ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇಂದು ಬೆಳಗ್ಗೆ ಅವರು 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಸಂಪುಟ ಸಭೆಯಲ್ಲಿ ಬಜೆಟ್​​ಗೆ ಅನುಮೋದನೆ ಪಡೆಯಲಿದ್ದಾರೆ. ಬಜೆಟ್​ ಮೊದಲ ದಿನ ಜಂಟಿ ಅಧಿವೇಶನದ ​ ಬಳಿಕ ಅವರು ಆರ್ಥಿಕ ಸಮೀಕ್ಷೆ (Economic Survey) ಮಂಡಿಸಿದ್ದಾರೆ. ಆರ್ಥಿಕತೆ 8 ರಿಂದ 8.5ರಷ್ಟು ಬೆಳವಣಿಗೆ ದರ ಕಂಡಿದೆ. ರಾಷ್ಟ್ರೀಯ ಅಂಕಿ ಅಂಶ ಕಚೇರಿ ಯೋಜಿಸಿರುವ ಪ್ರಸಕ್ತ ವರ್ಷದಲ್ಲಿನ 9.2ರಷ್ಟು ಜಿಡಿಪಿ ಕುಸಿತಗೊಂಡಿದೆ.

ಈ ಬಾರಿ ಬಜೆಟ್ ನಲ್ಲೂ ವೆಚ್ಚಕ್ಕೆ ಒತ್ತು ನೀಡಲಾಗಿದೆ. ಕೆಲವು ವರದಿಗಳು ಈ ಬಾರಿಯ ಸಾಮಾನ್ಯ ಬಜೆಟ್ 2001 ರ ಬಜೆಟ್‌ಗಿಂತ ಸುಮಾರು 14 ಪ್ರತಿಶತದಷ್ಟು ದೊಡ್ಡದಾಗಿದೆ ಎಂದು ಹೇಳಲಾಗಿದೆ. ಬಜೆಟ್​ ಮೇಲಿನ ಚರ್ಚೆಯ ಮೊದಲ ಅಧಿವೇಶನ ಫೆಬ್ರವರಿ 2 ಮತ್ತು 11 ರ ನಡುವೆ ನಡೆಯುತ್ತದೆ. ನಂತರ ಮಾರ್ಚ್ 14 ರಂದು ಮತ್ತು ಏಪ್ರಿಲ್ 8 ರಂದು ಕೊನೆಗೊಳ್ಳುತ್ತದೆ. ಈ ಬಾರಿ ಬಜೆಟ್​ ಅನ್ನು 90 ರಿಂದ 120 ನಿಮಿಷಗಳ ಕಾಲ ಸಚಿವರು ಮಂಡಿಸಲಿದ್ದಾರೆ.

ಪೇಪರ್ ಲೆಸ್​ ಬಜೆಟ್!​

ಕಳೆದ ವರ್ಷ ಕೋವಿಡ್‌ನಿಂದಾಗಿ ಮೊದಲ ಬಾರಿ ಕೇಂದ್ರ ಸಚಿವರು ಸಂಪೂರ್ಣ ಪೇಪರ್‌ ಲೆಸ್‌ ಬಜೆಟ್‌ ಅನ್ನು ಮಂಡಿಸಿ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯೂ ಕೂಡ ಅವರು ಪೇಪರ್‌ಲೆಸ್‌ ಬಜೆಟ್‌ ಮಂಡನೆ ಮಾಡಲಿದ್ದಾರೆ

ಉದ್ಯೋಗ ಹೆಚ್ಚಳಕ್ಕೆ ಒತ್ತು
ಇನ್ನು ಈ ಬಾರಿ ಬಜೆಟ್​ನಲ್ಲಿ ಮೂಲಸೌಕರ್ಯಗಳ ಬಲ ಮತ್ತು ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಹೆಚ್ಚಿನ ಒತ್ತು ನೀಡಲಿದೆ. ಇದರ ಜೊತೆಗೆ ತೆರಿಗೆ ದರಗಳ ಮೇಲೆ ಪರಿಹಾರವನ್ನು ನೀಡುವ ಭರವಸೆ ಇದೆ. ಕೋವಿಡ್​ ಆರ್ಧಿಕತೆ ಮೇಲೆ ಪರಿಣಾಮ ಬೀರಿದ್ದು, ಹೊಸ ಯೋಜನೆಗಳ ಘೋಷಣೆಗಳ ಬಗ್ಗೆ ಹೆಚ್ಚಿನ ನಿರೀಕ್ಷೆ ಇಲ್ಲದಂತೆ ಮಾಡಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೂಲಭೂತ ಸೌಕರ್ಯ ವಲಯದ ದೊಡ್ಡ ಯೋಜನೆಗಳಿಗೆ ಹಣವನ್ನು ಒದಗಿಸಲು, ಈ ಬಾರಿಯೂ ಸರ್ಕಾರವು ಹೆಚ್ಚಾಗಿ ಸಾಲದ ಮೇಲೆ ಅವಲಂಬಿತವಾಗಿದೆ. ಬಜೆಟ್‌ನಲ್ಲಿ ಮತ್ತೊಮ್ಮೆ ಬಂಡವಾಳ ಹಿಂತೆಗೆದುಕೊಳ್ಳುವ ಮೂಲಕ ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ನಿಧಿ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಇದಲ್ಲದೇ 13 ಲಕ್ಷ ಕೋಟಿಯಷ್ಟು ದೊಡ್ಡ ಸಾಲವನ್ನೂ ಪಡೆಯಬಹುದು. 2021 ರ ಬಜೆಟ್‌ನಲ್ಲಿ ಸರ್ಕಾರವು 12.05 ಲಕ್ಷ ಕೋಟಿ ರೂಪಾಯಿ ಸಾಲವನ್ನು ಘೋಷಿಸಿತ್ತು.

ಆರೋಗ್ಯ ಸೌಲಭ್ಯಕ್ಕೆ ಒತ್ತು

ಕೊರೊನಾ ಮಹಾಮಾರಿಯಲ್ಲಿ ಆರೋಗ್ಯ ಸೇವೆಗಳ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಆರೋಗ್ಯ ವಿಮೆಯ ಮೇಲೆ ಲಭ್ಯವಿರುವ ತೆರಿಗೆ ವಿನಾಯಿತಿಯ ವ್ಯಾಪ್ತಿಯನ್ನು ಹೆಚ್ಚಿಸಬಹುದು. ಇದರಿಂದ ಜನಸಾಮಾನ್ಯರಿಗೆ ನೆಮ್ಮದಿ ಸಿಗುವುದಲ್ಲದೆ, ಆರೋಗ್ಯ ವಿಮೆಯ ಬೇಡಿಕೆಯೂ ಹೆಚ್ಚಾಗಬಹುದು. ಸ್ಥಗಿತಗೊಂಡಿರುವ ಮತ್ತು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ದೀರ್ಘಾವಧಿಯ ಹಣಕಾಸು ಅಗತ್ಯಗಳನ್ನು ಪೂರೈಸಲು ಅನಿವಾರ್ಯವಾಗಿದೆ.

ಆದಾಯ ತೆರಿಗೆಯ ಹೊಸ ಸ್ಲ್ಯಾಬ್
ಈ ಬಾರಿ ಬಜೆಟ್ ನಲ್ಲಿ ಆದಾಯ ತೆರಿಗೆಯ ಹೊಸ ಸ್ಲ್ಯಾಬ್ ಅನ್ನು ಆಕರ್ಷಕವಾಗಿಸಲು, ಅದಕ್ಕೆ ಕೆಲವು ಪರಿಹಾರಗಳನ್ನು ಸೇರಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಹೆಚ್ಚಿನ ಆದಾಯದ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಬಹುದು. ಹೊಸ ಸ್ಲ್ಯಾಬ್‌ನಲ್ಲಿ ಗೃಹ ಸಾಲದ ರಿಯಾಯಿತಿಗಳನ್ನು ಸಹ ಸೇರಿಸಬಹುದು. ಹಳೆಯ ಸ್ಲ್ಯಾಬ್‌ನಲ್ಲಿರುವ ಕೆಲವು ವಿಭಾಗಗಳಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬಹುದು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ