ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 252 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 295 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ