ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ.

ಪದೇಪದೇ ಕರೆಂಟ್‌ ಹೋಗುತ್ತದೆ, ಎಸ್ಕಾಂನವರಿಗೆ ಎಷ್ಟುಫೋನ್‌ ಮಾಡಿದರೂ ಪ್ರಯೋಜನವಿಲ್ಲ, ಅರ್ಜಿ ಸಲ್ಲಿಸಿ ಎಷ್ಟುದಿನವಾದರೂ ವಿದ್ಯುತ್‌ ಸಂಪರ್ಕ ನೀಡುತ್ತಿಲ್ಲ, ಹಳ್ಳಿಯಲ್ಲಿ ವಿದ್ಯುತ್ತೇ ಇರುವುದಿಲ್ಲ ಆದರೆ ಬಿಲ್‌ ಮಾತ್ರ ಬರುತ್ತದೆ ಇಂತಹ ಸಮಸ್ಯೆಗಳಿಗೆಲ್ಲ ಕೇಂದ್ರ ಸರ್ಕಾರ ಶೀಘ್ರದಲ್ಲೇ ಇತಿಶ್ರೀ ಹಾಡಲಿದೆ.

ಅರ್ಜಿ ಸಲ್ಲಿಸಿದ ನಿರ್ದಿಷ್ಟ ಸಮಯದೊಳಗೆ ಇಂಧನ ಇಲಾಖೆ ವಿದ್ಯುತ್‌ ಸಂಪರ್ಕ ನೀಡಬೇಕಾಗುತ್ತದೆ. ಅಲ್ಲದೆ, ವಿದ್ಯುತ್‌ ಗ್ರಾಹಕರ ಎಲ್ಲಾ ಸಮಸ್ಯೆಗಳನ್ನೂ ನಿರ್ದಿಷ್ಟ ಸಮಯದೊಳಗೆ ಆನ್‌ಲೈನ್‌ನಲ್ಲೇ ಬಗೆಹರಿಸಬೇಕಾಗುತ್ತದೆ.

ಈ ಸಂಬಂಧ ಕೇಂದ್ರ ಇಂಧನ ಇಲಾಖೆಯು ಕರಡು ನಿಯಮಾವಳಿ ರೂಪಿಸಿದ್ದು, ಅದಕ್ಕೆ ಈ ವರ್ಷದ ಸೆ.30ರೊಳಗೆ ಜನರಿಂದ ಆಕ್ಷೇಪಣೆ ಆಹ್ವಾನಿಸಿದೆ. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮವಾಗಿ ‘ವಿದ್ಯುತ್‌ (ಗ್ರಾಹಕರ ಹಕ್ಕು) ನಿಯಮಾವಳಿ-2020’ನ್ನು ಪ್ರಕಟಿಸಲಿದೆ.

ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಸಬ್ಸಿಡಿ ಹಣ ಜಮೆ.

ಜನರು ಕೇವಲ 2 ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಸರಳ ವ್ಯವಸ್ಥೆ ಇರಬೇಕು.

ಮೆಟ್ರೋ ನಗರಗಳಲ್ಲಿ ಜನರು ಅರ್ಜಿ ಸಲ್ಲಿಸಿದ 7 ದಿನ, ಮುನ್ಸಿಪಲ್‌ ಪಟ್ಟಣಗಳಲ್ಲಿ 15 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ದಿನದೊಳಗೆ ವಿದ್ಯುತ್‌ ಸಂಪರ್ಕ ನೀಡಬೇಕು ಅಥವಾ ಈಗಾಗಲೇ ನೀಡಿರುವ ಸಂಪರ್ಕವನ್ನು ಬದಲಿಸಿಕೊಡಬೇಕು.

ಒಂದು ವರ್ಷಕ್ಕೆ ಒಬ್ಬ ಗ್ರಾಹಕನಿಗೆ ಗರಿಷ್ಠ ಇಷ್ಟೇ ಸಲ ಹಾಗೂ ಇಷ್ಟುತಾಸು ಮಾತ್ರ ವಿದ್ಯುತ್‌ ಕಡಿತಗೊಳಿಸಬಹುದು ಎಂಬ ಮಿತಿ ಇರಬೇಕು.

ಹೊಸ ಸಂಪರ್ಕ, ವರ್ಗಾವಣೆ, ರಿಪೇರಿ, ವಿದ್ಯುತ್‌ ಕಡಿತ ಇತ್ಯಾದಿ ಸಮಸ್ಯೆಗಳನ್ನು ಗ್ರಾಹಕರು ಬಗೆಹರಿಸಿಕೊಳ್ಳಲು ಆಯಪ್‌ ಆಧಾರಿತ ವ್ಯವಸ್ಥೆ ತರಬೇಕು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 363 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 304 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 203 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 302 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 162 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ