ಗುಟ್ಕಾ-ಪಾನ್ ಮಸಾಲ ಪ್ರೀಯರೇ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಜಗಿದರೆ ಬೀಳುತ್ತೆ ಕೇಸ್! ಇಂದು 32ಮಂದಿಯ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ-ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿಯ ವಿರುದ್ಧ ಕೇಸು ದಾಖಲಿಸಿದ್ದಾರೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಕೋಪ್ಟಾ -2003 ಕಾಯಿದೆ ಉಲ್ಲಂಘನೆ ವಿರುದ್ದ ನಗರದ ಹೊರವಲಯದ ದೇರಳಕಟ್ಟೆ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್‍ಸ್ಟಾಂಡ್, ರಸ್ತೆ ಬದಿಗಳಲ್ಲಿ, ಅಂಗಡಿ ವಠಾರ ಮತ್ತಿತರ ಸ್ಥಳಗಳಲ್ಲಿ ಹಲವು ಮಂದಿ ಬಹಿರಂಗವಾಗಿಯೇ ಪಾನ್ ಮಸಾಲೆ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನುತ್ತಿದ್ದವರ ವಿರುದ್ಧ ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿಕೊಂಡಿದೆ. ಒಟ್ಟು 32 ಪ್ರಕರಣ ದಾಖಲಿಸಿ ರೂ. 3100 ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಕೋಪ್ಟಾ ಕಾಯಿದೆಯ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನದಂತೆ ಗ್ರಾಹಕರಿಗೆ ಸೂಚಿಸಲು ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು. ಅಲ್ಲದೇ, ಈ ಕುರಿತು ಸಹಕರಿಸದಿದ್ದರೆ, ಕಾಯಿದೆಯನ್ವಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.

ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಅಧಿಕವಾಗಿದೆ. ಪ್ರಸಕ್ತ ಕೋವಿಡ್ ವ್ಯಾಪಕವಾಗಿರುವುದರಿಂದ ಈ ರೀತಿ ಪಾನ್ ಮಸಾಲೆ ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚು ಅಪಾಯಕಾರಿಯಾಗಿದೆ. ಇಂತಹ ಉಗುಳನ್ನು ಇತರ ಸಾರ್ವಜನಿಕರಿಗೆ ನಡೆದುಕೊಂಡು ಹೋಗುವಾಗ ಗೊತ್ತಿಲ್ಲದೇ ಮೆಟ್ಟುವುದರಿಂದ ಇದು ಸಾಂಕ್ರಾಮಿಕ ರೋಗ ಹಬ್ಬಲೂ ಕಾರಣವಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ಕೋಣಾಜೆ ಠಾಣಾ ಪೊಲೀಸ್ ಉಪನಿರೀಕ್ಷಕ ಶರಣಪ್ಪ , ಸಿಬ್ಬಂದಿ ಪುನೀತ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆಹಾರ ಸುರಕ್ಷತಾಧಿಕಾರಿಗಳು ತಿಳಿಸಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ