ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಟರ್ ಲಾರ್ವಾ ಸರ್ವೇ ನಡೆಸಿದ ಆರೋಗ್ಯ ಸೇನಾನಿಗಳು

ಬೆಳ್ತಂಗಡಿ: ಕೊರೋನಾ ಮಹಾಮಾರಿಯ ಬೆನ್ನಲೆ ಕಾಡುತ್ತಿದೆ ಡೆಂಗ್ಯೂ ಪ್ರಕರಣಗಳು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ನಿರ್ದೇಶನದಲ್ಲಿ, ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಡಿರುದ್ಯಾವರ ಪಂಚಾಯತ್ ಹಾಗೂ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರ ಸಹಕಾರದಲ್ಲಿ ಮಾಸ್ಟರ್ ಲಾರ್ವಾ ಸರ್ವೇಯನ್ನು ನಡೆಸಲಾಯಿತು.

ಮುಂಡಾಜೆ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ.ಕಾವ್ಯಾ ಹಾಗೂ ತಾಲೂಕು ಆರೋಗ್ಯ ಸಹಾಯಕ ಗಿರೀಶ್ ನೇತ್ರತ್ವ ವಹಿಸಿದ್ದರು.

ಮಾಸ್ಟರ್ ಲಾರ್ವಾ ಸರ್ವೇ:

ಮಳೆಗಾಲ ಆರಂಭಕ್ಕೆ ಆಯಾಯ ಗ್ರಾಮದ ವಾರ್ಡ್ ನ ಕಿರಿಯ ಆರೋಗ್ಯ ಸಹಾಯಕಿಯರು,ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಲಾರ್ವಾ ಸರ್ವೇ ನಡೆಸುತ್ತಾರೆ. ಆದರೆ ಈಗ ಪ್ರಕರಣಗಳು ಅಧಿಕಗೊಳ್ಳುತ್ತಿರುವ ಕಾರಣ, ಮುಂಡಾಜೆ ಪ್ರಾ.ಆ.ಕೇಂದ್ರದ 5 ಉಪ ಆರೋಗ್ಯ ಕೇಂದ್ರಗಳ ಕಿರಿಯ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರನ್ನು ಒಂದೆಡೆ ಸೇರಿಸಿ ಇಲ್ಲಿ ಮಾಸ್ಟರ್ ಲಾರ್ವಾ ಸರ್ವೇ ನಡೆಸಲಾಯಿತು. ಇವರು ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಲಾರ್ವಾ ಉತ್ಪತ್ತಿಯಾಗುವ ಸ್ಥಳಗಳನ್ನು ಪತ್ತೆ ಹಚ್ಚಿ ಮುನ್ನೆಚ್ಚರಿಕೆ ಕೈಗೊಳ್ಳುತ್ತಾರೆ.

“ನೀರು ನಿಲ್ಲದಂತೆ ಎಚ್ಚರ ವಹಿಸಿ”

“ಈಗಾಗಲೇ ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ಶಿಬಿರ, ಲಾರ್ವಾ ಸಮೀಕ್ಷೆ ನಡೆಸಲಾಗಿದೆ. ಈ ಬಾರಿ ಮಳೆಗಾಲ ಇನ್ನೂ ಕೂಡ ಸರಿಯಾಗಿ ಆರಂಭವಾಗದ ಕಾರಣ ಈಗಿನ ಮಳೆ ಬಿಸಿಲಿನ ವಾತಾವರಣ ಲಾರ್ವಾ ಉತ್ಪತ್ತಿಗೆ ಪೂರಕವಾಗಿದೆ. ಸಾರ್ವಜನಿಕರು ತಮ್ಮ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ ಸ್ವಚ್ಛತೆ ಕಾಪಾಡುವುದು ಅತೀ ಅಗತ್ಯ”

ಡಾ.ಕಾವ್ಯಾ,
ವೈದ್ಯಾಧಿಕಾರಿ,
ಪ್ರಾ.ಆ.ಕೇಂದ್ರ, ಮುಂಡಾಜೆ

ಎಲ್ಲೆಂದರಲ್ಲಿ ಎಸೆಯುತ್ತಿರುವ ತ್ಯಾಜ್ಯ:

ಕಡಿರುದ್ಯಾವರ ಗ್ರಾಮದ ಮುಖ್ಯ ರಸ್ತೆ ಬದಿಗಳ ಮನೆಗಳಿರುವ ಪ್ರದೇಶದಲ್ಲಿ ಹಲವು ಸಮಯದಿಂದ ಇರುವ ಬಾಟಲಿ, ಪ್ಲಾಸ್ಟಿಕ್ ಮೊದಲಾದ ತ್ಯಾಜ್ಯ ತಂದು ಹಾಕಿದ್ದು ಅದನ್ನು ವಿಲೇವಾರಿ ಮಾಡಲಾಗಿಲ್ಲ.ಇದು ಸಾಂಕ್ರಾಮಿಕ ರೋಗ ಹರಡಲು ಮೂಲ ಕಾರಣವೆಂದು ಸ್ಥಳೀಯರು ಹೇಳುತ್ತಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ