ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ

ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ ಬಸ್ಸ್ ಸೌಲಭ್ಯ ಒದಗಿಸಲು ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಮನವಿಗೆ ಬೆಳ್ತಂಗಡಿ ಶಾಸಕರು ಹಾಗೂ ರಸ್ತೆ ಸಾರಿಗೆ ಸಂಸ್ಥೆಯು ಸ್ವಂಪಂದಿಸಿ ಕಜಕ್ಕೆ ಭಾಗಕ್ಕೆ ಬಸ್ ಬಿಡಲು ಮುಂದಾಗಿದ್ದು ಸ್ಥಳೀಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಇವರು ಮೂಲಕ ಚಾಲನೆ ನೀಡಿದರು.

ಈ ರಸ್ತೆ ಸಾರಿಗೆ ಸಂಪರ್ಕ ವಿಸ್ತರಣೆ ವ್ಯವಸ್ಥೆಗೆ ದಿನಾಂಕ 01/07/2024 ರಂದು ಮಾನ್ಯ ಶಾಸಕರಾದ ಹರೀಶ್ ಪೂಂಜ KSRTC ಜನಸ್ಪಂದನಾ ಕಾರ್ಯಕ್ರಮ ಏರ್ಪಡಿಸಿದ್ದರು, ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮದ ಗ್ರಾಮದ ಅಭಿವೃದ್ಧಿಯ ಉದ್ದೇಶದಿಂದ ತಮ್ಮ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಜಕ್ಕೆ ಮಲವಂತಿಗೆ ಇದ್ದು,ಇಲ್ಲಿ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಅದಲ್ಲದೆ ವಿವಿಧ ರೀತಿಯ ಚಟುವಟಿಕೆಯಲ್ಲಿ ಹಾಗೂ ಉತ್ತಮ ಶಾಲೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಂತ ವಿದ್ಯಾಸಂಸ್ಥೆಯಾಗಿದ್ದು, ಅದಲ್ಲದೆ ಮಲವಂತಿಗೆ ಮತ್ತು ಮಿತ್ತಬಾಗಿಲು ಕೇವಲ 2 ಗ್ರಾಮದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಇಲ್ಲಿಯವರೆಗೆ ರಸ್ತೆ ಇದ್ದರೂ ಕೂಡ ಮೂಲಭೂತ ಸೌಕರ್ಯದ ಕೊರತೆಯಿಂದ ಸುಮಾರು 2.5km ನಡೆದುಕೊಂಡು ಹೋಗುವ ಪರಿಸ್ಥಿತಿ ಸುಮಾರು ವರ್ಷಗಳಿಂದ ನಡೆಯುತ್ತಿತ್ತು, ಸುಮಾರು 250 ಕ್ಕೂ ಅಧಿಕ ಮನೆಗಳಿದ್ದು ಅಲ್ಲಿಯ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತುಂಬಾ ಅನುಕೂಲ ಆಗುವಂತೆ KSRTC ಪುತ್ತೂರು ವಿಭಾಗ ಕ್ಕೆ ಹಾಗೂKSRTC ಧರ್ಮಸ್ಥಳ ವಿಭಾಗಕ್ಕೆ ಹಾಗೂ ಮಾನ್ಯ ಶಾಸಕರಿಗೆ ಜುಲೈ 01.2024 ರಂದು KSRTC ಜನಸ್ಪಂದನಾ ಸಭೆಯ ಮೂಲಕ ಗ್ರಾಮಸ್ಥರ ಪರವಾಗಿ ನೀಡಿದ ಮನವಿಗೆ ಸ್ಪಂದಿಸಿ. ಬಸ್ ಸಂಚಾರ ವಿಸ್ತರಣೆ ಅನುಕೂಲ ಆಯಿತು.ಇಂದು ಬೆಳಗ್ಗೆ 7.30ಕ್ಕೆ ಸರಿಯಾಗಿ ಎರಡು KSRTC ಬಸ್ ಗಳನ್ನು ದಿಡುಪೆಯಿಂದ ಕಜಕ್ಕೆ ಭಾಗಕ್ಕೆ ವಿಶೇಷ ರೀತಿಯಲ್ಲಿ ಪುಟ್ಟ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಸೇರಿ ಹೂವಿನ ಅಲಂಕಾರ ಪುಷ್ಪಾರ್ಚನೆ ಹಾಗೂ ಸಿಹಿ ತಿಂಡಿ ಹಂಚಿ ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು . ಕರ್ನಾಟಕ ಸಾರಿಗೆ ವ್ಯವಸ್ಥೆಯ ಸಿಬ್ಬಂದಿ ವರ್ಗದವರಾದ ನಾರಾಯಣ ಪೂಜಾರಿ ಮುಂಡಾಜೆ ಹಾಗೂ ಚಾಲಕರು ಮತ್ತು ನಿರ್ವಾಹಕರಾದ ವಿನಾಯಚಂದ್ರ, ಕರುಣಾಕರ, ಮತ್ತು ದಯಾನಂದ ಇವರು ಉಪಸ್ಥಿರಿದ್ದರು. ಹಾಗೂ ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಕೇಶವ ಎಂ.ಕೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಲವಂತಿಗೆ ಅಧ್ಯಕ್ಷರಾದ ನಾರಾಯಣ ಗೌಡ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ತೀಕ್ಷಿತ್ ಕೆ.ಕಲ್ಬೆಟ್ಟುಶ್ರೀ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆಯ ಶಿಕ್ಷಕರಾದ ರಂಗನಾಥ ಮತ್ತು ಪರಮೇಶ್ವರ್ SDMC ಅಧ್ಯಕ್ಷರಾದ ಶೇಖರ ಗೌಡ ಪೊದ್ಕೆತರುಹಾಗೂ ಗ್ರಾಮಸ್ಥರಾದ ಮಧುಸೋದನ್ ಮಲ್ಲ, ಶೇಕರ ಗೌಡ ಹೊಳೆಕೆರೆ, ರಾಧಾಕೃಷ್ಣ ಗೌಡ ಮಜಲು,ರಮೇಶ್ ಗೌಡ ವಿದ್ಯಾನಗರ,ಸಚಿನ್ ಗೌಡ ಬದ್ಲಾಯಿ, ಶ್ರೀ ಹರಿ ಭಟ್ ಕಾರ್ಯದರ್ಶಿ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ಸಂಜೀವ ಗೌಡ ಪುನ್ಕೆದಡಿ, ರಮೇಶ್ ಗೌಡ,ಸಂಪತ್ ಪೂಜಾರಿ ಕಜಕ್ಕೆ,ಸಾಗರ್ ಅಡ್ಡಕೊಡಂಗೆ, ರಾಜೇಶ್ ಗೌಡ ಬರ್ಕಲಟ್ಟುಗ್ರಾಮಸ್ಥರು ಹಾಗೂ ಕಜಕ್ಕೆ ಶಾಲೆ ಪುಟಾಣಿಗಳು,ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥರಾದ ಉಮೇಶ್ ಗೌಡ ಸ್ವಾಗತಿಸಿ, ಮತ್ತು ಶ್ರೀ ವಿದ್ಯಾಗಣಪತಿ ಸೇವೆ ಸಮಿತಿಯ ಕಾರ್ಯದರ್ಶಿಗಳಾದ ಜಯಂತ ಹೆಗ್ಡೆ ಇವರು ವಂದನಾರ್ಪಣೆ ಮಾಡಿದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 280 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 297 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 198 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ