ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ