ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ ಜಿಹಾದಿ ಡಾ. ಝಾಕೀರ್ ನಾಯಿಕ್ ಇವರ ಹಾಗೂ 100 ಕೋಟಿ ಹಿಂದೂಗಳನ್ನು ಮುಗಿಸುವ ಬಹಿರಂಗ ಬೆದರಿಕೆಯೊಡ್ಡುವ ‘ಎಮ್‌ಐ.ಎಮ್’ನ ಶಾಸಕ ಅಕ್ಬರುದ್ದೀನ್ ಓವೈಸಿ ಇವರ ‘ಫೇಸಬುಕ್ ಪೇಜ್’ ಮೇಲೆ ಏಕೆ ನಿಷೇಧ ಹೇರಿಲ್ಲ ? ಅನೇಕ ಜಿಹಾದಿ ಉಗ್ರವಾದಿ ಸಂಘಟನೆಗಳ ‘ಫೇಸಬುಕ್ ಪೇಜ್’ ಇಂದಿಗೂ ಜಿಹಾದ್‌ನ ಪ್ರಚಾರ ಮಾಡುತ್ತಿವೆ. ಆದುದರಿಂದ ‘ಫೇಸಬುಕ್’ ಭಾರತದಲ್ಲಿ ಮುಸಲ್ಮಾನರಿಗೊಂದು ಹಿಂದೂಗಳಿಗೆ ಮತ್ತೊಂದು ನಿಯಮ ಅಳವಡಿಸಿ ಧಾರ್ಮಿಕ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿಸ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಪ್ರಕರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಫೇಸಬುಕ್’ ತಕ್ಷಣವೇ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ಮುಂಚಿನಂತೆ ಆರಂಭಿಸಬೇಕು, ಇಲ್ಲದಿದ್ದರೆ ಹಿಂದೂ ಸಮಾಜಕ್ಕೇ ಫೇಸಬುಕ್ ನಿಷೇಧಿಸುವಂತೆ ಕರೆ ನೀಡಬೇಕಾಗುವುದು, ಎಂದು ಶ್ರೀ. ಶಿಂದೆಯವರು ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಲಭೆಗಳ ಸಮಯದಲ್ಲಿಯೂ ಮತಾಂಧರು ತಮ್ಮ ‘ಫೇಸ್‌ಬುಕ್ ಪೇಜ್’ನಲ್ಲಿ ಒಟ್ಟಿಗೆ ಸೇರಲು ಕರೆ ನೀಡಿದ್ದರು ಎಂಬುದು ತಿಳಿದುಬಂದಿದೆ. ಭಾರತದ ನಗರಗಳಲ್ಲಿ ಗಲಭೆಗಳಿಗೆ ಭುಗಿಲೆಬ್ಬಿಸಿದ ‘ಫೇಸ್‌ಬುಕ್ ಪೇಜ್’ನಲ್ಲಿ ಫೇಸ್‌ಬುಕ್ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಅದೇ ರೀತಿ ‘ಫೇಸಬುಕ್’ನಲ್ಲಿ ಇದುವರೆಗೆ ಅನೇಕ ಸಲ ಹಿಂದೂ ದೇವತೆಗಳು, ರಾಷ್ಟ್ರಪುರುಷರ ವಿಷಯದಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ಪೋಸ್ಟ್ ಪ್ರಸಾರಿತವಾಗುತ್ತಿವೆ. ಇದರ ಬಗ್ಗೆ ಹಿಂದೂತ್ವವಾದಿ ಸಂಘಟನೆಗಳು ಅನೇಕ ಬಾರಿ ‘ಫೇಸ್‌ಬುಕ್’ ಇಂತಹ ಪೋಸ್ಟ್ ಅಥವಾ ಪೇಜ್ ನಿರ್ಬಂಧಿಸುವಂತೆ ವಿನಂತಿಸಿವೆ; ಆದರೆ ಅದರ ಬಗ್ಗೆ ‘ಫೇಸಬುಕ್’ ಎಂದೂ ಕ್ರಮಕೈಗೊಂಡಿಲ್ಲ, ಇದು ‘ಫೇಸಬುಕ್’ನ ಪಕ್ಷಪಾತ!

ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಪುಟ’ವನ್ನೂ ಇದೇ ರೀತಿ 2012 ರಲ್ಲಿ ಯಾವುದೇ ರೀತಿಯ ಕಾರಣವನ್ನು ನೀಡದೇ ಫೇಸ್‌ಬುಕ್’ ಬಂದ್ ಮಾಡಿತ್ತು. ಇದರಿಂದ ‘ಫೇಸ್‌ಬುಕ್’ನ ಹಿಂದೂದ್ವೇಷ ಸ್ಪಷ್ಟವಾಗಿ ಕಾಣುತ್ತದೆ. ಶಾಸಕ ಟಿ. ರಾಜಾಸಿಂಹ ಇವರು ಜನಪ್ರತಿನಿಧಿಯಾಗಿದ್ದಾರೆ, ಅವರ ‘ಪೇಜ್’ ಬಂದ್ ಮಾಡಿದ್ದರಿಂದ ಜನಸಾಮಾನ್ಯರಿಗೆ ಅವರೊಂದಿಗೆ ನೇರ ಸಂಪರ್ಕ ಮಾಡಿ ಸಮಸ್ಯೆಗಳನ್ನು ಬಿಡಿಸುವಲ್ಲಿ ಅಡಚಣೆಯಾಗಲಿದೆ. ಆದ್ದರಿಂದ ಭಾರತ ಸರಕಾರವು ‘ಫೇಸ್‌ಬುಕ್’ನ ಈ ಹಿಂದೂವಿರೋಧಿ ಕೃತ್ಯಕ್ಕೆ ನಿರ್ಬಂಧ ಹೇರಬೇಕು, ಎಂದು ಕೇಂದ್ರ ಸರಕಾರದ ಬಳಿ ನಾವು ಆಗ್ರಹಿಸುತ್ತೇವೆ. ಶಾಸಕ ಟಿ. ರಾಜಾ ಸಿಂಹ ಇವರ ಫೇಸ್‌ಬುಕ್ ಪೇಜ್ ಬಂದ್ ಮಾಡುವುದೆಂದರೆ ಒಂದು ರೀತಿಯಲ್ಲಿ ಹಿಂದೂಜನರ ಧ್ವನಿಯನ್ನು ಅದುಮುವ ಕೆಲಸವನ್ನು ‘ಫೇಸ್‌ಬುಕ್’ ಮಾಡುತ್ತಿದೆ. ಭಾರತದಲ್ಲಿ ಕೋಟಿಗಟ್ಟಲೆ ರೂಪಾಯಿಯನ್ನು ಸಂಪಾಧಿಸುವ ಫೇಸ್‌ಬುಕ್ ಒಂದು ವೇಳೆ ಬಹುಸಂಖ್ಯಾತ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಲ್ಲಿ, ಹಿಂದೂಗಳೂ ‘ಫೇಸ್‌ಬುಕ್’ನ್ನು ಬಹಿಷ್ಕರಿಸುವರು, ಎಂಬುದು ‘ಫೇಸ್‌ಬುಕ್’ನವರು ಗಮನದಲ್ಲಿಡಬೇಕು.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 54 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 51 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 22 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 49 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ