

ಮಂಗಳೂರು: ಕಾವೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವ, ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ, ಹಾಗೂ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು, ಚಿತ್ರದುರ್ಗ ಕಬೀರಾನಂದ ಆಶ್ರಮದ ಪೂಜ್ಯ ಶ್ರೀ ಶ್ರೀ ಶಿವಲಿಂಗಾನಂದ ಸ್ವಾಮೀಜಿಯವರು, ಶ್ರೀ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹುಕ್ಕೇರಿ ಹಿರೇಮಠ, ಬೆಳಗಾವಿ, ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಸೇರಿದಂತೆ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು ಮತ್ತು ಪ್ರಹ್ಲಾದ್ ಜೋಶಿ ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣ ಸಚಿವರು, ಡಿ.ವಿ ಸದಾನಂದ ಗೌಡ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರು, ಸಂಸದರಾದ ಕ್ಯಾ// ಬ್ರಿಜೇಶ್ ಚೌಟ, ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ಹರೀಶ್ ಪೂಂಜಾ , ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಶ್ರೀ ಮಂಜುನಾಥ ಭಂಡಾರಿ ಸದಸ್ಯರು, ವಿಧಾನ ಪರಿಷತ್, ಮಾಜಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ಮಾಜಿ ಶಾಸಕರಾದ ಗಂಗಾಧರ್ ಗೌಡ ಅವರು, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀ ಮನೋಜ್ ಕುಮಾರ್ ಕೋಡಿಕಲ್ ಅವರು, ಹೊಸ ದಿಗಂತ ಪತ್ರಿಕೆಯ ಸಿಇಒ ಶ್ರೀ ಪ್ರಕಾಶ್ ರವರು, ಉಪಸ್ಥಿತರಿದ್ದರು.

