ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ : ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ  ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ  ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಭಾನುವಾರ, ಉಡುಪಿಯಲ್ಲಿ, 395 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ  ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರವು ಮಾಲಿನ್ಯ ಹೆಚ್ಚಿರುವ ದೇಶದ ಪ್ರಮುಖ ನಗರಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಎಲೆಕ್ಟ್ರಿಕ್ ಬಸ್ ಗಳ ಬಳಕೆ ಮಾಡುವ ಕುರಿತಂತೆ ಪ್ರೋತ್ಸಾಹ ನೀಡುತ್ತಿದ್ದು, ಇದಕ್ಕಗಿ ಬಸ್ ಖರೀದಿಗೆ 55 ಲಕ್ಷ ರೂ ಸಬ್ಸಿಡಿ ನೀಡಲಿದೆ, ಅದೇ ರೀತಿ ರಾಜ್ಯವೂ ಸಹ ಪ್ರತೀ ಬಸ್ ಗೆ 33 ಲಕ್ಷ ರೂ ಸಬ್ಸಿಡಿ ನೀಡಲಿದ್ದು, ಒಂದು ಎಲೆಕ್ಟ್ರಿಕ್ ಬಸ್ ನ ಬೆಲೆ ರೂ.2 ಕೋಟಿ ಅಗಲಿದ್ದು, ಒಟ್ಟು 88 ಲಕ್ಷ ರೂ ಗಳ ಸಬ್ಸಿಡಿ ದೊರೆಯಲಿದೆ,  ಇದರಿಂದ ಇಂದನ ವೆಚ್ಚ ತಗ್ಗಿಸಲು ಹಾಗೂ ಮಾಲಿನ್ಯ ನಿಯಂತ್ರಣ ಸಾಧ್ಯವಾಗಲಿದ್ದು, ಲಾಭದಾಯಕ ಸಹ ಆಗಲಿದೆ. ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ 350 ಬಸ್ ಗಳನ್ನು ಲೀಸ್ ಗೆ ಪಡೆದು, ಪ್ರತೀ ಕಿಮೀ ಹೂಡಿಕೆದಾರರಿಗೆ ನಿಗಧಿತ ದರ ನೀಡುವ ಒಪ್ಪಂದದಲ್ಲಿ ಆರಂಭಿಸಲಿದ್ದು, ಮುಂದೆ ಇದನ್ನು ರಾಜ್ಯದ ಎಲ್ಲಾ ನಗರ ಸಾರಿಗೆಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

 ರಾಜ್ಯದ ಸಾರಿಗೆ ನೌಕರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದ್ದು, ಅವರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಇಂಧನದಲ್ಲಿ ಶೇ.20 ರಷ್ಟು ಇಥೆನಾಲ್ ಮಿಶ್ರಣ  ಮಾಡುವುದರಿಂದ ಬಸ್ ಗಳ  ಇಂಧನ ವೆಚ್ಚ ತಗ್ಗಿಸಲು ಸಾಧ್ಯವಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಕೊವೀಡ್ ಲಾಕ್ ಡೌನ್ ಸಮಯದಲ್ಲಿ ಸಾರಿಗೆ ಸಂಚಾರ ಇಲ್ಲದಿದ್ದರೂ  ಸಹ ಸಾರಿಗೆ ನೌಕರರಿಗೆ ವೇತನ ನೀಡಲಾಗಿದೆ, ಇದಕ್ಕಾಗಿ ಸರ್ಕಾರದಿಂದ 2 ತಿಂಗಳ ವೇತನಕ್ಕಾಗಿ 650 ಕೋಟಿ ರೂ ನೆರವು ಪಡೆಯಲಾಗಿದೆ, ರಾಜ್ಯದಲ್ಲಿ ಎಲೆಕ್ಟಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಂತಹ ವಾಹನಗಳ ರಸ್ತೆ ತೆರಿಗೆಯನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತಿದೆ ರಾಜ್ಯದಲ್ಲಿ ಪ್ರಸ್ತುತ 26000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳಿವೆ ಎಂದು ಸಚಿವರು ಹೇಳಿದರು.

 ಉಡುಪಿಯ ಬನ್ನಂಜೆಯಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರು ಇಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು, ಜಿಲ್ಲೆಯ ಟ್ಯಾಕ್ಸಿ ಮಾಲೀಕರು ನೀಡಿರುವ ಮನವಿಗಳ ಬಗ್ಗೆ ಅಧಿವೇಶನ ಸಂದರ್ಭದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು  ಎಂದು ಉಪ ಮುಖ್ಯಮಂತ್ರಿ ಹೇಳಿದರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ