🚩 ಗುರುವಾರದ ರಾಶಿಫಲ ಯಾವ ರಾಶಿಯವರಿಗೆ ಇಂದು ಶುಭದಿನ..?

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ತೃತೀಯಾ ತಿಥಿ,
ಸಂಜೆ 5:04 ನಂತರ ಚತುರ್ಥಿ,
ಗುರುವಾರ, ಮಖ ನಕ್ಷತ್ರ,
ಸಂಜೆ 5:08 ಪೂರ್ವಫಾಲ್ಗುಣಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:05 ರಿಂದ 3:41
ಗುಳಿಕಕಾಲ: ಬೆಳಗ್ಗೆ 9:18 ರಿಂದ 10:54
ಯಮಗಂಡಕಾಲ: ಬೆಳಗ್ಗೆ 6:07 ರಿಂದ 7:42

ಮೇಷ

ವಾಹನ ಖರೀದಿಯ ಅವಕಾಶಗಳು ಕಂಡುಬರುತ್ತಿವೆ. ಸ್ವಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಸಕಾಲ. ಸಣ್ಣ ವ್ಯಾಪಾರ, ಗುಡಿ ಕೈಗಾರಿಕೆಗಳಿಂದ ಲಾಭ. ದೊಡ್ಡ ಉದ್ಯಮಕ್ಕೆ ಯೋಜನೆಗಳು ಹೊಂದಾಣಿಕೆಯಾಗುವವು.

ವೃಷಭ

ಆದಾಯಕ್ಕೂ ಮೀರಿದ ಖರ್ಚು ತಲೆದೋರಬಹುದು. ಭೂ ಸಂಬಂಧಿ ತಗಾದೆಗಳು ಪ್ರಾರಂಭವಾಗುವ ಸಾಧ್ಯತೆ. ಅಡ್ಡಿ ಆತಂಕಗಳ ನಡುವೆಯೂ ಶುಭಕಾರ್ಯಗಳು ಕೈಗೂಡುವವು. ಕೆಟ್ಟ ಮಾತುಗಳಿಂದ ಧೃತಿಗೆಡಬೇಡಿ.

ಮಿಥುನ

ಧನಾಗಮನ. ವೃತ್ತಿರಂಗದಲ್ಲಿ ಅಧಿಕ ಒತ್ತಡದಿಂದಾಗಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ. ದಾಂಪತ್ಯದಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳು ಎದುರಾಗಬಹುದು. ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸಿ.

ಕಟಕ

ದಾಯಾದಿಗಳು ಶತ್ರುಗಳಾಗಿ ಕಾಡುವ ಸಾಧ್ಯತೆ. ವ್ಯಾಪಾರದಲ್ಲಿ ಲಾಭ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ. ಸಂಗಾತಿಯ ಹಿತೋಕ್ತಿಯನ್ನು ಕಡೆಗಣಿಸದಿರಿ. ಮಾತೃವರ್ಗದವರಿಂದ ಆರ್ಥಿಕ ಸಹಾಯ ಒದಗಿ ಬರುವುದು. ‌

ಸಿಂಹ

ದೂರ ಪ್ರಯಾಣದಿಂದ ಅನುಕೂಲ. ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ ಇರಲಿ. ಹಿರಿಯರೊಂದಿಗೆ ವಾದ–ವಿವಾದಗಳು ಬೇಡ. ವಿಳಂಬವಾದ ಸರ್ಕಾರಿ ಕೆಲಸ–ಕಾರ್ಯಗಳು ಪರಿಪೂರ್ಣಗೊಳ್ಳುವವು.

ಕನ್ಯಾ

ದೇವತಾ ಕಾರ್ಯಗಳಿಗೆ ಹಣ ವಿನಿಯೋಗಿಸುವ ಸಾಧ್ಯತೆ. ತಾಳ್ಮೆ ಸಮಾಧಾನದಿಂದ ಸಾಂಸಾರಿಕ ನೆಮ್ಮದಿ ಕಾಯ್ದುಕೊಳ್ಳಿ. ವ್ಯಾಪಾರ ವ್ಯವಹಾರಗಳು ಅಭಿವೃದ್ಧಿಯತ್ತ ಸಾಗಲಿವೆ.

ತುಲಾ

ಅತಿಯಾದ ಕಾರ್ಯಬಾಹುಳ್ಯದಿಂದಾಗಿ ಒತ್ತಡದ ಸ್ಥಿತಿ. ವಿದ್ಯಾರ್ಥಿಗಳ ಕೆಲಸ–ಕಾರ್ಯಗಳಲ್ಲಿ ಅತಿಯಾದ ಪರಿಶ್ರಮ. ಆರೋಗ್ಯದಲ್ಲಿ ವ್ಯತ್ಯಯದ ಸಾಧ್ಯತೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ದೊರಕುವುದು.

ವೃಶ್ಚಿಕ

ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರುವ ಸಾಧ್ಯತೆ. ವಾಹನ ಪ್ರಯಾಣದಲ್ಲಿ ಎಚ್ಚರಿಕೆ. ನೀರಿನ ಸಂಬಂಧದ ತಗಾದೆಗಳು ಪ್ರಾರಂಭವಾಗಬಹುದು. ಅಧಿಕಾರಿಗಳನ್ನು ಎದುರಿಸಬೇಕಾದ ಸಂಭವವಿದೆ.

ಧನು

ವಿದ್ಯಾರ್ಥಿಗಳ ಪ್ರಗತಿಯಲ್ಲಿ ಸಂತಸ ಮೂಡುವುದು. ದಾಂಪತ್ಯದಲ್ಲಿ ಸಣ್ಣ ಪುಟ್ಟ ಘರ್ಷಣೆಯಾಗಬಹುದು. ಪುಟ್ಟ ಮಕ್ಕಳ ಮಧ್ಯಪ್ರವೇಶದಿಂದ ಎಲ್ಲವೂ ನಿರಾಳ. ಪ್ರೀತಿಪಾತ್ರರೊಂದಿಗಿನ ಅಭಿಲಾಷೆಗಳು ನೆರವೇರುವ ಸಾಧ್ಯತೆ.

ಮಕರ

ಶೀತದಿಂದಾಗಿ ಮೂಗು, ಗಂಟಲಿಗೆ ಸಂಬಂಧಿಸಿದ ವ್ಯಾಧಿಗಳು ಬಾಧಿಸುವ ಸಾಧ್ಯತೆ. ಕಾರ್ಮಿಕ ವರ್ಗದವರಿಗೆ ನಿರಾಶೆ. ಸಾರ್ವಜನಿಕ ಕೆಲಸಗಳಲ್ಲಿ ಪ್ರಗತಿಯ ಜೊತೆಗೆ ಅಪವಾದ ಎದುರಿಸಬೇಕಾದೀತು.

ಕುಂಭ

ನಿರೀಕ್ಷಿತ ಕಾರ್ಯಗಳು ಕೈಗೂಡಿದ ಸಂತೋಷ. ನಿರುದ್ಯೋಗಿಗಳಿಗೆ ವಿದೇಶಗಳಲ್ಲಿ ಉದ್ಯೋಗ ದೊರಕುವ ಸಾಧ್ಯತೆ. ವಿದೇಶ ಪ್ರಯಾಣ. ಧನಾಗಮನದಿಂದ ಆರ್ಥಿಕ ಸುಸ್ಥಿತಿ. ಕಲಾವಿದರಿಗೆ ವಿಫುಲ ಅವಕಾಶ.

ಮೀನ

ಆರೋಗ್ಯದ ಬಗ್ಗೆ ವಿಶೇಷ ಗಮನ ಅಗತ್ಯ. ಉದ್ಯೋಗಾಂಕ್ಷಿಗಳಿಗೆ ಉದ್ಯೋಗದ ನಿಮಿತ್ತ ತಿರುಗಾಡಬೇಕಾದೀತು. ದೇವತಾ ದರ್ಶನ ಭಾಗ್ಯ. ಸಾಂಸಾರಿಕ ಕಿರಿಕಿರಿಯ ಅನುಭವ. ಹಿರಿಯರ ಮಾತುಗಳನ್ನು ಗೌರವಿಸಿ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ