮತ್ತು ನಿಗದಿತ ಸ್ವಯಂ ಘೋಷಣೆ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25 ಆಗಿರುತ್ತದೆ.

ಈ ಕೆಳಗಿನ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.
ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರಬೇಕು. ಬಾಳೆ, ಅನಾನಸು ಮತ್ತು ಪಪ್ಪಾಯ ಬೆಳೆ ದಿನಾಂಕ 24-03-2020 ರಿಂದ 31-05-2020ರಲ್ಲಿ ಕಟಾವು ಮಾಡಿರುವ ರೈತರು ಮಾತ್ರ ಅರ್ಹರು. ಸದರಿ ಬೆಳೆಯನ್ನು ಶುದ್ದ ಬೆಳೆಯಾಗಿ ಬೆಳೆದಿರುವ ರೈತರು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ:
ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226 ,
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಮಂಗಳೂರು – 8277806378 (0824-2423615)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 8277806371 (08255-234102)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527 (08251-230905)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ 9880993238 (08257-232020)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ – 8277806380 (08256-232148)
ಇವರನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ