ಮೂಢನಂಬಿಕೆಯನ್ನು ಬದಿಗೊತ್ತಿ ರುಧ್ರಭೂಮಿಯನ್ನು ಸ್ವಚ್ಛಗೊಳಿಸಿದ ಧರ್ಮಸ್ಥಳದ ತರುಣರು

ಧರ್ಮಸ್ಥಳ: ದಕ್ಷಿಣ ಕನ್ನಡ ವಿದ್ಯಾವಂತ, ಬುದ್ದಿವಂತ ಜನರಿರುವ ಜಿಲ್ಲೆಯಾದರೂ ಮೂಢನಂಬಿಕೆಗೆ ಕುಖ್ಯಾತವಾಗಿದೆ. ಇಲ್ಲಿನ ಜನರು ಸ್ಮಶಾನದ ವಿಚಾರ ಎತ್ತಿದರೆ ಬಹುದೂರ ಓಡುತ್ತಾರೆ. ಇದಕ್ಕೆ ತದ್ವಿರುದ್ಧವಾಗಿ ಯುವಕರ ಗುಂಪೊಂದು ಸ್ಮಶಾನದಲ್ಲಿ ಶ್ರಮದಾನದೊಂದಿಗೆ ಉಪಹಾರ ಸೇವಿಸುವ ಮೂಲಕ ಮೂಢನಂಬಿಕೆಗೆ ಸಡ್ಡು ಹೊಡೆದು ಉಳಿದವರಿಗೆ ಮಾದರಿಯಾಗುವ ಘಟನೆ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ ನಡೆದಿದೆ.

ಹೌದು ವಿಜ್ಞಾನ ಎಷ್ಟೇ ಮುಂದುವರಿದರೂ ಕೂಡ ಸ್ಮಶಾನ ಎಂದಾಕ್ಷಣ ಜನರು ಎದ್ದುಬಿದ್ದು ಓಡುತ್ತಾರೆ. ಅದರಲ್ಲೂ ದ.ಕ ಜಿಲ್ಲೆಯ ಜನರು ಎಷ್ಟೇ ವಿದ್ಯಾವಂತ , ಬುದ್ದಿವಂತರಾದರೂ ಮೂಢನಂಬಿಕೆಗೆ ಬಲಿಯಾಗಿರುವುದು ಇತಿಹಾಸದ ದುರಂತ. ಆದರೆ ಇತಿಹಾಸ ಪ್ರಸಿದ್ಧ ಧರ್ಮಸ್ಥಳದ ಯುವಕರು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಮಶಾನ ಅಭಿವೃದ್ಧಿ ಸಮಿತಿ ಹಾಗೂ ಊರವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸ್ಮಶಾನದಲ್ಲಿ ಶ್ರಮದಾನ ನಡೆಯಿತು.

ಊರಿನ ಪ್ರಮುಖ ಸ್ಮಶಾನವು ಗಿಡಗಂಟಿ , ಪೊದೆಗಳಿಂದ ಆವೃತ್ತವಾಗಿತ್ತು. ಇಲ್ಲಿಗೆ ಬರುವವರಿಗೆ ಭಯವನ್ನು ಹುಟ್ಟಿಸುವಂತೆ ಪೊದೆಗಳಿತ್ತು. ಇದನ್ನರಿತ ಸ್ಥಳೀಯ ಗ್ರಾಮ ಪಂಚಾಯತ್ , ಸ್ಮಶಾನ ಅಭಿವೃದ್ಧಿ ಸಮಿತಿ ಹಾಗೂ ಊರವರು ಗಿಡಗಂಟಿ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಜೊತೆಗೆ ಸ್ಮಶಾನದಲ್ಲೇ ಉಪಹಾರ ಸೇವಿಸುವ ಮೂಲಕ ಜನ ಮಾನಸದಲ್ಲಿದ್ದ ಮೂಢನಂಬಿಕೆಗೆ ಸಡ್ಡು ಹೊಡೆದು ಧರ್ಮಸ್ಥಳ ಪರಿಸರದಲ್ಲಿ ಹೊಸ ಇತಿಹಾಸ ನಿರ್ಮಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ| ಜಯಕೀರ್ತಿ ಜೈನ್,ಪಂ ಅಭಿವೃದ್ಧಿ ಅಧಿಕಾರಿ ಉಮೇಶ್,ತಾಲೂಕು ಪಂ,ಸದಸ್ಯೆ ಧನಲಕ್ಷ್ಮಿ ಜನಾರ್ಧನ,ಬೆಳ್ತಂಗಡಿ ಬಿಜೆಪಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಪಂ ಮಾಜಿ ಸದಸ್ಯ ಸುಧಾಕರ ಗೌಡ,ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಪ್ರೀತಮ್, ಸಮಾಜ ಸೇವಕ ಪ್ರಭಾಕರ ರಾವ್ ಕನ್ಯಾಡಿ, ರಾಜೇಂದ್ರ ದಾಸ್, ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದು ಸಾಕ್ಷಿಯಾಗಿದ್ದರು.

Spread the love
  • Related Posts

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಸಕಲೇಶಪುರ: ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಹಾಸನ ಇದರ ಸಹಯೋಗದೊಂದಿಗೆ ಲಯನ್ಸ್ ಸೇವಾ ಮಂದಿರದಲ್ಲಿ…

    Spread the love

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಶ್ರೀ ಮೋಹನ್ ಪಿಬಿ,ಶ್ರೀ ಮಹೇಶ್ ಗುತ್ತಿಗಾರು, ನಿಡ್ಲೆಯ ಶ್ರೀ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಶ್ರೀ…

    Spread the love

    You Missed

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • October 25, 2025
    • 22 views
    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    • By admin
    • October 25, 2025
    • 17 views
    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    • By admin
    • October 25, 2025
    • 21 views
    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    • By admin
    • October 24, 2025
    • 67 views
    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 31 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 32 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ