ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ

✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ

ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ ತಪ್ಪಿನ ಪ್ರಾಯಶ್ಚಿತಕ್ಕಾಗಿ ಜೈಲುವಾಸ ಅನುಭವಿಸಿ ಹೊರಬಂದಿರುವುದು ಹಳೆ ಕಥೆಯಾದರೆ,ಈ ಬಾರಿ ಸದ್ದು ಮಾಡುತ್ತಿರುವುದು ಅಕ್ರಮ ಕಲ್ಲು ಗಣಿಗಾರಿಕೆಯ ವಿಚಾರ.

ಅಕ್ರಮ ಕಲ್ಲು ಗಣಿಗಾರಿಕೆಯ ತೀವ್ರತೆ ಎಷ್ಟರಮಟ್ಟಿಗೆ ವ್ಯಾಪಿಸಿದೆಯೆಂದರೆ ಕಳೆದ ವರ್ಷ ಗ್ರಾಮೀಣ ಭಾಗದ ಸರಕಾರಿ ಶಾಲೆಯೊಂದರ ಅಣತಿ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆಸಿರುವುದರಿಂದ ಇದರ ತೀವ್ರತೆಗೆ ಶಾಲೆಯೇ ಅದುರಿ ಹೋಗಿ ವಿದ್ಯಾರ್ಥಿಗಳು ಆತಂಕದಲ್ಲೇ ಪಾಠ ಆಲಿಸಬೇಕಾದ ಸಂದಿಗ್ಧ ಸ್ಥಿತಿ ಬಂದೊದಗಿತ್ತು. ಗಂಭೀರತೆ ಅರಿತ ಮುಖ್ಯೋಪಾಧ್ಯಾಯರು ಸಂಬಂಧಪಟ್ಟವರಿಗೆ ದೂರು ಸಲ್ಲಿಸಿದ ಬೆನ್ನಲ್ಲೇ ದಂಧೆಯಲ್ಲಿ ತೊಡಗಿದ್ದ ಪ್ರಭಾವಿ ವ್ಯಕ್ತಿಗಳಿಂದ ಮತ್ತು ಗೂಂಡಾಗಳಿಂದ ಜೀವಬೆದರಿಕೆ ಎದುರಿಸಬೇಕಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಗುಡ್ಡಪ್ರದೇಶದ ಮೇಲಿರುವ ಇತಿಹಾಸ ಪ್ರಸಿದ್ಧ ಭೂಕೈಲಾಸನಾಥ ಪ್ರತೀತಿಯ ಕಾರೀಂಜೇಶ್ವರ ದೇವಾಲಯದ ಬಳಿ ಜಿಲೆಟಿನ್ ಬಳಸಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದರಿಂದ ಇದರ ಸ್ಪೋಟಕ್ಕೆ ದೇವಾಲಯದ ಸುತ್ತಮುತ್ತ ಬಿರುಕು ಉಂಟಾಗಿ ದೇವಾಲಯದ ಸ್ಥಿತಿ ಆತಂಕದಲ್ಲಿತ್ತು. ಮಂಡ್ಯ ಜಿಲ್ಲೆಯ ಮದ್ದೂರು, ಚಂದಳ್ಳಿ,ಕೋಳಿಗುಡ್ಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುವ ಈ ಕಲ್ಲು ಗಣಿಗಾರಿಕೆಯಿಂದ ಸುಂದರ ಇತಿಹಾಸ ಪ್ರಸಿದ್ಧ ಬೆಟ್ಟಗುಡ್ಡಗಳು ಬಗೆದು ನೆಲಸಮಗೊಂಡಿರುವುದು ಒಂದೆಡೆಯಾದರೆ ನದಿಗಳು ಮಲೀನಗೊಳ್ಳುವುದು, ಸ್ಫೋಟಕ್ಕೆ ರಾಸಾಯನಿಕ ವಸ್ತುಗಳ ಬಳಕೆಯಿಂದ ಧೂಳು ಮುಂತಾದ ಕಾರಣಕ್ಕೆ ಕೃಷಿ ಚಟುವಟಿಕೆಗಳಿಗೆ ಹಾನಿಯಾಗುತ್ತಿರುವುದು ಕಂಡು ಬರುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲೂ ಪ್ರಭಾವಿ ರಾಜಕಾರಣಿಯೋರ್ವರ ಪುತ್ರ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದು, ಇವುಗಳ ಪೈಕಿ ಗುತ್ತಿಗೆ ಪಡೆದುಕೊಂಡಿದ್ದರೂ ಫಹಣಿಯಲ್ಲಿ ನಮೂದಾಗದಿರುವುದು ಅಕ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ದಂಧೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದು, ಕೆಲ ಜಿಲ್ಲಾಡಳಿತ, ಅರಣ್ಯ, ಕಂದಾಯ, ಗಣಿ ಇಲಾಖೆಗಳ ನೆರಳಿನಡಿಯಲ್ಲೇ ಸಾಗಿ ಇಲಾಖೆಗಳು ಕಣ್ಣಿದ್ದೂ ಕುರುಡಾಗುತ್ತಿವೆ. ಪ್ರಕೃತಿದತ್ತವಾಗಿ ಸಿಗುವ ಸಂಪನ್ಮೂಲಗಳಾದ ಕಾಡು ಭೂಮಿ, ನದಿ,ಕೆರೆ ಇವುಗಳನ್ನು ಒತ್ತುವರಿ ಮಾಡಿಕೊಂಡು ರಾಜಕಾರಣಿಗಳು ಇದ್ಯಾವುದನ್ನೂ ಬಿಡುತ್ತಿಲ್ಲ. ದೂರದ ತಮಿಳುನಾಡು, ಆಂಧ್ರಪ್ರದೇಶ,ಬಿಹಾರ ಸೇರಿದಂತೆ ಹೊರಜಿಲ್ಲೆಯ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಸ್ಪೋಟ ನಡೆಸುವಂತಹ ಅಪಾಯಕಾರಿ ಕಾರ್ಯಗಳಿಗೆ ಬಳಸಿಕೊಂಡು ತಮ್ಮ ಆಯುಷ್ಯವನ್ನು ಇಲ್ಲೇ ಕಳೆದುಕೊಳ್ಳುವ ಕಾರ್ಮಿಕರು ಜೀವನಭದ್ರತೆಯಿಲ್ಲದೆ ಸ್ಪೋಟಕ್ಕೆ ಸಾವನ್ನಪ್ಪಿದ ನೂರಾರು ನಿದರ್ಶನಗಳಿವೆ.

ಇದಕ್ಕೆ ಪೂರಕವೆಂಬಂತೆ ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಹುಣಸೋಡು ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ನಡೆದ ದುರಂತವೇ ಸಾಕ್ಷಿ. ಈಗಾಗಲೇ ಹಲವೆಡೆ ನಡೆಯುತ್ತಿರುವ ಕಾನೂನು ಬಾಹಿರ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ ಮತ್ತು ಎಲ್ಲೆಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆಯೋ ಅದನ್ನು ತಡೆಯಲು ಬಿಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ತಿಳಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಾದ ಹೊಣೆ ರಾಜ್ಯ ಸರಕಾರದ ಮೇಲಿದೆ. ಇಂತಹ ಚಟುವಟಿಕೆಯ ಹೆಸರಿನಲ್ಲಿ ನಡೆಯುವ ಗೂಂಡಾಗಿರಿ,ರೌಡಿಸಂ ಚಟುವಟಿಕೆಗಳಿಗೂ ಸರಕಾರ ಕಡಿವಾಣ ಹಾಕುವುದರೊಂದಿಗೆ ಅಪರಾಧ ಹಿನ್ನೆಯುಳ್ಳವರಿಗೆ ಇಂತಹ ಚಟುವಟಿಕೆಗಳಿಗೆ ಪರವಾನಗಿ ನೀಡದೆ, ಪ್ರಕೃತಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟವುಂಟುಮಾಡುವ, ಪ್ರಾಣ ಹಾನಿ ಉಂಟು ಮಾಡುವ ಸ್ಪೋಟಕ ಬಳಕೆಗೆ ಸರಕಾರ ಅಗತ್ಯ ಕಡಿವಾಣ ಹಾಕಬೇಕಾಗಿದೆ.


Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 252 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 295 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ