ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 55 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 52 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 49 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ