‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ಕಾಯಿದೆ – 2020’ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ವಿಪಕ್ಷಗಳು ಹಾಗೂ ರೈತರ ತೀವ್ರ ವಿರೋಧದ ನಡುವೆಯೇ ಡಿ.9 ರಂದು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ ‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ಕಾಯಿದೆ – 2020’ ವಿಧೇಯಕಕ್ಕೆ (ಎಪಿಎಂಸಿ ತಿದ್ದುಪಡಿ) ರಾಜ್ಯಪಾಲ ವಿ.ಆರ್‌. ವಾಲಾ ಅವರು ಅಂಕಿತ ಹಾಕಿದ್ದಾರೆ.

1966ರ ಕಾಯಿದೆಯನ್ನು ತಿದ್ದುಪಡಿ ಮಾಡಿದ್ದು ಕಾಯಿದೆಯ 27 (2) ನಿಯಮದ ಪ್ರಕಾರ ಮಾರುಕಟ್ಟೆಯ ಸಮಿತಿಯು ಮಾರುಕಟ್ಟೆಪ್ರಾಂಗಣಗಳಲ್ಲಿ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸಬೇಕು ಎಂಬ ನಿಯಮವನ್ನು ಉಳಿಸಿಕೊಳ್ಳಲಾಗಿದೆ. ಆದರೆ, 27(3) ನಿಯಮವನ್ನು ಕೈ ಬಿಟ್ಟಿದ್ದು ಈ ಮೂಲಕ ಮಾರುಕಟ್ಟೆಪ್ರಾಂಗಣದ ಹೊರಗಡೆ ನಡೆಯುವ ಕೃಷಿ ಉತ್ಪನ್ನ ಮಾರಾಟ ಅಥವಾ ವಹಿವಾಟುಗಳನ್ನು ನಿಯಂತ್ರಿಸುವ ಹಕ್ಕನ್ನು ಮಾರುಕಟ್ಟೆಸಮಿತಿಗಳಿಂದ ಕಿತ್ತುಕೊಳ್ಳಲಾಗಿದೆ.

117ನೇ ನಿಯಮದ ತಿದ್ದುಪಡಿಯಂತೆ ಎಪಿಎಂಸಿ ಮಾರುಕಟ್ಟೆಗಳಲ್ಲದೆ ಯಾವುದೇ ವ್ಯಕ್ತಿಯು ಸ್ಥಳೀಯ ನಿಯಮಗಳನ್ನು ಪಾಲಿಸಿ ಮಾರುಕಟ್ಟೆಸ್ಥಳವನ್ನು ಸೃಷ್ಟಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ಎರಡನೇ ತಿದ್ದುಪಡಿ)ಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ತೀವ್ರ ವಿರೋಧದ ನಡುವೆಯೇ ಎಪಿಎಂಸಿ ಸುಧಾರಣೆ ಕಾಯಿದೆ ರಾಜ್ಯದಲ್ಲಿ ಅಂತಿಮ ಅಂಗೀಕಾರ ಪಡೆದಂತಾಗಿದೆ.

ಈ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರುವ ಹಾಗೂ ಖರೀದಿದಾರರು ಮುಕ್ತವಾಗಿ ಖರೀದಿ ಮಾಡುವ ಎಪಿಎಂಸಿ ತಿದ್ದುಪಡಿ ಕಾಯಿದೆ ಅನುಷ್ಠಾನಗೊಂಡಂತಾಗಿದೆ.

ಡಿ.9 ರಂದು ತಡರಾತ್ರಿವರೆಗೆ ಬಿಜೆಪಿ ಸರ್ಕಾರದ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್‌ನಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಸದಸ್ಯರು ವಿರೋಧಿಸಿದ್ದರು. ತಡರಾತ್ರಿ ಧ್ವನಿಮತದ ಮೂಲಕ ಸರ್ಕಾರ ಅಂಗೀಕಾರ ಪಡೆದಿತ್ತು. ಈ ವೇಳೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಎಪಿಎಂಸಿ ತಿದ್ದುಪಡಿಯಿಂದ ಯಾವುದೇ ಎಪಿಎಂಸಿಗಳನ್ನು ಮುಚ್ಚುವುದಿಲ್ಲ. ಎಪಿಎಂಸಿ ಆಸ್ತಿಗಳ್ನೂ ಪರಭಾರೆ ಮಾಡುವುದಿಲ್ಲ. ರೈತರಿಗೆ ಮುಕ್ತವಾಗಿ ಕೃಷಿ ಉತ್ಪನ್ನ ಮಾರಾಟ ಮಾಡಲು ತಿದ್ದುಪಡಿಯಿಂದ ಅವಕಾಶ ಸಿಗಲಿದೆ. ಜೊತೆಗೆ ಬೆಂಬಲ ಬೆಲೆ ವ್ಯವಸ್ಥೆಯನ್ನು ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ