ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ

HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಇಂದು ಸಂಸದರಾದ ಶ್ರೇಯಸ್ ಎಂ. ಪಟೇಲ್ ಅವರು ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಪುಷ್ಪ ಕಲಾಕೃತಿಗಳ ಹಾಗೂ ಮತ್ತಿತರ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ತುಂಬಾ ಸುಂದರವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಣೆ ಮಾಡುವಂತೆ ತಿಳಿಸಿದರು.

ಹಾಸನ ಜಿಲ್ಲೆಯು ಹಲವು ವಿಶ್ವವಿಖ್ಯಾತ ಪ್ರೇಕ್ಷಣೀಯ ತಾಣಗಳನ್ನೊಳಗೊಂಡಿದ್ದು, ಶಿಲ್ಪಕಲೆಗಳ ತವರೂರಾಗಿದೆ. ಈ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳನ್ನು ವಿವಿಧ ಫಲಪುಷ್ಪಗಳಿಂದ ಅಲಂಕರಿಸಿ ಪ್ರದರ್ಶಿಸುವ ಮೂಲಕ ಹಾಸನದ ಇತಿಹಾಸದ ವೈಭವವನ್ನು ಮರುಕಳಿಸುವುದು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನದ ವಿಶೇಷತೆ:

ಹನ್ನೆರಡನೇ ಶತಮಾನದಲ್ಲಿ ಹೋಯ್ಸಳ ರಾಜರು ಕಟ್ಟಿಸಿರುವ ನಕ್ಷತ್ರಾಕಾರದ ವೇದಿಕೆಯ ಮೇಲೆ ನಿಂತಿರುವ ಚೆನ್ನಕೇಶವ ದೇವಾಲಯವು ತನ್ನ ಸುಂದರ ಶಿಲ್ಪಕಲೆ, ಅದ್ಭುತ ವರ್ಣಚಿತ್ರಗಳು ಹಾಗೂ ಶಿಲಾಸೃಷ್ಟಿಗೆ ಜಗದ್ವಿಖ್ಯಾತವಾಗಿದ್ದು, ಈ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಿರುವುದು ನೋಡುಗರನ್ನು ಆಕರ್ಶಿಸುತ್ತದೆ

ಹೋಯ್ಸಳ ಸಾಮ್ರಾಜ್ಯದ ಸಾಮರ್ಥ್ಯ, ಸಾಹಸ ಮತ್ತು ವಿಜಯದ ಸಂಕೇತವಾಗಿರುವ ಹೋಯ್ಸಳ ಲಾಂಛನ ಮತ್ತು ಕರ್ನಾಟಕದ ಶ್ರೀ ಶೈಲವೆಂದೇ ಹೆಸರುವಾಸಿಯಾಗಿರುವ ಶಿವನಿಗೆ ಸಮರ್ಪಿತವಾದ ಹಳೆಬೀಡಿನ ಹೋಯ್ಸಳೇಶ್ವರ ದೇವಾಲಯವನ್ನು ಮರಳು ಬಳಸಿ ಕಲಾತ್ಮಕ ರೂಪದಲ್ಲಿ ರಚಿಸಿ ಪ್ರದರ್ಶಿಸಲಾಗಿದೆ.

ಶಾಂತಿ, ಅಹಿಂಸೆ, ತ್ಯಾಗ ಮತ್ತು ಸರಳ ಜೀವನದ ಸಂದೇಶವನ್ನು ಸಾರುವ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟದ ಮೇಲೆ ನಿಂತಿರುವ ವಿಶ್ವದ ಅತಿ ಎತ್ತರದ ಏಕಶಿಲಾ ಪ್ರತಿಮೆಯೆಂದೇ ಪ್ರಸಿದ್ದವಾಗಿರುವ ಗೊಮ್ಮಟೇಶ್ವರ ಪ್ರತಿಮೆಯನ್ನು ಪ್ರದರ್ಶಿಸಲಾಗಿದೆ.

ಮಾನವ ಕುಲದ ಕಲ್ಯಾಣಕ್ಕಾಗಿ ಜನಿಸಿ, ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ಪಸರಿಸಿ, ಆಸೆಯೇ ದು:ಖಕ್ಕೆ ಮೂಲವೆಂದು ತಿಳಿಸಿದ ಗೌತಮ ಬುದ್ದನ ಪ್ರತಿಮೆಯನ್ನು ಪ್ರದರ್ಶಿಸಿರುವುದು ಆಕರ್ಷಕವಾಗಿದೆ.

ಹಾಸನದ ಬಾಹ್ಯಾಕಾಶ ಮುಖ್ಯ ನಿಯಂತ್ರಣಾ ಸೌಲಭ್ಯ (ಒಅಈ) ರವರ ವತಿಯಿಂದ ಉಪಗ್ರಹಗಳ ಮಾದರಿಗಳನ್ನು ಪ್ರದರ್ಶಿಸಲಾಗುತ್ತದೆ.

ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ಜಲಾಶಯದ ಪ್ರತಿಕೃತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ.

ವಿವಿಧ ಹಣ್ಣು ಮತ್ತು ತರಕಾರಿಗಳನ್ನು ಬಳಸಿ ಬಗೆ ಬಗೆಯ ಪ್ರಾಣಿ ಪಕ್ಷಿಗಳನ್ನು ಕೆತ್ತನೆ ಮಾಡಿರುವುದು ನೋಡುಗರ ಕಣ್ಮನ ಸೆಳೆಯುವಂತಿದೆ. ವಿವಿಧ ಬಗೆಯ ಲಕ್ಷಾಂತರ ಹೂಗಳಿಂದ ಅಲಂಕೃತಗೊAಡಿರುವ ಮಂಜರಾಬಾದ್ ಕೋಟೆ, ಬೆಟ್ಟದಿಂದ ಬಟ್ಟಲಿಗೆ ಕಾಫಿಯ ಪಯಣ, ಸೆಲ್ಫಿ ಪಾಯಿಂಟ್ ಇನ್ನಿತರೆ ಪ್ರದರ್ಶಿಕೆಗಳು ಜನರ ಕಣ್ಮನ ಸೆಳೆಯುತ್ತಿವೆ.

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಅಲಂಕಾರ , ಕೃಷಿ ಪರಿಕರಗಳು, ಕೀಟ ನಾಶಗಳು, ಮೀನುಗಾರಿಕೆ ವತಿಯಿಂದ ಅಲಂಕಾರಿಕ ಮೀನುಗಳು ಸೇರಿದಂತೆ ಅರಣ್ಯ ಇಲಾಖೆ ವತಿಯಿಂದ ವಿಶೇಷವಾಗಿ ಆನೆಗಳ ಕಲಾಕೃತಿಗಳು ಜನರನ್ನು ಆಕರ್ಶಿಸುತ್ತದೆ. ಹಾಗೂ ವಿವಿಧ ಇಲಾಖೆ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿದೆ.

ನಗರಸಭೆ ಅಧ್ಯಕ್ಷರಾದ ಚಂದ್ರೇಗೌಡ ಎಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಗಳಾದ ಕೆ.ಟಿ ಶಾಂತಲಾ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರಮೇಶ್ ಕುಮಾರ್ ಪಿ, ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಸುಜಾತ ನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Spread the love
  • Related Posts

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ…

    Spread the love

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ