ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಪಂದಳಮ್ ಅರಮನೆಯಲ್ಲಿ ಪೆರುಮಾಳ್‌ ವಂಶಸ್ಥರ ಭೇಟಿ

ಶಬರಿಮಲೆ: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.

https://twitter.com/drashwathcn/status/1371852048111693824?s=20

ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್‌ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು. ಇದೇ ವೇಳೆ ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.

ಪಂದಳಮ್ ಅರಮನೆಗೂ ಭೇಟಿ:
ಇಂದು ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್‌ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದ ಆಶೀರ್ವಾದ ಪಡೆದರು ಡಿಸಿಎಂ. ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ‌ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು; “ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ’ ಎಂದರು.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 40 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 59 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ