ಕಾಡಾನೆಗಳ ದಾಳಿ ಪ್ರಕರಣದಲ್ಲಿ ಪುಂಡಾಟ ನಡೆಸಿದ ಆರೋಪದಲ್ಲಿ 7ಜನರ ಬಂಧನ

ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಗಲಾಟೆ ನಡೆಸಿದ್ದರು.

ಇನ್ನು ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಆದ ಕಾರಣ ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಹೇಳಿದರೂ ಕೇಳದ ಆರೋಪಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ಗಲಾಟೆಯಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಜನರಿಗೆ ತಿಳುವಳಿಕೆ ಹೇಳಿದರೂ ಕೇಳದೆ ಆರೋಪಿತರು ಏಕಾಏಕಿ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ. ಕಲ್ಲು ತೂರಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೂ ಗಾಯಗಳಗಿರುತ್ತದೆ. ಬಳಿಕ ಆರೋಪಿಗಳು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿರುತ್ತಾರೆ ಎಂದು ಉಪ ವಲಯ ಅರಣ್ಯ ಅಧಿಕಾರಿಯವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ cr no 18/2023.ಕಲಂ:143,144,147,148,341,353,332,307,427,504,506 ಜೊತೆಗೆ 149 ಐ.ಪಿ.ಸಿ ಮತ್ತು ಕಲಂ: 2(ಬಿ),Karnataka Prevention of Distruction&loss Of Property Act-1981 ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ 7 ಜನ ಆರೋಪಿತರನ್ನು ದಸ್ತಗಿರಿ ಮಾಡಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 25 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 25 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 41 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 218 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 87 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 64 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ