ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಎಲ್ಲರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು.

1987ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ರಹಿತ ದಿನದ ಆಚರಣೆಯ ಬಗ್ಗೆ ಅಧಿಸೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯದ ದೃಷ್ಟಿಯಿಂದ ತಂಬಾಕು ನಿಷೇಧ ಬಗ್ಗೆ ಚಿಂತನೆಯನ್ನು ಕೈಗೊಂಡಿತು.ತಂಬಾಕು ಸೇವನೆಯಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಆರು ಮಿಲಿಯನ್ ನಷ್ಟು ಜನರು ಮರಣ ಹೊಂದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ. ಆದುದರಿಂದ ಸರ್ಕಾರ ಮನುಷ್ಯನ ಭವಿಷ್ಯದ ಬಗ್ಗೆ ಚಿಂತಿಸಿ ತಂಬಾಕು ನಿಷೇಧವನ್ನು ಮಾಡುತ್ತಾರೆ. ಭಾರತ ದೇಶದಲ್ಲಿ ರೆಡ್ ಕ್ರಾಸ್ ಸಂಸ್ಥೆ,ಯನ್ ಜಿ ಒ,ಮುಂತಾದ ಸಂಸ್ಥೆಗಳು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸಗಳನ್ನು, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ. ಹಾಗೆಯೇ ತಂಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸಂಸ್ಥೆ ತಂಬಾಕು ನಿಯಂತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆಂದರೆ ಒಂದು ಸಂಪೂರ್ಣ ದಿನ ಅಂದು ಘಂಟೆಗಳ ಕಾಲ ಯಾವುದೇ ರೀತಿಯ ತಂಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿಂದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತಂಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ. ಯುವಕರಿಗೆ ಅದರಿಂದ ಆಗುವ ಹಾನಿ,ತೊಂದರೆಗಳನ್ನು ಅರ್ಥಮಾಡಿಸಲು ಈ ದಿನ ಒಂದು ಪ್ರಯತ್ನ ಇದನ್ನು ವಿಶ್ವದಾದ್ಯಂತ ಆಚರಿಸುತ್ತಾರೆ.

ತಂಬಾಕು ಸೇವನೆಯಿಂದ ಆಗುತ್ತಿರುವ ಸಾವಿನ ಸಂಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ. ಧೂಮಪಾನ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ. ಹೀಗೆ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ ಇದರ ಚಟ ಇಲ್ಲದೆ ಇರುವ ಜನಕ್ಕೂ ಕಾಯಿಲೆಗಳನ್ನು ಬರಿಸುತ್ತದೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ. ತಂಬಾಕು ಹಾಗು ಅದರಿಂದ ತಯಾರಿಸುವ ವಸ್ತುಗಳಿಂದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸಲಾಗುತ್ತದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ