ಪುರುಷರಿಗೆ ಹಾರ್ಟ್ ಅಟ್ಯಾಕ್ ಆಗೋಕೆ ಇವೇ ಪ್ರಮುಖ ಕಾರಣಗಳು

ಇಂದಿನ ದಿನಗಳಲ್ಲಿ ಹಾರ್ಟ್‌ ಅಟ್ಯಾಕ್‌ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಹಲವರಿಗೆ ಎದೆ ನೋವು ಬಂದ ತಕ್ಷಣ ಹಾರ್ಟ್‌ಅಟ್ಯಾಕ್‌ ಆಗುತ್ತೆ. ಇದು ಯಾರಿಗೆ ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಆಗಬಹುದು. ಮೊದಲೆಲ್ಲಾ ವಯಸ್ಸಾದವರಿಗೆ ಹೆಚ್ಚಾಗಿ ಆಗುತ್ತಿದ್ದ ಹಾರ್ಟ್ ಅಟ್ಯಾಕ್ ಇತ್ತೀಚಿನ ದಿನಗಳಲ್ಲಿ ಯುವಕರನ್ನು ಸಹ ಬಿಡುತ್ತಿಲ್ಲ. ಅಂದರೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಅನೇಕ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಅದರಲ್ಲೂ ವಿಶೇಷವಾಗಿ ಪುರುಷರು ಹೆಚ್ಚಾಗಿ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯವಾಗಿ ನಾನಾ ಕಾರಣಗಳಿವೆ. ಅದರಲ್ಲಿ ಜೀವನಶೈಲಿ, ಆಹಾರ ಪದ್ಧತಿ, ದೈಹಿಕ ಚಟುವಟಿಕೆಗಳು, ಮಾನಸಿಕ ಒತ್ತಡ, ಅನುವಂಶಿಕ ಸಮಸ್ಯೆಗಳು ಪ್ರಮುಖವಾಗಿದೆಅನೇಕ ಪುರುಷರು ಆಫೀಸಿನಲ್ಲಿ ಗಂಟೆಗಳ ಕಾಲ ಕುಳಿತಲ್ಲೇ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಅಲ್ಲದೇ ತರಕಾರಿಗಳು ಮತ್ತು ಹಣ್ಣುಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸುವ ಬದಲು ಜಂಕ್ ಫುಡ್‌ಗಳ ಮೊರೆ ಹೋಗಿದ್ದಾರೆ. ಇವುಗಳ ಸೆವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ.ಇದರಿಂದಾಗಿ ಹೃದಯಕ್ಕೆ ಸಾಕಷ್ಟು ರಕ್ತದ ಹರಿವು ಆಗುವುದಿಲ್ಲ. ಹೃದಯಕ್ಕೆ ಆಮ್ಲಜನಕದ ಪೂರೈಕೆ ಕೂಡ ಕಡಿಮೆ ಆಗುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು.

ಹಾರ್ಟ್ ಅಟ್ಯಾಕ್ಗೆ ಮತ್ತೊಂದು ಪ್ರಮುಖ ಕಾರಣವೆಂದರೆ ಮಾನಸಿಕ ಒತ್ತಡ. ಪುರುಷರು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಸದಾ ಒತ್ತಡದ ಮಧ್ಯೆ ಭವಿಷ್ಯದ ಬಗ್ಗೆ ಚಿಂತಿಸುತ್ತಾರೆ.ಈ ಒತ್ತಡವು ಹೃದಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು. ಇಂತಹ ಸಮಯದಲ್ಲಿ ದುಃಖ ಮತ್ತು ನಕಾರಾತ್ಮಕ ಭಾವನೆಗಳು ಹೃದಯ ಬಡಿತವನ್ನು ಹೆಚ್ಚಿಸುತ್ತವೆ ಮತ್ತು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತವೆ.ಅಲ್ಲದೇ ದೈಹಿಕ ಚಟುವಟಿಕೆಯ ಕೊರತೆ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣವಾಗಿದೆ.

ಅನೇಕ ಪುರುಷರು ಕಚೇರಿಗಳಲ್ಲಿ ದೀರ್ಘಕಾಲ ಕುಳಿತುಕೊಂಡು ಕೆಲಸ ಮಾಡುತ್ತಾರೆ. ಹೀಗೆ ಕುರ್ಚಿಯ ಮೇಲೆ ಹೆಚ್ಚು ಸಮಯ ಕುಳಿತುಕೊಂಡೇ ಕಳೆಯುವುದರಿಂದ ದೇಹಕ್ಕೆ ಯಾವುದೇ ವ್ಯಾಯಾಮ ಸಿಗುವುದಿಲ್ಲ. ದೈಹಿಕ ವ್ಯಾಯಾಮದ ಕೊರತೆಯು ದೇಹದಲ್ಲಿ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತದೆ. ಆದರೆ, ಇದು ಹೃದಯಕ್ಕೆ ಅಪಾಯಕಾರಿ ಆಗಿದೆ.ಪುರುಷರಲ್ಲಿ ಆನುವಂಶಿಕ ಹೃದಯ ಅಸ್ವಸ್ಥತೆಗಳು ಪ್ರಮುಖ ಅಂಶವಾಗಿದೆ. ವಯಸ್ಕರಿಗೆ ಹೃದ್ರೋಗ, ಮಧುಮೇಹ ಅಥವಾ ಅಧಿಕ ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳಿದ್ದರೆ, ಆ ಸಮಸ್ಯೆಗಳನ್ನು ಆನುವಂಶಿಕವಾಗಿ ಪಡೆಯಬಹುದು. ಇದರರ್ಥ ಹೃದಯಾಘಾತಕ್ಕೆ ಒಳಗಾದ ಅಜ್ಜಿಯರು ಅಥವಾ ಇತರ ಕುಟುಂಬದ ಸದಸ್ಯರು ಅನುಭವಿಸಿದ ಅಪಾಯ ನಿಮಗೂ ಆಗಬಹುದು.

ಇವುಗಳಲ್ಲದೇ ಧೂಮಪಾನ, ಮದ್ಯಪಾನ ಮತ್ತು ಅಧಿಕ ತೂಕ ಕೂಡ ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಧೂಮಪಾನವು ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ಅಧಿಕ ತೂಕವು ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.ಒಟ್ಟಾರೆ, ಪುರುಷರಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಜೀವನಶೈಲಿ, ಅವರ ಆಹಾರ ಪದ್ಧತಿ, ದೈಹಿಕ ವ್ಯಾಯಾಮ, ಮಾನಸಿಕ ಒತ್ತಡ ಮತ್ತು ಅನುವಂಶಿಕ ಅಂಶಗಳ ಮೇಲೆ ಅವಲಂಬಿತವಾಗಿದೆ. ನಾವು ಪ್ರತಿದಿನ ನಮ್ಮ ಜೀವನಶೈಲಿಯ ಬಗ್ಗೆ ಕೇಂದ್ರೀಕರಿಸುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Spread the love
  • Related Posts

    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ…

    Spread the love

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    You Missed

    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    • By admin
    • October 24, 2025
    • 18 views
    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 26 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 25 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 44 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 220 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 88 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ