ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ.…

    Spread the love

    ದೇವರ ಕೋಣೆಯಲ್ಲಿ ಯಾವ ಅಗರಬತ್ತಿಯನ್ನು ಯಾಕೆ ಹಚ್ಚಿಡಬೇಕು.? ಇದರ ಪ್ರಯೋಜನವೇನು ? ಯಾವ ಅಗರಬತ್ತಿಯನ್ನು ಹಚ್ಚಬಾರದು? ಇದರ ದುಷ್ಪರಿಣಾಮವೇನು ?

    ಹಿಂದೂ ಧರ್ಮದಲ್ಲಿ ಪ್ರತಿದಿನವೂ ದೇವರ ಕೋಣೆಯಲ್ಲಿ ಅಗರಬತ್ತಿಯನ್ನು ಹಚ್ಚುತ್ತಾರೆ. ಕೆಲವರು ಇದರ ಪ್ರಯೋಜನವನ್ನು ಅರಿತು ಅಗರಬತ್ತಿಯನ್ನು ಹಚ್ಚಿಟ್ಟರೆ, ಇನ್ನೂ ಕೆಲವರು ಇದರ ಪ್ರಯೋಜನವನ್ನು ತಿಳಿಯದೆಯೂ ದೇವರಿಗೆಂದು ಅಗರಬತ್ತಿಯನ್ನು ಹಚ್ಚಿಡುತ್ತಾರೆ. ದೇವರ ಕೋಣೆಯಲ್ಲಿ ಯಾವ ಅಗರಬತ್ತಿಯನ್ನು ಯಾಕೆ ಹಚ್ಚಿಡಬೇಕು.? ಇದರ ಪ್ರಯೋಜನವೇನು ?…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 265 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ