ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 23 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 133 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 98 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 70 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 78 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 55 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ