ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ
ದಕ್ಷಿಣಾಯನ ಪುಣ್ಯಕಾಲ
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಬುಧವಾರ, ವಿಶಾಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20

ಮೇಷ

ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ.

ವೃಷಭ

ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದ ಅಶುಭ ಸಮಾಚಾರ ಸಿಗಲಿದೆ.

ಮಿಥುನ

ಹಿರಿಯರೊಂದಿಗೆ ಶಾಂತತೆಯಿಂದ ವ್ಯವಹರಿಸುವುದು ಉತ್ತಮ. ವೃಥಾ ಖರ್ಚು. ಸಾಮಾಜಿಕ ಕಾರ್ಯಗಳಲ್ಲಿ ಹೊಂದಾಣಿಕೆ ಅವಶ್ಯ. ಕಿವಿ, ಗಂಟಲು ನೋವುಗಳು ನಿಮ್ಮನ್ನು ಪೀಡಿಸುವ ಸಾಧ್ಯತೆ.

ಕಟಕ

ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯಿಂದಾಗಿ ಉತ್ತಮ ಆದಾಯ. ಪ್ರತಿಯೊಂದು ವಿಷಯದಲ್ಲೂ ನೀವು ತೆಗೆದುಕೊಳ್ಳುವ ನಿರ್ಧಾರವೇ ಸರಿಯಾಗಿರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ.

ಸಿಂಹ

ಆರ್ಥಿಕ ಪ್ರಗತಿ ಉತ್ತಮಗೊಂಡು ಸಂತೋಷ ಮೂಡುವುದು. ಶತ್ರುಗಳ ವಿರುದ್ಧ ಜಯ. ಬಹಳ ದಿನಗಳ ಸಮಸ್ಯೆಗಳು ಪರಿಹಾರವಾಗಿ ನಿರಾಳತೆ ತಲೆದೋರುವುದು. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.

ಕನ್ಯಾ

ಸಂಕಷ್ಟಗಳು ಪರಿಹಾರವಾಗಲಿವೆ. ಹಿಂದಿನ ಕೆಲಸಗಳಿಗೆ ಪುನಃ ಚಾಲನೆ ದೊರೆತು ಪ್ರಗತಿ ಪಥದಲ್ಲಿ ಸಾಗುವವು. ದುಡುಕುತನದಿಂದಾಗಿ ಉದ್ವೇಗಗೊಳ್ಳುವುದರಿಂದ ಸಮಸ್ಯೆಗಳು ತಲೆದೋರಬಹುದು. ದುರ್ಗಾಸ್ತೋತ್ರ ಪಠಿಸಿ.

ತುಲಾ

ಕೆಲಸ–ಕಾರ್ಯಗಳಲ್ಲಿ ಮಂದಗತಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ. ಹೊಸ ಕೆಲಸಗಳನ್ನು ಪ್ರಾರಂಭಿಸುವುದು ಬೇಡ. ಅಪವಾದಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಧೃತಿಗೆಡಬೇಕಾಗಿಲ್ಲ.

ವೃಶ್ಚಿಕ

ಕಣ್ಣು ಅಥವಾ ತಲೆನೋವು ತೀವ್ರವಾಗಿ ಕಾಡುವ ಸಾಧ್ಯತೆ. ವೃಥಾ ವಾದವಿವಾದದಿಂದಾಗಿ ಅನಗತ್ಯ ವೈರತ್ವ ಉಂಟಾಗಬಹುದು. ಅಯೋಗ್ಯರೊಂದಿಗೆ ಯಾವುದೇ ಕಾರಣಕ್ಕೂ ವ್ಯವಹಾರ ಬೇಡ.

ಧನು

ಆರ್ಥಿಕ ಸುಧಾರಣೆ. ಧಾರ್ಮಿಕ ಕಾರ್ಯಗಳಿಗೆ ಖರ್ಚುಮಾಡುವ ಸಾಧ್ಯತೆ ಇದ್ದು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಸಾಧಿಸಿ ಕೀರ್ತಿ ಸಂಪಾದನೆ. ಧೈರ್ಯದಿಂದ ಎದುರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಮಕರ

ಸ್ವಂತ ಉದ್ಯೋಗಿಗಳು ಹಾಗೂ ನೌಕರಿಯಲ್ಲಿರುವವರು ತಮ್ಮ ನಡೆ ನುಡಿ, ಕೆಲಸಗಳ ಬಗ್ಗೆ ಜಾಗ್ರತೆಯಿಂದಿರುವುದು ಸೂಕ್ತ. ಚಿಕ್ಕ ತಪ್ಪಿಗೂ ಮಹತ್ತರ ದಂಡ ತೆರಬೇಕಾದೀತು. ಉತ್ತಮ ಅವಕಾಶಗಳು ಬಂದೊದಗುವವು.

ಕುಂಭ

ಅಶುಭ ಸ್ವಪ್ನಗಳಿಂದಾಗಿ ಮಾನಸಿಕ ಚಂಚಲತೆ. ನಿರಾಸೆಯಿಂದಾಗಿ ದುಃಖದ ಅನುಭವ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಬೇರೆಯವರ ಅಪಹಾಸ್ಯಕ್ಕೆ ಒಳಗಾಗುವ ಸಾಧ್ಯತೆ. ಈಶ್ವರನ ಆರಾಧನೆ ಮಾಡಿ.

ಮೀನ

ಆದಾಯ ಮತ್ತು ಉಳಿಕೆಗಳಲ್ಲಿ ಪ್ರಗತಿಯಿರುವುದು. ಆರೋಗ್ಯದಲ್ಲಿ ಸುಧಾರಣೆ. ಸಂಬಂಧಿಗಳಲ್ಲಿ ವಂಶವೃದ್ಧಿಯ ಶುಭ ಸಂದೇಶ ಕೇಳಲಿದ್ದೀರಿ. ನಿಂತುಹೋದ ಕೆಲಸಗಳಿಗೆ ಮರುಚಾಲನೆ ದೊರೆಯುವ ಸಾಧ್ಯತೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ