ಧರ್ಮಸ್ಥಳದ ಧೃತಿಯ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ತುರ್ತು ಆರ್ಥಿಕ ನೆರವು

ಮಂಗಳೂರು: ಧರ್ಮಸ್ಥಳ ಗ್ರಾಮದ ಅಗುಳೆ ಬೈಲು ನಿವಾಸಿ ದಿನೇಶ್ ಹಾಗೂ ಭಾರತಿ ದಂಪತಿಯ ಪುತ್ರಿ ಧೃತಿ ರಕ್ತ ಕಣಗಳ ಕೊರತೆಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ಆರ್ಥಿಕ ನೆರವಿನ ಆಸರೆ ಬೇಕಿದೆ

ರಕ್ತ ಹೀನತೆಯಿಂದ ಬಳಲಿದ ಮಗಳ ಸಂಕಟ ನೋಡಲಾಗದೇ ಆಕೆಗೆ ಚಿಕಿತ್ಸೆ ಕೊಡಿಸಲು ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಗುಣಮುಖಳಾಗಿಲ್ಲ ಈ ಬಾಲೆ,

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆ ನೀಡಿದಲ್ಲಿ ಗುಣಮುಖಳನ್ನಾಗಿಸಬಹುದು, ಅದಕ್ಕಾಗಿ ಲಕ್ಷಾಂತರ ರೂಪಾಯಿ ವ್ಯಯವಾಗುತ್ತದೆ ಎಂದಿದ್ದಾರೆ.

ಬಡ ಕುಟುಂಬದಲ್ಲಿರುವ ಈ ದಂಪತಿಗಳು ದಿನಾ ಕೂಲಿ ಕೆಲಸಗಳನ್ನು ಮಾಡಿ, ಅಷ್ಟೊಂದು ಹಣ ಎಲ್ಲಿಂದ ಹೊಂದಿಸುವುದು ಎಂದು ಕಂಗಾಲಾಗಿದ್ದಾರೆ.

ಧೃತಿ 4 ತಿಂಗಳ ಮಗುವಿದ್ದಾಗಲೇ ತಿಂಗಳಿಗೊಮ್ಮ ಜ್ವರ ಬರುತ್ತಿತ್ತು ಚಿಕಿತ್ಸೆ ನೀಡಿದಾಗ ಕಡಿಮೆಯಾಗುತ್ತಿತ್ತು. ಆದರೆ ಈ ಒಂದು ವರ್ಷದಿಂದ ಬಿಳಿರಕ್ತ ಕಣ ಹಾಗೂ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತಿವೆ. ಅದು ಯಾವ ಕ್ಷಣದಲ್ಲಿ ಕಡಿಮೆ ಆಗುತ್ತೆ ಎಂಬುದು ತಿಳಿಯುವುದಿಲ್ಲ ವಾರಕ್ಕೊಮ್ಮೆ ಈ ಸಮಸ್ಯೆ ಈ ಮಗುವನ್ನು ಕಾಡುತ್ತಿದ್ದು, ಚಿಕಿತ್ಸೆಗೆ ಕಡಿಮೆ ಎಂದರೂ ಪ್ರತಿ ತಿಂಗಳಿಗೆ 50 ಸಾವಿರಕ್ಕಿಂತಲೂ ಅಧಿಕ ಹಣ ಬೇಕಾಗುತ್ತದೆ.

ತಿಂಗಳಿಗೆ 2ಬಾರಿಯಾದರೂ ಚಿಕಿತ್ಸೆ ಕೊಡಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನ ಕಳೆದಂತೆ ಮಗುವಿನ ಆರೋಗ್ಯ ಸ್ಥಿತಿ ಜಟಿಲವಾಗುತ್ತಿದೆ. ಈ ಸಂಕಟದ ಜೊತೆ ಮತ್ತೊಂದು ನೋವು ಆ ಮಗುವನ್ನು ಭಾಧಿಸುತ್ತಿದ್ದು, ಇತ್ತೀಚೆಗೆ ಮೂಗಿನಿಂದ ಅಥವಾ ಬಾಯಿಯಿಂದ ರಕ್ತ ಸುರಿಯಲು ಪ್ರಾರಂಭವಾಗಿದೆ ಇಂತಹ ಪರಿಸ್ಥಿತಿಯಲ್ಲಿ ತಕ್ಷಣ ಚಿಕಿತ್ಸೆಯ ಅಗತ್ಯ ಇದ್ದು, ಒಂದು ವೇಳೆ ಸೂಕ್ತ ಚಿಕಿತ್ಸೆ ಮಾಡದಿದ್ದಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹಹದಗೆಡುವ ಸಾಧ್ಯತೆಯಿದೆ

ವೈದ್ಯರ ಸಲಹೆಯಂತೆ ಬೆಂಗಳೂರಿಗೆ ತೆರಳಿ ಮಗುವನ್ನು ಗುಣಪಡಿಸಬೇಕೆಂದರೆ ಈ ಬಡ ಕುಟುಂಬಕ್ಕೆ ಆರ್ಥಿಕ ಸಮಸ್ಯೆ ಏದುರಾಗಿದೆ. ಬೆಂಗಳೂರಿನಲ್ಲಿ ನಡೆಸುವ ಚಿಕಿತ್ಸೆಗೆ ಅಂದಾಜು 25ರಿಂದ 30ಲಕ್ಷ ದೊಡ್ಡ ಮೊತ್ತದ ಅವಶ್ಯಕತೆಯಿದೆ. ಈ ದೊಡ್ಡ ಮೊತ್ತವನ್ನು ಭರಿಸಲಾರದೆ ಮಗುವಿನ ತಂದೆ, ತಾಯಿ ಕಂಗಾಲಾಗಿದ್ದಾರೆ.

ಈ ಪುಟ್ಟ ಮಗುವಿನ ಆರೋಗ್ಯದ ಸಮಸ್ಯೆ ಪರಿಹರಿಸಲು ಕೊಡುಗೈ ದಾನಿಗಳ ಸಹಾಯ ಅತ್ಯಗತ್ಯವಾಗಿದೆ. ಈ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಸಹಕರಿಸಿ ಬಡ ಕುಟುಂಬಕ್ಕೆ ಆಸರೆಯಾಗಿ ಮಗುವಿಗೆ ಶೀಘ್ರದಲ್ಲಿಯೇ ಚಿಕಿತ್ಸೆ ನೀಡುವ ಸಲುವಾಗಿ ಧನ ಸಹಾಯ ಮಾಡುವವರು ಈ ಕೆಳಕಂಡ ಖಾತೆಗೆ ಹಣ ಜಮೆ ಮಾಡಬಹುದಾಗಿದೆ.

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್, ಧರ್ಮಸ್ಥಳ ಶಾಖೆ ದಿನೇಶ್ ಧರ್ಮಸ್ಥಳ
ಖಾತೆ ಸಂಖ್ಯೆ: 02462200015461
IFSC CODE: SYNB0000246
ಸಂಪರ್ಕ ಸಂಖ್ಯೆ:9008995557

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ