ಸೈನಿಕರ ಶೌರ್ಯ, ಸಾಹಸ ದೇಶದ ಜನತೆಗೆ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ‘ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ’: ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿ

ಚೆನ್ನೈ: ಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ನಡೆದ ಭಯೋತ್ಪಾದಕರ ಆತ್ಮಹತ್ಯಾ ದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯವನ್ನು ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯ ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ನುಡಿದರು.

ತಮಿಳಿನ ಖ್ಯಾತ ಲೇಖಕ ಮತ್ತು ಕವಿ ಸುಬ್ರಹ್ಮಣ್ಯ ಭಾರತಿ ಅವರ ಮಾತುಗಳನ್ನು ಉಲ್ಲೇಖಿಸಿದ ಪ್ರಧಾನಿ, ಸುಬ್ರಹ್ಮಣ್ಯ ಭಾರತಿ ಅವರ ದೃಷ್ಟಿಕೋನದಿಂದ ಸ್ಪೂರ್ತಿ ಪಡೆದು ರಕ್ಷಣಾ ವಲಯದಲ್ಲಿ ಇಂದು ಭಾರತ ಸ್ವಾವಲಂಬಿಯಾಗಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ ಎಂದರು.

‘ನಾವು ಶಸ್ತ್ರಾಸ್ತ್ರಗಳನ್ನು ತಯಾರಿಸೋಣ, ಪೇಪರ್ ಗಳನ್ನು ತಯಾರಿಸೋಣ, ಫ್ಯಾಕ್ಟರಿಗಳನ್ನು ಮಾಡೋಣ, ಶಾಲೆಗಳು, ವಾಹನಗಳು, ಹಡಗು ನಿರ್ಮಿಸೋಣ, ಸ್ವಾವಲಂಬಿಗಳಾಗೋಣ’ ಎಂದು ಸುಬ್ರಹ್ಮಣ್ಯ ಭಾರತಿ ಹೇಳಿದ್ದರು. ಅವರ ಉಲ್ಲೇಖವನ್ನು ಪ್ರಧಾನಿ ನೆನಪು ಮಾಡಿಕೊಂಡರು.

ಎರಡು ರಕ್ಷಣಾ ಕಾರಿಡಾರ್ ಗಳಲ್ಲಿ ಒಂದು ತಮಿಳು ನಾಡಿನಲ್ಲಿದೆ. ಹೂಡಿಕೆಯ ಮೊತ್ತ ಅದಕ್ಕೆ 8 ಸಾವಿರದ 100 ಕೋಟಿ ರೂಪಾಯಿಯಾಗಿದೆ. ನಮ್ಮ ಗಡಿಗಳನ್ನು ಕಾಪಾಡಲು ಸೈನಿಕರಿಗೆ ಅಗತ್ಯವಾಗಿರುವ ಮತ್ತೊಂದು ಕಾರಿಡಾರನ್ನು ದೇಶಕ್ಕೆ ಸಮರ್ಪಿಸಲು ನನಗೆ ಇಂದು ಹೆಮ್ಮೆಯಾಗುತ್ತಿದೆ ಎಂದು ಮೋದಿ ಹೇಳಿದರು.

ಜಗತ್ತಿನಲ್ಲಿಯೇ ಅತ್ಯಂತ ಆಧುನಿಕ ಶಸ್ತ್ರಪಡೆಗಳನ್ನು ಹೊಂದಿದ ಸೇನಾಪಡೆಯನ್ನಾಗಿ ಭಾರತವನ್ನು ಮಾಡಲು ಸರ್ಕಾರ ಬದ್ಧವಾಗಿದ್ದು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಅದರೊಟ್ಟಿಗೆ ರಕ್ಷಣಾ ವಲಯದಲ್ಲಿ ಅತ್ಯಂತ ವೇಗವಾಗಿ ಸ್ವಾವಲಂಬನೆ ಸಾಧಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 42 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 20 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 37 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 62 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ