ಆರೋಗ್ಯ ಸಿಬ್ಬಂದಿಗಳ ಮಹಾಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು!

ಕುಂದಾಪುರ: ಕೊರೋನಾ ಹೆಸರಲ್ಲಿ ಬೇರೆ ಬೇರೆ ಅವಾಂತರಗಳು ನಡೆಯುತ್ತಿದೆ. ಕೋವಿಡ್‌ನಿಂದ ಸತ್ತ ವ್ಯಕ್ತಿಯ ಶವದ ಬದಲು ಬೇರೆ ಮೃತ ವ್ಯಕ್ತಿಯ ಶವವನ್ನು ಕಳುಹಿಸಿದ ಘಟನೆ ಕುಂದಾಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಂಬುಲೆನ್ಸ್‌ನಲ್ಲಿ ಬಂದ ಬೇರೆ ಶವವನ್ನು ಕಂಡು ಬಂಧುಗಳು, ಮನೆಯವರು ಹಾಗೂ ಸಾರ್ವಜನಿಕರು ಕುಂದಾಪುರ ಸ್ಮಶಾನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದು ಉಡುಪಿ ಜಿಲ್ಲೆಯ ಕುಂದಾಪುರದ ಸ್ಮಶಾನದಲ್ಲಿ ಕಂಡುಬಂದ ವಿಚಿತ್ರ ದೃಶ್ಯ. ಯಾರದ್ದೋ ಹೆಸರಿನಲ್ಲಿ ಇಲ್ಲಿ ಬೇರೆ ಯಾರದ್ದೋ ದೇಹದ ಅಂತ್ಯ ಸಂಸ್ಕಾರಕ್ಕೆ ಇಲ್ಲಿ ಸಿದ್ದತೆ ನಡೆದಿತ್ತು.

ಕುಂದಾಪುರದ ನೇರಂಬಳ್ಳಿ ನಿವಾಸಿ 60 ವರ್ಷದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ನಂತರ ಕೋವಿಡ್ ಪಾಸಿಟವ್ ಆಗಿದೆ ಎಂದು ಅವರನ್ನು ಉಡುಪಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಉಡುಪಿ ಆಸ್ಪತ್ರೆಯಿಂದ ವ್ಯಕ್ತಿಯ ಮನೆಗೆ ಕರೆ ಮಾಡಿ, ನಿಮ್ಮ ತಂದೆ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ನಾವೇ ಅಂತ್ಯ ಸಂಸ್ಕಾರ ಮಾಡುತ್ತೇವೆ ಎಂದಿದ್ದರು. ನಂತರ ಮನೆಯವರ ಒತ್ತಾಯಕ್ಕೆ ಆರೋಗ್ಯ ಸಿಬ್ಬಂದಿಗಳು ಮೃತದೇಹವನ್ನು ಕುಂದಾಪುರ ಸ್ಮಶಾನಕ್ಕೆ ತಂದಿದ್ದರು.

ಸ್ಮಶಾನದಲ್ಲಿ ಮೃತದೇಹದ ಅಂತಿಮ ದರ್ಶನ ಪಡೆಯಲು ಮನೆಯವರು ಒತ್ತಾಯಿಸಿದಾಗ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೆ ಐವರಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮೃತದೇಹ ಅದಲು ಬದಲಾಗಿರುವುದು ಬೆಳಕಿಗೆ ಬಂದಿದೆ.

ಆರೋಗ್ಯ ಸಿಬ್ಬಂದಿಯ ನಿರ್ಲ್ಯಕ್ಷ್ಯದ ಕುರಿತು ವ್ಯಕ್ತಿಯ ಮನೆಯವರು ಆಸ್ಪತ್ರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಿಬ್ಬಂದಿಯ ನಿರ್ಲ್ಯಕ್ಷ್ಯದ ಕುರಿತು ವ್ಯಕ್ತಿಯ ಮನೆಯವರು ಆಸ್ಪತ್ರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಶಾನದಲ್ಲಿ ನೂರಾರು ಮಂದಿ ಆಗಮಿಸಿದ್ದು, ಅಸಮಧಾನ ವ್ಯಕ್ತಪಡಿಸಿದ್ದಾರೆ. ತಾಲೂಕು ಅರೋಗ್ಯಾಧಿಕಾರಿ ನಾಗಭೂಷಣ್, ಸಹಾಯಕ ಆಯುಕ್ತ ರಾಜು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ