ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್​ ಗುರೂಜಿ!

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್​ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಬಾರಿ ‘ಬಿಗ್​ ಬಾಸ್​ ಒಟಿಟಿ ಕನ್ನಡ’ (Bigg Boss OTT Kannada) ಕೂಡ ಅಂಥ ಕ್ಷಣಗಳಿಗೆ ಸಾಕ್ಷಿ ಆಗಿದೆ.

16 ಸ್ಪರ್ಧಿಗಳ ಪೈಕಿ ಬಹುತೇಕರು ತಮ್ಮ ಜೀವನದ ಕಷ್ಟದ ಕ್ಷಣಗಳನ್ನು ತೆರೆದಿಟ್ಟಿದ್ದಾರೆ. ಸಾನ್ಯಾ ಅಯ್ಯರ್​, ಉದಯ್​ ಸೂರ್ಯ, ಸೋಮಣ್ಣ ಮಾಚಿಮಾಡ, ಚೈತ್ರಾ ಹಳ್ಳಿಕೇರಿ, ಲೋಕೇಶ್​ (Lokesh) ಮುಂತಾದವರು ನೋವು ತೋಡಿಕೊಂಡಿದ್ದಾರೆ. ಇದನ್ನು ಆರ್ಯವರ್ಧನ್​ ಗುರೂಜಿ (Aryavardhan Guruji) ವಿರೋಧಿಸಿದ್ದಾರೆ. ಅದರಿಂದಾಗಿ ದೊಡ್ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ.

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಫೇಮಸ್​ ಆಗಿದ್ದ ಲೋಕೇಶ್​ ಅವರು ಈಗ ‘ಬಿಗ್​​ ಬಾಸ್​ ಒಟಿಟಿ’ ಶೋಗೆ ಬಂದಿದ್ದಾರೆ. ಅವರ ಬಾಲ್ಯ ತುಂಬ ಕಷ್ಟಕರವಾಗಿತ್ತು. ಮನೆ ಬಿಟ್ಟು ಓಡಿ ಹೋಗಿದ್ದ ಅವರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಭಿಕ್ಷೆ ಸಿಗಲಿ ಎಂದು ಮೂಕನಂತೆ ನಟಿಸುತ್ತಿದ್ದರು. ನಂತರ ನಿರಾಶ್ರಿತ ಮಕ್ಕಳ ಕೇಂದ್ರ ಸೇರಿದ ಬಳಿಕ ಬದುಕು ಕಂಡುಕೊಂಡರು.

ಈ ಎಲ್ಲ ಸಂಗತಿಗಳನ್ನು ಲೋಕೇಶ್​ ಅವರು ಬಿಗ್​ ಬಾಸ್​ ಮನೆಯೊಳಗೆ ಹೇಳಲು ಆರಂಭಿಸಿದರು. ‘ಇದನ್ನೆಲ್ಲ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಆರ್ಯವರ್ಧನ್​ ಗುರೂಜಿ ಮಾತಿನಲ್ಲೇ ಡಿಚ್ಚಿ ಕೊಟ್ಟರು. ಈ ಮಾತು ಲೋಕೇಶ್​ಗೆ ಸರಿ ಎನಿಸಲಿಲ್ಲ. ‘ನಿಮ್ಮ ಪ್ರಕಾರ ಇಲ್ಲಿ ನಾವು ಹೇಳುವುದೆಲ್ಲ ವೋಟ್​ ಪಡೆಯೋದಕ್ಕೋಸ್ಕರನಾ?’ ಎಂದು ಮರುಪ್ರಶ್ನೆ ಹಾಕಿದರು.

ಬಿಗ್​ ಬಾಸ್​ ಮನೆಯಲ್ಲಿ ಈ ರೀತಿ ಸಂಗತಿಗಳು ಆಗಾಗ ಎದುರಾಗುತ್ತವೆ. ಎಮೋಷನ್​ಗಳನ್ನು ಇಟ್ಟುಕೊಂಡು ಆಟ ಆಡಲಾಗುತ್ತದೆ. ಈ ಕಾರಣದಿಂದ ಒಂದು ವರ್ಗದ ವೀಕ್ಷಕರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೂ ಪ್ರತಿ ಸೀಸನ್​ನಲ್ಲಿ ಇದು ಮುಂದುವರಿಯುತ್ತಲೇ ಇದೆ. ಈ ಬಾರಿ ಶೋ ಆರಂಭದಲ್ಲೇ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಮೊದಲ ವಾರ 8 ಮಂದಿ ನಾಮಿನೇಟ್​:

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು. ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಹಾಗಾಗಿ ಎಮೋಷನಲ್​ ಕಾರ್ಡ್​ ಬಳಸುತ್ತಿದ್ದಾರೆ ಎಂಬ ಅಭಿಪ್ರಾಯ ವೀಕ್ಷಕರ ವಲಯದಿಂದ ಕೇಳಿಬರುತ್ತಿದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 63 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ