ಧಾರವಾಡ SDM ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಉದ್ಘಾಟನೆ

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್​ಡೌನ್​ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

ಸತ್ತೂರಿನ ಎಸ್​ಡಿಎಂ ಆಸ್ಪತ್ರೆಯಲ್ಲಿ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೊರೊನಾ ವಾರಿಯರ್​ಗಳಾಗಿರುವ ವೈದ್ಯರು ನರ್ಸ್​ಗಳ ಸೇವೆ ಅನನ್ಯವಾದುದು. ಕೋವಿಡ್ ಬಗ್ಗೆ ಮಾಧ್ಯಮಗಳು ಭಯ ಸೃಷ್ಟಿಸದೇ, ಜಾಗೃತಿ ಮೂಡಿಸಬೇಕು. ಶೇ.64 ರಷ್ಟು ಜನ ಗುಣಮುಖರಾಗಿ ಬಿಡುಗಡೆಯಾಗುತ್ತಿದ್ದಾರೆ ಎಂದರು.

ಕೋವಿಡ್ ತಡೆಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ತ್ವರಿತವಾಗಿ ಕಾರ್ಯೋನ್ಮುಖರಾದ ಪರಿಣಾಮ ಇಂದು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತಿದೆ. ಜನರ ಅಭಿಪ್ರಾಯ ಆಧರಿಸಿ ಜಿಲ್ಲೆಯಲ್ಲಿ ಹತ್ತು ದಿನಗಳ ಲಾಕ್​ಡೌನ್ ಜಾರಿಯಲ್ಲಿದೆ. ಪ್ರತಿಯೊಬ್ಬರೂ ಸ್ವಯಂ ನಿರ್ಬಂಧ ಹಾಕಿಕೊಂಡು ಕೊರೊನಾ ತಡೆಯಲು ಕೈ ಜೋಡಿಸಬೇಕು ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

ಆನ್​ಲೈನ್ ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಮಾತನಾಡಿ, ಈ ವಿಷಮ ಪರಿಸ್ಥಿತಿ ಎದುರಿಸಿ ಜಯಿಸಬೇಕಾಗಿದೆ. ಸೋಂಕಿನ ಸರಪಳಿ ತುಂಡರಿಸಲು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಜೊತೆಗೆ ಹೆಚ್ಚು ಪರೀಕ್ಷೆಗಳು ಆಗಬೇಕು. ನಮ್ಮ ದೇಶದ ಜನಸಂಖ್ಯೆ, ಜನಸಾಂದ್ರತೆಗೆ ಹೋಲಿಸಿದಾಗ ಕೋವಿಡ್ ನಿಯಂತ್ರಣದಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯುಳ್ಳ ಕ್ರಮಗಳು ಉತ್ತಮ ಪರಿಣಾಮ ನೀಡುತ್ತಿವೆ. ದೇಶದಲ್ಲಿ ಕಳೆದ ಜನವರಿ 1 ರ ಹೊತ್ತಿಗೆ ಪಿಪಿಇ ಕಿಟ್, ಎನ್-95 ಮಾಸ್ಕ್​ಗಳ ಲಭ್ಯತೆ ವಿರಳವಾಗಿತ್ತು. ಈಗ ಪ್ರತಿನಿತ್ಯ ಭಾರತದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಹೊರದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ. ಕೋವಿಡ್ ಭಯಾನಕ ಖಾಯಿಲೆಯಲ್ಲ. ಕಳೆದ ಹತ್ತು ವರ್ಷಗಳಿಂದ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತಮ್ಮ ಆತ್ಮವಿಶ್ವಾಸದಿಂದ ಕೋವಿಡ್​ನಿಂದಲೂ ಗುಣಮುಖರಾಗಿರುವುದನ್ನು ಗಮನಿಸಿದಾಗ ಸಾರ್ವಜನಿಕರ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭಾಗಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭಾಗಿ

ಗೂಗಲ್ ಮೀಟ್ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು, ಎಸ್​ಡಿಎಂ ಅಧಿಕಾರಿಗಳು ಭಾಗವಹಿಸಿದ್ದರು.


ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ