7ಹೆಜ್ಜೆ ಇಡಲು 17 ಸೂತ್ರ ಪಾಲಿಸುವಂತೆ ರಾಜ್ಯ ಸರಕಾರದ ಮಹತ್ತರದ ಆದೇಶ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ರಾಜ್ಯಾದ್ಯಂತ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವು ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಈಗಾಗಲೇ, ಮದುವೆ ಸಮಾರಂಭದಲ್ಲಿ ಐವತ್ತು ಜನರು ಮೀರಿ ಭಾಗವಹಿಸುವಂತಿಲ್ಲ ಎನ್ನುವ ಆದೇಶವನ್ನು ಸರಕಾರ ಹೊರಡಿಸಿದೆ. ಜೊತೆಗೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಬರುವುದು ಮತ್ತು ಮಾಸ್ಕ್ ಧರಿಸುವುದನ್ನೂ ಈ ಹಿಂದೆಯೇ ಖಡ್ಡಾಯ ಮಾಡಲಾಗಿತ್ತು.

ಯಾವುದೇ ಮದುವೆಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಅನುಮತಿ ಕಡ್ಡಾಯ.

ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧ.

ಕಂಟೈನ್ಮೆಂಟ್ ವಲಯದವರಿಗೆ ಪ್ರವೇಶ ನಿರ್ಬಂಧ.

ಸೂಕ್ತ ಸಾರ್ವಜನಿಕ ಸ್ಥಳ ಮತ್ತು ನೈಸರ್ಗಿಕ ವಾತಾವರಣ ಇರುವೆಡೆ ಮಾತ್ರ ಮದುವೆಗೆ ಅವಕಾಶ

ಮದುವೆಗಳಲ್ಲಿ ಹವಾನಿಯಂತ್ರಿತಗಳನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿ ಇರುವುದು ಕಡ್ಡಾಯವಾಗಿದೆ

ಮದುವೆಗೆ ಬಂದವರ ಲಿಸ್ಟ್ ಮಾಡಿ ನೋಡಲ್ ಅಧಿಕಾರಿಗೆ ಸಲ್ಲಿಸುವುದು ಕಡ್ಡಾಯ

ಮದುವೆಗೆ ಬರುವವರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು

ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯ.

ಮದುವೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ. 99.5 ಸೆಲ್ಸಿಯಸ್ ಉಷ್ಣತೆ, ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರೋರನ್ನು ನಿರ್ಬಂಧಿಸಿ ಅವರನ್ನು ಆಸ್ಪತ್ರೆಗೆ ಕಳಿಸಬೇಕು.

ಒಂದು ಮೀಟರ್ ವೈಯುಕ್ತಿಕ ಅಂತರ ಕಾಪಾಡಿಕೊಳ್ಳಬೇಕು.

ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಮಾಡಿರಬೇಕು

ಸಾರ್ವಜನಿಕವಾಗಿ ಉಗುಳುವಂತಿಲ್ಲ.

ಮದುವೆ ಸ್ಥಳಗಳಲ್ಲಿ ಸ್ವಚ್ಛತೆಯನ್ನ ಕಾಪಾಡಬೇಕು.

ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.

ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಮೇ 18ರಿಂದ ಲಾಕ್ ಡೌನ್ ನಲ್ಲಿ ಇನ್ನಷ್ಟು ಸಡಿಲಿಕೆ ಆಗಲಿದೆ. ಇದೇ ವೇಳೆ ರಾಜ್ಯದ ವಿವಿಧೆಡೆಗಳಲ್ಲಿ ಮದುವೆ ಸೀಜನ್ ಕೂಡ ಆರಂಭವಾಗಿದ್ದು, ಕೊರೊನಾ ಸೋಂಕು ನಿಯಂತ್ರಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಪ್ತಪದಿಗೆ 17 ಮಾರ್ಗಸೂಚಿಯನ್ನು ರೂಪಿಸಿ, ಮದುವೆಯಲ್ಲಿಯೂ ಸಾಮಾಜಿಕ ಅಂತರ ಕಡ್ಡಾಯವಾಗಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ಬಗ್ಗೆ ನಿಯಮಗಳು ಜಾರಿ ಮಾಡಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 331 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ