“ಹಡಿಲು ಭೂಮಿ ಕೃಷಿ ಆಂದೋಲನ” ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯ “ಕೇದಾರೋತ್ಥಾನ” ಟ್ರಸ್ಟ್ ಅಧಿಕೃತ ಘೋಷಣೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆರಂಭಿಸಲಾಗಿರುವ “ಕೇದಾರೋತ್ಥಾನ”ಟ್ರಸ್ಟ್ ಇದರ ವತಿಯಿಂದ ಶಾಸಕರು ಹಾಗೂ ಟ್ರಸ್ಟಿಗಳಿಂದ ಕಾರ್ಯಕ್ರಮದ ಅಧಿಕೃತ ಘೋಷಣೆಯನ್ನು ಇಂದು ಅಮೃತ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಲಾಯಿತು.

“ಕೇದಾರೋತ್ಥಾನ” ಟ್ರಸ್ಟ್ ಅಧ್ಯಕ್ಷರು, ಉಡುಪಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಮಾತನಾಡಿ, ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳನ್ನು ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುವ ಉದ್ದೇಶದಿಂದ “ಹಡಿಲು ಭೂಮಿ ಕೃಷಿ ಆಂದೋಲನ” ಹಮ್ಮಿಕೊಳ್ಳಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಕೃಷಿ ಆಸಕ್ತರನ್ನು ಒಳಗೊಂಡ “ಕೇದಾರೋತ್ಥಾನ” ಟ್ರಸ್ಟ್ ಆರಂಭಿಸಲಾಗಿದೆ. ಈ ಟ್ರಸ್ಟ್ ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಅಧ್ಯಕ್ಷರಾಗಿರುತ್ತಾರೆ. ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಟ್ರಸ್ಟ್ ನ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕೇವಲ ಶೇಕಡಾ 30 ರಷ್ಟು ಮಾತ್ರ ಆಹಾರ ಉತ್ಪಾದನೆಯಾಗುತ್ತಿದ್ದು, ಶೇಕಡ 70ರಷ್ಟು ಹೊರಜಿಲ್ಲೆಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇಲ್ಲಿನ ಕೃಷಿ ಭೂಮಿಗಳು ಕಾರ್ಮಿಕರ ಸಮಸ್ಯೆ ಸೇರಿದಂತೆ ಕೆಲವೊಂದು ವ್ಯವಸ್ಥೆಯ ತೊಡಕುಗಳಿಂದ ಹಡಿಲು ಬಿದ್ದಿದೆ. ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಕೃಷಿ ಆಸಕ್ತರ ನೇತೃತ್ವದಲ್ಲಿ ಈ ಹಡಿಲು ಭೂಮಿಗಳನ್ನು ಗುರುತಿಸಿ ಭೂಮಿಯ ಮಾಲಕರ ಒಪ್ಪಿಗೆಯ ಮೇರೆಗೆ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡಲಾಗುವುದು. ಭೂಮಿಯ ಮಾಲಕರು ತಾವೇ ಕೃಷಿ ಮಾಡಲು ಬಯಸಿದ್ದಲ್ಲಿ ಅವರಿಗೆ ಸಹಕಾರವನ್ನು ನೀಡಲಾಗುವುದು. ಕೃಷಿ ಭೂಮಿ ಸುತ್ತಮುಲಿನಲ್ಲಿ ಸಮರ್ಪಕ ತೋಡುಗಳ ವ್ಯವಸ್ಥೆ, ಬೆಳೆದಿರುವ ಪೊದೆ, ಗಿಡಗಂಟೆ ಹಲ್ಲುಗಳನ್ನು ತೆಗೆದು ಸಮತಟ್ಟುಗೊಳಿಸಲು ಬೇಕಾಗುವ ಖರ್ಚು ವೆಚ್ಚಗಳು ಸೇರಿದಂತೆ ಕೃಷಿ ಚಟುವಟಿಕೆಗಳನ್ನು ನಡೆಸಲು ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ಟ್ರಸ್ಟ್ ಮೂಲಕ ಭರಿಸಲಾಗುವುದು.

ಉಡುಪಿ ಕ್ಷೇತ್ರದಾದ್ಯಂತ 2 ಸಾವಿರ ಎಕರೆ ಹಡಿಲು ಕೃಷಿ ಭೂಮಿಗಳನ್ನು ಕೃಷಿ ಮಾಡಲು ಯೋಜನೆ ರೂಪಿಸಲಾಗಿದೆ. ಒಂದು ಎಕರೆಗೆ ಸುಮಾರು 25 ಸಾವಿರ ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ದಾನಿಗಳ ಸಹಕಾರವನ್ನು ಬಯಸಿದ್ದು, ಆಸಕ್ತರು ಟ್ರಸ್ಟ್ ಮೂಲಕ ಸಹಾಯ ಮಾಡಬಹುದು. ಅಲ್ಲದೆ ಟ್ರಸ್ಟ್ ನಲ್ಲಿ ಹಣ ಜಮಾ ಮಾಡಬಹುದು. ಜಮಾ ಮಾಡಿದವರಿಗೆ ಅದನ್ನು ಬಂದ ಆದಾಯದಲ್ಲಿ ಹಿಂತಿರುಗಿಸುವುದು ಅಥವಾ ಅವರು ಬಯಸಿದಲ್ಲಿ ಅಕ್ಕಿಯನ್ನು ಪಡೆಯಬಹುದು. ಒಟ್ಟಾರೆಯಾಗಿ ದವಸ ಧಾನ್ಯಗಳ ಉತ್ಪಾದನೆ ಜೊತೆ ಅಂತರ್ಜಲ ಮಟ್ಟವೃದ್ದಿಯ ಉದ್ದೇಶದಿಂದ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಆಂದೋಲನ ಯಶಸ್ವಿಗೊಳಿಸಲು ಕ್ಷೇತ್ರದ ಜನತೆಯ ಸರಕಾರವನ್ನು ಬಯಸುತ್ತೇನೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಪ್ರಗತಿಪರ ಕೃಷಿಕರಾದ ಕುದಿ ಶ್ರೀನಿವಾಸ ಭಟ್, ಕೇದಾರೋತ್ಥಾನ ಟ್ರಸ್ಟ್ ಸದಸ್ಯರಾದ ಮುರಳಿ ಕಡೆಕಾರ್, ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ ಉಪಸ್ಥಿತರಿದ್ದರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ