ವಾತ್ಸಲ್ಯ ಕುಟುಂಬಕ್ಕೆ ಸೂರು ಒದಗಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸೇವಾಮನೋಭಾವನೆಯ ಚಿಂತನೆಯಡಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಸೂರು ನಿರ್ಮಾಣ ಮಾಡಿ ಹಸ್ತಾಂತರಿಸುವ ಮಹತ್ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಂಪೂರ್ಣ ವೆಚ್ಚವನ್ನು ಭರಿಸಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ಎರಡು ಅರ್ಹ ವಾತ್ಸಲ್ಯ ಕುಟುಂಬಗಳಿಗೆ ಮನೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಗಣೇಶ್.ಬಿ ಯವರು ಕಸ್ತೂರಮ್ಮ ಹಾಗೂ ಮಲ್ಲಮ್ಮ ಭೀಮಣ್ಣ ದಂಪತಿಗಳಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದರು.

ನಿರ್ಗತಿಕ ಕುಟುಂಬಗಳು ಸಮಾಜದಲ್ಲಿ ಎಲ್ಲರಂತೆ ನೆಮ್ಮದಿಯ ಜೀವನ ನಡೆಸಿ ಬಾಳಿಬದುಕಲು ವಾತ್ಸಲ್ಯ ಯೋಜನೆ ಸಹಕಾರಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ 4ದಶಕಗಳಿಂದ ರಾಜ್ಯಾದ್ಯಂತ ತನ್ನ ಸೇವಾ ಚಟುವಟಿಕೆಗಳನ್ನು ಮುನ್ನಡೆಸುತ್ತಾ ಬರುತ್ತಿದ್ದು ರಾಜ್ಯದಲ್ಲಿ 12ಸಾವಿರಕ್ಕೂ ಹೆಚ್ಚಿನ ಅತ್ಯಂತ ಕಡುಬಡವ ವೃದ್ಧ ಕುಟುಂಬಗಳಿಗೆ ತನ್ನ ಜೀವನ ನಿರ್ವಹಣೆಯ ಅಗತ್ಯತೆಗಳನ್ನು ಪೂರೈಸಲು ನೆರವಾಗುವ ನಿಟ್ಟಿನಲ್ಲಿ ಮಾಸಿಕ ಸಹಾಯಧನ ನೀಡುತ್ತಿದ್ದು ನಿರ್ಗತಿಕ ಕುಟುಂಬಗಳ ಸದಸ್ಯರು ತನ್ನ ಹಸಿವನ್ನು ನೀಗಿಸಲು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ನೆರವಾಗುತ್ತಿದೆ. ಇಂತಹ ಅರ್ಹ ಕುಟುಂಬಗಳನ್ನು ಗುರುತಿಸಿ ಪಾತ್ರೆಪರಿಕರಗಳು, ವಸ್ತ್ರ ಹಾಗೂ ಅಗತ್ಯ ವಸ್ತುಗಳ ಕಿಟ್ ಗಳನ್ನು ಒದಗಿಸಿ ಇದೀಗ ವಾಸಿಸಲು ಯೋಗ್ಯವಲ್ಲದ ಮನೆಯಲ್ಲಿರುವ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡುವ ಕಾರ್ಯಕ್ಕೆ ನಮ್ಮ ಸಂಸ್ಥೆ ಮುಂದಾಗಿದೆ. ಇಂದಿನ ಈ ಆಧುನಿಕ ಯುಗದಲ್ಲಿಯೂ ಇಂತಹ ಹಲವು ಕುಟುಂಬಗಳಿದ್ದು ಇವರಿಗೆ ಆಸರೆಯನ್ನೊದಗಿಸುವ ಡಾ. ಹೇಮಾವತಿ ವಿ ಹೆಗ್ಗಡೆಯವರ ಕನಸು ಇದೀಗ ನನಸಾಗಿದೆ. ವಾತ್ಸಲ್ಯ ಮನೆಯೊಂದಿಗೆ ಮೂಲಭೂತ ಸೌಕರ್ಯ ಗಳಾದ ಸ್ನಾನ ಗೃಹ ಮತ್ತು ಶೌಚಾಲಯವನ್ನು ನಿರ್ಮಾಣ ಮಾಡಿ ಇಂದು ಹಸ್ತಾಂತರ ಮಾಡಿದ್ದೇವೆ ಈ ಕುಟುಂಬಗಳಿಗೆ ಮುಂದಿನ ದಿನಗಳಲ್ಲಿ ಒಳಿತಾಗಲಿ ಎಂದು ಶುಭಹಾರೈಸಿದರು.

ವಾತ್ಸಲ್ಯ ಫಲಾನುಭವಿ ಕಸ್ತೂರಮ್ಮರವರು ವಾಸವಿದ್ದ ಗುಡಿಸಲು ಹಾಗೂ ನೂತನವಾಗಿ ನಿರ್ಮಿಸಿರುವ ಮನೆ
ವಾತ್ಸಲ್ಯ ಫಲಾನುಭವಿ ಮಲ್ಲಮ್ಮ ಭೀಮಣ್ಣರು ಈ ಹಿಂದೆ ವಾಸವಾಗಿದ್ದ ಗುಡಿಸಲು ಹಾಗೂ ನೂತನವಾಗಿ ನಿರ್ಮಿಸಿರುವ ಮನೆ

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ನಿರ್ದೇಶಕರಾದ ಸಂತೋಷ್ ಕುಮಾರ್, ದೇವದುರ್ಗ ತಾಲೂಕಿನ ಯೋಜನಾಧಿಕಾರಿ ರಾಜೇಶ್.ಎಂ ಕಾನರ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸತೀಶ್ ಬಳೆ, ವಾಣಿಶ್ರೀ ಯುವಬ್ರಿಗೇಡ್ ಗಬ್ಬೂರು ಇದರ ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಕಾರ್ಯಕರ್ತರು, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಯವರು ಹಾಗೂ ಊರಿನ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 63 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ