ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು (Halashri Swameeji) ಕೊನೆಗೂ ಸಿಸಿಬಿ ಪೊಲೀಸರು (CCB police) ಬಂಧಿಸಿದ್ದಾರೆ.

ಪ್ರಕರಣ ದಾಖಲಾದ ದಿನದಿಂದಲೇ ನಾಪತ್ತೆಯಾಗಿದ್ದ ಸ್ವಾಮೀಜಿ ಈಗ ಸೆರೆಸಿಕ್ಕಿದ್ದು ಒಡಿಶಾ ರಾಜ್ಯದ ಕಟಕ್‌ನಲ್ಲಿ!

ಅಂದರೆ ಊರು ಬಿಟ್ಟು ಎಲ್ಲಾದರೂ ಹೋಗಿ ತಪ್ಪಿಸಿಕೊಳ್ಳುತ್ತೇನೆ ಎಂದು ಹೊರಟಿದ್ದ ಅವರು ಈಗ ಸಿಸಿಬಿಯ ಕೈಗೆ ಸಿಕ್ಕಿಬಿದ್ದಿದ್ದಾರೆ.ಉದ್ಯಮಿ ಗೋವಿಂದ ಪೂಜಾರಿಗೆ (Govinda Poojari) ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP ticket) ಕೊಡಿಸುವ ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನಾ ಜಾಲದಲ್ಲಿ ಪ್ರಮುಖ ಕೊಂಡಿ ಈ ಸ್ವಾಮೀಜಿ. ಗೋವಿಂದ ಪೂಜಾರಿಯಿಂದ ನೇರವಾಗಿ 1.5 ಕೋಟಿ ರೂ. ಸ್ವೀಕರಿಸಿದ್ದ ಸ್ವಾಮೀಜಿ ಪ್ರಕರಣ ಕುತ್ತಿಗೆಗೆ ಬರುತ್ತದೆ ಎಂದು ಹೇಳುವಾಗ ಕಂತು ಕಂತಿನಲ್ಲಿ ನಿಮ್ಮ ಹಣ ವಾಪಸ್‌ ಮಾಡುತ್ತೇನೆ ಎಂದು ಅಂಗಲಾಚಿದ್ದರು. ಆದರೆ, ಗೋವಿಂದ ಪೂಜಾರಿ ಕೇಸು ದಾಖಲಿಸಿಯೇಬಿಟ್ಟಾಗ ತಲೆಮರೆಸಿಕೊಂಡರು.ಗೋವಿಂದ ಪೂಜಾರಿಯನ್ನು ಮಠಕ್ಕೆ ಕರೆಸಿಕೊಂಡು ಮಾತನಾಡಿ, ಬೆಂಗಳೂರಿನ ಆಶ್ರಮದಲ್ಲಿ ಹಣ ಸ್ವೀಕರಿಸಿದ್ದ ಸ್ವಾಮೀಜಿ ಈ ಹಣವನ್ನು ಬಳಸಿಕೊಂಡು ಪೆಟ್ರೋಲ್‌ ಪಂಪ್‌, ಜಾಗ ಮತ್ತು ಕಾರು ಖರೀದಿಸಿದ್ದರು. ಗೋವಿಂದ ಪೂಜಾರಿ ದೂರು ದಾಖಲಿಸುತ್ತೇನೆ ಎಂದಾಗ ಅದರಲ್ಲಿ 50 ಲಕ್ಷ ರೂ.ಯನ್ನು ವಾಪಸ್‌ ಕೊಟ್ಟಿದ್ದರೆನ್ನಲಾಗಿದೆ.

ಡ್ರೈವರ್‌ ನೀಡಿದ ಸುಳಿವಿನಿಂದ ಸಿಕ್ಕಿಬಿದ್ದರಾ?

ಕಣ್ಮರೆಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಂದು ಕಡೆ ಕಣ್ಮರೆಯಾಗಿದ್ರೂ ಇನ್ನೊಂದು ಕಡೆ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಯಾರೊಂದಿಗೋ ಅವರು ಕನೆಕ್ಷನ್‌ನಲ್ಲಿರುವುದು ಸ್ಪಷ್ಟವಾಗಿತ್ತು. ಪೊಲೀಸರು ಅವರ ಕಾರು ಚಾಲಕನನ್ನು ತಂದು ವಿಚಾರಣೆಗೆ ಒಳಪಡಿಸಿದ್ದರು. ಆತನ ಬಳಿ ಹೆಚ್ಚು ಮಾಹಿತಿ ಸಿಗಲಿಲ್ಲವಾದರೂ ಅವನ ಮೇಲೂ ಒಂದು ಕಣ್ಣಿಟ್ಟಿದ್ದರು. ಹೀಗಾಗಿ ಅವನ ಫೋನ್‌ಗೆ ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿಯನ್ನು ಟ್ರ್ಯಾಕ್‌ ಮಾಡಲಾಯಿತು ಎನ್ನಲಾಗುತ್ತಿದೆ.ಹೈದರಾಬಾದ್‌ ಮೂಲಕ ಕಟಕ್‌ಗೆ ಹೋಗಿದ್ದರು ಹಾಲಶ್ರೀ ಸ್ವಾಮೀಜಿ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಇದ್ದರು. ಒಂದು ಕಡೆ ನಿರೀಕ್ಷಣಾ ಜಾಮೀನು ಸಿಗುತ್ತಿಲ್ಲ, ಇನ್ನೊಂದು ಕಡೆ ಪೊಲೀಸರು ಬಿಡುತ್ತಿಲ್ಲ ಎಂಬ ಕಾರಣದಿಂದ ಭಯಗೊಂಡು ಹೈದರಾಬಾದ್‌ಗೆ ಹೋಗಿದ್ದರು. ಅಲ್ಲಿಂದ ಒಡಿಶಾದ ಕಟಕ್‌, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್‌ ಹೊಂದಿದ್ದರು ಎನ್ನಲಾಗಿದೆ. ಆದರೆ, ಇದರ ಸುಳಿವು ಪಡೆದ ಸಿಸಿಬಿ ಪೊಲೀಸರು ಕಟಕ್‌ನಲ್ಲಿ ಅವರನ್ನು ವಶಕ್ಕೆ ಪಡೆದಿದೆ.ಸಿಸಿಬಿಯ ಮೂರು ವಿಶೇಷ‌ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಹಾಲಶ್ರೀ ಪ್ರತಿ ಒಂದೊಂದು ಗಂಟೆಗೆ ಒಂದೊಂದು ಲೊಕೇಶನ್‌ ಚೇಂಜ್ ಮಾಡುತ್ತಿದ್ದುದರಿಂದ ಅವರು ಪರಾರಿಯಾಗುತ್ತಿರುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಈಗ ಲೊಕೇಶನ್‌ಗಳ ಆಧಾರದಲ್ಲಿ ಬಂಧಿಸಲಾಗಿದೆ.

ಇಂದು ಸಂಜೆ ಬೆಂಗಳೂರಿಗೆ ಕರೆತರುವ ಸಾಧ್ಯತೆಒಡಿಶಾದಲ್ಲಿ ಬಂಧಿತರಾಗಿರುವ ಅಭಿವನ ಹಾಲಶ್ರೀಯನ್ನು ಈಗ ಅಲ್ಲಿನ ಪೊಲೀಸ್‌ ಠಾಣೆಗೆ ಹಾಜರುಪಡಿಸಿ ಬಳಿಕ ವಿಮಾನದ ಮೂಲಕ ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುವ ಸಾಧ್ಯತೆ ಇದೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 63 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ