ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು

ಇಂದಿನ ದಿನಗಳಲ್ಲಿ ಹಾರ್ಟ್‌ ಅಟ್ಯಾಕ್‌ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್‌ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ ದಿನಗಳಲ್ಲಿ ಯುವಕರನ್ನು ಸಹ ಬಿಡುತ್ತಿಲ್ಲ. ಅಂದರೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅನೇಕ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅದರಲ್ಲೂ ವಿಶೇಷವಾಗಿ ಪುರುಷರು ಹೆಚ್ಚಾಗಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯವಾಗಿ ನಾನಾ ಕಾರಣಗಳಿವೆ. ಅದರಲ್ಲಿ ಜೀವನಶೈಲಿ, ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳು, ಮಾನಸಿಕ ಒತ್ತಡ, ಅನುವಂಶಿಕ ಸಮಸ್ಯೆಗಳು ಪ್ರಮುಖವಾಗಿದೆಅನೇಕ ಪುರುಷರು ಆಫೀಸಿನಲ್ಲಿ ಗಂಟೆಗಳ ಕಾಲ ಕುಳಿತಲ್ಲೇ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಅಲ್ಲದೇ ತರಕಾರಿಗಳು ಮತ್ತು ಹಣ್ಣುಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸುವ ಬದಲು ಜಂಕ್ ಫುಡ್‌ಗಳ ಮೊರೆ ಹೋಗಿದ್ದಾರೆ. ಇವುಗಳ ಸೆವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.ಇದರಿಂದಾಗಿ ಹೃದಯಕ್ಕೆ ಸಾಕಷ್ಟು ರಕ್ತದ ಹರಿವು ಆಗುವುದಿಲ್ಲ. ಹೃದಯಕ್ಕೆ ಆಮ್ಲಜನಕದ ಪೂರೈಕೆ ಕೂಡ ಕಡಿಮೆ ಆಗುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

ಹಾರ್ಟ್ ಅಟ್ಯಾಕ್ಗೆ ಮತ್ತೊಂದು ಪ್ರಮುಖ ಕಾರಣವೆಂದರೆ ಮಾನಸಿಕ ಒತ್ತಡ. ಪುರುಷರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಸದಾ ಒತ್ತಡದ ಮಧ್ಯೆ ಭವಿಷ್ಯದ ಬಗ್ಗೆ ಚಿಂತಿಸುತ್ತಾರೆ.ಈ ಒತ್ತಡವು ಹೃದಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು. ಇಂತಹ ಸಮಯದಲ್ಲಿ ದುಃಖ ಮತ್ತು ನಕಾರಾತ್ಮಕ ಭಾವನೆಗಳು ಹೃದಯ ಬಡಿತವನ್ನು ಹೆಚ್ಚಿಸುತ್ತವೆ ಮತ್ತು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತವೆ.ಅಲ್ಲದೇ ದೈಹಿಕ ಚಟುವಟಿಕೆಯ ಕೊರತೆ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಿದೆ.

ಅನೇಕ ಪುರುಷರು ಕಚೇರಿಗಳಲ್ಲಿ ದೀರ್ಘಕಾಲ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಹೀಗೆ ಕುರ್ಚಿಯ ಮೇಲೆ ಹೆಚ್ಚು ಸಮಯ ಕುಳಿತುಕೊಂಡೇ ಕಳೆಯುವುದರಿಂದ ದೇಹಕ್ಕೆ ಯಾವುದೇ ವ್ಯಾಯಾಮ ಸಿಗುವುದಿಲ್ಲ. ದೈಹಿಕ ವ್ಯಾಯಾಮದ ಕೊರತೆಯು ದೇಹದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತದೆ. ಆದರೆ, ಇದು ಹೃದಯಕ್ಕೆ ಅಪಾಯಕಾರಿ ಆಗಿದೆ.ಪುರುಷರಲ್ಲಿ ಆನುವಂಶಿಕ ಹೃದಯ ಅಸ್ವಸ್ಥತೆಗಳು ಪ್ರಮುಖ ಅಂಶವಾಗಿದೆ. ವಯಸ್ಕರಿಗೆ ಹೃದ್ರೋಗ, ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿದ್ದರೆ, ಆ ಸಮಸ್ಯೆಗಳನ್ನು ಆನುವಂಶಿಕವಾಗಿ ಪಡೆಯಬಹುದು. ಇದರರ್ಥ ಹೃದಯಾಘಾತಕ್ಕೆ ಒಳಗಾದ ಅಜ್ಜಿಯರು ಅಥವಾ ಇತರ ಕುಟುಂಬದ ಸದಸ್ಯರು ಅನುಭವಿಸಿದ ಅಪಾಯ ನಿಮಗೂ ಆಗಬಹುದು.

ಇವುಗಳಲ್ಲದೇ ಧೂಮಪಾನ, ಮದ್ಯಪಾನ ಮತ್ತು ಅಧಿಕ ತೂಕ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಧೂಮಪಾನವು ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ಅಧಿಕ ತೂಕವು ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.ಒಟ್ಟಾರೆ, ಪುರುಷರಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಜೀವನಶೈಲಿ, ಅವರ ಆಹಾರ ಪದ್ಧತಿ, ದೈಹಿಕ ವ್ಯಾಯಾಮ, ಮಾನಸಿಕ ಒತ್ತಡ ಮತ್ತು ಅನುವಂಶಿಕ ಅಂಶಗಳ ಮೇಲೆ ಅವಲಂಬಿತವಾಗಿದೆ. ನಾವು ಪ್ರತಿದಿನ ನಮ್ಮ ಜೀವನಶೈಲಿಯ ಬಗ್ಗೆ ಕೇಂದ್ರೀಕರಿಸುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 231 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 293 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 195 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ