ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ ಸಮಯದಲ್ಲಿ, ಹಾಗೂ ವಿಪತ್ತು ಮತ್ತು ಅಪತ್ತು ಹಾಗೂ ಇತರೇ ಸಾರ್ವಜನಿಕ ಜಂಜಾಟಗಳು ಬರುವಾಗ 81ಗ್ರಾಮದ ಕಡೆ ಗಮನ ಹರಿಸಲು ಸಾಧ್ಯವಾಗದೇ ಸಹಜವಾಗಿ ತಹಶೀಲ್ದಾರ್ ಒತ್ತಡಕ್ಕೆ ಸಿಲುಕಿ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ನೀಡಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಜನಸಾಮಾನ್ಯರ ಕೂಗಿಗೆ ಧ್ವನಿ ಯಾಗಬೇಕು ಎಂಬ ಕೂಗೂ ಜೋರಾಗಿ ಕೇಳಿ ಬರುತ್ತಿದೆ. ತಾಲೂಕಿನಲ್ಲಿ ಪ್ರಸ್ತುತ ರಾಜ್ಯಸರ್ಕಾರವನ್ನು ಪ್ರತಿನಿಧಿಸುವ ಒರ್ವ ಶಾಸಕರು, 2ಮಂದಿ ವಿಧಾನ ಪರಿಷತ್ ಸದಸ್ಯರು ಇದ್ದು ಕೂಡಲೇ ಸರ್ಕಾರದ ಗಮನಸೆಳೆಯಬೇಕಾಗಿದೆ.

ಬೆಳ್ತಂಗಡಿ ತಾಲೂಕು 81ಗ್ರಾಮ ಪಂಚಾಯತ್ ಗಳನ್ನು ಒಳಗೊಂಡ ಅತೀ ದೊಡ್ಡ ತಾಲೂಕು 4ಹೋಬಳಿಗಳು ಇದ್ದು ಬಹುತೇಕ ಜನರು ಕೃಷಿ ಚಟುವಟಿಕೆಗಳನ್ನೇ ಅವಲಂಭಿಸಿರುತ್ತಾರೆ. ಹೈನುಗಾರಿಕೆ ಇಲ್ಲಿಯ ಉಪಕಸೂಬು ಆಗಿರುತ್ತದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ವಿಸ್ತಾರವಾದ ತಾಲೂಕು. ಎಳನೀರು,ದಿಡುಪೆ ,ಚಾರ್ಮಾಡಿಯಿಂದ ಪೂಂಜಾಲಕಟ್ಟೆಯವರೆಗೂ, ವೇಣೂರು ನಿಂದ ಉಪ್ಪಿನಂಗಡಿಯವರೆಗೂ ಬೆಳ್ತಂಗಡಿ ತಾಲೂಕು ಹರಡಿದೆ. ಇದರ ಪೂರ್ವ-ಉತ್ತರ ಭಾಗದಲ್ಲಿ ರಮಣೀಯವಾದ ಪಶ್ಚಿಮ ಘಟ್ಟವಿದೆ. ಈ ತಾಲೂಕಿನಲ್ಲಿ ಪ್ರಸಿದ್ದ ಯಾತ್ರಾಸ್ಥಳ ಧರ್ಮಸ್ಥಳ, ಶಿಕ್ಷಣ ಕೇಂದ್ರವಾದ ಉಜಿರೆ, ಪ್ರೇಕ್ಷಣೀಯ ಸ್ಥಳವಾದ ಜಮಲಾಬಾದ್ ಕೋಟೆಯೂ ಇದೆ. ಇದಲ್ಲದೆ ಬೆಳ್ತಂಗಡಿಯಲ್ಲಿ ಹಲವಾರು ಧಾರ್ಮಿಕ ಕ್ಷೇತ್ರಗಳೂ ಇವೆ.

ತಾಲೂಕಿನಲ್ಲಿ ಬಹಳಷ್ಟು ರೈತರಿಗೆ ಇನ್ನೂ ಕೂಡ ಸರಿಯಾಗಿ ತಮ್ಮ ಜಮೀನುಗಳ ಮೂಲ ದಾಖಲೆಗಳನ್ನು ಸರಿಪಡಿಸಿಕೊಳ್ಳು ಆಗದೇ ತೀವ್ರ ಸಮಸ್ಯೆ ಇರುವ ಈ ತಾಲೂಕಿನ ಆಡಳಿತ ದೃಷ್ಟಿಯಿಂದ ತಾಲೂಕಿಗೆ 2 Aಗ್ರೇಡ್ ತಹಶೀಲ್ದಾರ್ ಅವಶ್ಯಕವಾಗಿ ಬೇಕಾಗಿದೆ ಎಂಬುದು ಸಾರ್ವಜನಿಕರ ಕೂಗಾಗಿದೆ. ಹತ್ತು ಹಲವಾರು ವರ್ಷಗಳಿಂದ ಪ್ಲೋಟಿಂಗ್ ಮಾಡಲು ಬಾಕಿ ಇರುವ ಬಹಳಷ್ಟು ಜಾಗಗಳು ಇದ್ದು ಇದಕ್ಕಾಗಿ ಹಣ ಸಂದಾಯ ಮಾಡಿ ವರ್ಷಾನುಗಟ್ಟಲೆ ಆದರೂ ರೈತರಿಗೆ ಸರಿಯಾದ ಸ್ಪಂದನೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ತಾಲೂಕಿನ ಅಭಿವೃದ್ಧಿಗೆ ಪೂರಕ ಸಹಕಾರವನ್ನು ಶೀಘ್ರದಲ್ಲೇ ನೀಡಬೇಕಾಗಿದೆ. ಈಗಾಗಲೇ ಸರ್ವೆಗೆ ಹಣ ಪಡೆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸದೇ ಇರೋದು ವಿಪರ್ಯಾಸವಾಗಿದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ