ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ.
ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ ವರ್ಷ ಕೊರೋನಾ ವಿಷಾಣುಗಳ ಸಂಕಟದಿಂದಾಗಿ ಸಂಚಾರ ಸಾರಿಗೆ ನಿರ್ಬಂಧವಿದ್ದುದರಿಂದ ಮನೆಯಿಂದ ಹೊರಗೆ ಬರಲು ಅನೇಕ ಬಂಧನಗಳಿವೆ.

ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಈ ಉತ್ಸವವನ್ನು ಆಚರಿಸುವಲ್ಲಿ ಮಿತಿ ಬಂದಿದೆ. ಕೊರೋನಾ ವೈರಾಣುಗಳ ಹರಡುವಿಕೆಯಿಂದಾಗಿ ಎಲ್ಲಿ ಸಂಚಾರಸಾರಿಗೆ ನಿರ್ಬಂಧವಿದೆಯೋ (ಲಾಕ್‌ಡೌನ್) ಅಲ್ಲಿ ಒಟ್ಟಾಗಿ ಸೇರಿ ಪೂಜೆ ಮಾಡುವುದು ಅಸಾಧ್ಯವಿದೆ. ಆದರೆ ಎಲ್ಲಿ ಕೊರೋನಾ ವಿಷಾಣುಗಳ ಹರಡುವಿಕೆ ಕಡಿಮೆಯಿರುವುದರಿಂದ ಸಂಚಾರಸಾರಿಗೆ ನಿರ್ಬಂಧದ ನಿಯಮವು ಕೆಲವು ಪ್ರಮಾಣದಲ್ಲಿ ಸಡಿಲ ಗೊಳಿಸಲಾಗಿದೆಯೋ, ಅಲ್ಲಿ ಸರಕಾರವು ಕೊರೋನಾ ಸಂದರ್ಭದಲ್ಲಿ ಹೇಳಿದ ಮಾರ್ಗದರ್ಶಕ ಅಂಶಗಳನ್ನು ಪಾಲಿಸಿ ಕಡಿಮೆ ಜನರು ಸೇರಿ ಈ ಜನ್ಮೋತ್ಸವವನ್ನು ಆಚರಿಸಬೇಕು. ಇದರಿಂದ ಒಟ್ಟಿಗೆ ಸೇರದಿದ್ದರೂ ನಮ್ಮ ನಮ್ಮ ಮನೆಯಲ್ಲಿಯೇ ಶ್ರೀಕೃಷ್ಣಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬಹುದು ಎಂಬ ಬಗ್ಗೆ ಈ ಲೇಖನದಲ್ಲಿ ಮುಖ್ಯವಾಗಿ ವಿಚಾರ ಮಾಡಲಾಗಿದೆ. ಹಿಂದೂ ಧರ್ಮವು ಹೇಳಿದ ‘ಆಪದ್ಧರ್ಮದ ಭಾಗವೆಂದು ಲೇಖನದಲ್ಲಿ ವಿವೇಚನೆಯನ್ನು ಮಾಡಲಾಗಿದೆ.

ಪ್ರತಿ ವರ್ಷ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಈ ವರ್ಷ 11.8.2020 ಈ ದಿನದಂದು ‘ಶ್ರೀಕೃಷ್ಣ ಜನ್ಮಾಷ್ಟಮಿ ಇದೆ.

೧. ಶ್ರೀಕೃಷ್ಣನ ಪೂಜೆಯ ಸಮಯ : ಶ್ರೀಕೃಷ್ಣನ ಜನ್ಮದ ಸಮಯವು ರಾತ್ರಿ 12 ಗಂಟೆಗಿರುತ್ತದೆ. ಆದುದರಿಂದ ಅದಕ್ಕೂ ಮೊದಲು ಪೂಜೆಯ ಎಲ್ಲ ತಯಾರಿಯನ್ನು ಮಾಡಿಟ್ಟು ಕೊಳ್ಳಬೇಕು. ರಾತ್ರಿ 12 ಗಂಟೆಗೆ ಸಾಧ್ಯವಿದ್ದರೆ ಶ್ರೀಕೃಷ್ಣಜನ್ಮದ ಜೋಗುಳವನ್ನು (ಹಾಡನ್ನು) ಹಚ್ಚಬೇಕು.

೨. ಶ್ರೀಕೃಷ್ಣನ ಪೂಜೆ

೨ ಅ. ಶ್ರೀಕೃಷ್ಣಜನ್ಮದ ಜೋಗುಳವಾದ ನಂತರ ಶ್ರೀಕೃಷ್ಣನ ಮೂರ್ತಿ ಅಥವಾ ಚಿತ್ರದ ಪೂಜೆಯನ್ನು ಮಾಡಬೇಕು.

೨ ಆ. ಷೋಡಷೋಪಚಾರ ಪೂಜೆ : ಯಾರಿಗೆ ಶ್ರೀಕೃಷ್ಣನ ‘ಷೋಡಷೋಪಚಾರ ಪೂಜೆ’ಯನ್ನು ಮಾಡುವುದು ಸಾಧ್ಯವಿದೆಯೋ, ಅವರು ಷೋಡಷೋಪಚಾರ ಪೂಜೆಯನ್ನು ಮಾಡಬೇಕು.

೨ ಇ. ಪಂಚೋಪಚಾರ ಪೂಜೆ : ಯಾರಿಗೆ ಶ್ರೀಕೃಷ್ಣನ ‘ಷೋಡಷೋಪಚಾರ ಪೂಜೆ’ಯನ್ನು ಮಾಡುವುದು ಸಾಧ್ಯವಿಲ್ಲವೋ, ಅವರು ‘ಪಂಚೋಪಚಾರ ಪೂಜೆ’ಯನ್ನು ಮಾಡಬೇಕು. ಪೂಜೆಯನ್ನು ಮಾಡುವಾಗ ‘ಸಪರಿವಾರಾಯ ಶ್ರೀಕೃಷ್ಣಾಯ ನಮಃ |’ ಈ ನಾಮಮಂತ್ರವನ್ನು ಹೇಳುತ್ತಾ ಒಂದೊಂದು ಉಪಚಾರವನ್ನು ಶ್ರೀಕೃಷ್ಣ ನಿಗೆ ಅರ್ಪಿಸಬೇಕು. ಶ್ರೀಕೃಷ್ಣನಿಗೆ ಮೊಸರವಲಕ್ಕಿ ಮತ್ತು ಬೆಣ್ಣೆಯ ನೈವೇದ್ಯವನ್ನು ತೋರಿಸಬೇಕು. ತದನಂತರ ಶ್ರೀಕೃಷ್ಣನಿಗೆ ಆರತಿಯನ್ನು ಮಾಡಬೇಕು. (ಪಂಚೋಪಚಾರ ಪೂಜೆ : ಗಂಧ, ಅರಿಶಿಣ-ಕುಂಕುಮ, ಪುಷ್ಪ, ಧೂಪ, ದೀಪ ಮತ್ತು ನೈವೇದ್ಯ ಈ ಕ್ರಮದಲ್ಲಿ ಪೂಜೆಯನ್ನು ಮಾಡಬೇಕು.)

೩. ಶ್ರೀಕೃಷ್ಣನ ಮಾನಸಪೂಜೆ
ಏನಾದರೂ ಕಾರಣದಿಂದ ಶ್ರೀಕೃಷ್ಣನ ಪ್ರತ್ಯಕ್ಷ ಪೂಜೆಯನ್ನು ಮಾಡಲು ಸಾಧ್ಯವಿಲ್ಲದಿದ್ದರೆ, ಶ್ರೀಕೃಷ್ಣನ ‘ಮಾನಸಪೂಜೆ’ಯನ್ನು ಮಾಡಬೇಕು. (‘ಮಾನಸಪೂಜೆ’ ಎಂದರೆ ಪೂಜೆಯ ಎಲ್ಲ ಉಪಚಾರಗಳನ್ನು ಮನಸ್ಸಿನಿಂದ ಶ್ರೀಕೃಷ್ಣನಿಗೆ ಅರ್ಪಿಸುವುದು.)

೪. ಪೂಜೆಯ ನಂತರ ನಾಮಜಪ ಮಾಡುವುದು
ಪೂಜೆಯಾದ ನಂತರ ಕೆಲವು ಸಮಯ ಶ್ರೀಕೃಷ್ಣನ ‘ಓಂ ಓಂ ನಮೋ ಭಗವತೇ ವಾಸುದೇವಾಯ ನಮಃ ಓಂ ಓಂ |’ ಈ ನಾಮಜಪವನ್ನು ಮಾಡಬೇಕು.

೫. ‘ಅರ್ಜುನನಂತೆ ಅಪಾರ ಭಕ್ತಿ ನಿರ್ಮಾಣವಾಗಲಿ’, ಎಂದು ಶ್ರೀಕೃಷ್ಣನಿಗೆ ಮನಃಪೂರ್ವಕ ಪ್ರಾರ್ಥನೆ ಮಾಡುವುದು.
ಇದರ ನಂತರ ಶ್ರೀಕೃಷ್ಣನು ಶ್ರೀಮದ್ಭಗವದ್ಗೀತೆ ಯಲ್ಲಿ ನೀಡಿದ ‘ನ ಮೇ ಭಕ್ತಃ ಪ್ರಣಶ್ಯತಿ |’ ಅಂದರೆ ‘ನನ್ನ ಭಕ್ತರ ನಾಶವಾಗುವುದಿಲ್ಲ.’ ಈ ವಚನವನ್ನು ಸ್ಮರಿಸಿ ನಮ್ಮಲ್ಲಿ ‘ಅರ್ಜುನನಂತೆ ಅಪಾರ ಭಕ್ತಿ ನಿರ್ಮಾಣವಾಗಲಿ’, ಎಂದು ಶ್ರೀಕೃಷ್ಣನಿಗೆ ಮನಃಪೂರ್ವಕ ಪ್ರಾರ್ಥನೆಯನ್ನು ಮಾಡಬೇಕು.

ಸೌಜನ್ಯ : ಸನಾತನ ಸಂಸ್ಥೆ

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 268 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ