ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ ‘ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮ ಸಂಪನ್ನ ಹೊಸ ವರ್ಷವನ್ನು ಯುಗಾದಿಯಂದೇ ಆಚರಿಸಲು ಯುವಕ-ಯುವತಿಯರಿಂದ ಪ್ರತಿಜ್ಞೆ !



ಮಂಗಳೂರು: ದಿನಾಂಕ ೨೫.೧೨.೨೦೨೦ ರಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆನ್ಲೈನ್ ಮೂಲಕ “ಹಿಂದೂ ಸಂಸ್ಕೃತಿ – ನಮ್ಮ ಹೆಮ್ಮೆ” ಎಂಬ ಉಪನ್ಯಾಸ ವನ್ನು ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ೩೫೦ ಕ್ಕೂ ಅಧಿಕ ಯುವಕ ಮತ್ತು ಯುವತಿಯರು ಭಾಗವಹಿಸಿದ್ದರು. ಈ ಉಪನ್ಯಾಸವನ್ನು  ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ ಇವರು ನೀಡಿದರು, ಹಾಗೆಯೇ ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ರಮೇಶ ರಾಯಚೂರು ಇವರು ಕಾರ್ಯಕ್ರಮದ ನಿರೂಪಣೆಯನ್ನು  ಮಾಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಯುವಕ-ಯುವತಿಯರು ಆನ್‌ಲೈನ್ ಮೂಲಕ ಪಾಲ್ಗೊಂಡು ಡಿಸೆಂಬರ್ ೩೧ ರಂದು ಅಲ್ಲ ಯುಗಾದಿಯಂದೇ ಹೊಸ ವರ್ಷ ಆಚರಿಸಲು ಪ್ರತಿಜ್ಞೆ ಮಾಡಿದರು.

ಈ ವೇಳೆ ಸೌ. ಪೈಯವರು ಮಾತನಾಡುತ್ತಾ “ಜೂಲಿಯಸ್ ಸಿಸರ್ ನಿಂದ ನಿರ್ಮಾಣ ವಾದ ಜನವರಿ ೧ ರಂದು ಆಚರಿಸುವ ಹೊಸ ವರ್ಷ ತುಂಬಾ ಇತ್ತೀಚಿನದ್ದು, ಇದಕ್ಕೆ ಯಾವುದೇ ಐತಿಹಾಸಿಕ, ನೈಸರ್ಗಿಕ ಕಾರಣಗಳು ಇಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡುವುದಕ್ಕೆ ಪೌರಾಣಿಕ, ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳು ಇದೆ. ಇದೇ ದಿನ ಬ್ರಹ್ಮ ದೇವರು ಸೃಷ್ಟಿಯನ್ನು ನಿರ್ಮಾಣ ಮಾಡಿದರು, ಶಾಲಿವಾಹನ ಶಕೆ ಪ್ರಾರಂಭವಾದದ್ದು ಕೂಡ ಇದೇ ದಿನ. ವಾತಾವರಣದಲ್ಲಿ ಸಮಶೀತೋಷ್ಣ ಇರುವ ನೈಸರ್ಗಿಕ ಕಾರಣಗಳನ್ನು ಹೊಂದಿರುವ ಯುಗಾದಿಯಂದು ಹೊಸ ಆಚರಣೆ ಮಾಡುವುದು ಭಾರತೀಯ ಹವಾಗುಣ, ಭಾರತದ ಸಂಸ್ಕೃತಿಗೆ ಅತ್ಯಂತ ಪೂರಕವಾಗಿದೆ. ಸೂರ್ಯೋದಯದ ನಂತರ ಪೂಜೆಯೊಂದಿಗೆ ಹೊಸ ವರ್ಷ ಆಚರಣೆ ಮಾಡುವುದು ಭಾರತೀಯ ಸಂಸ್ಕೃತಿಯಾಗಿದೆಯೇ ವಿನಃ ಮಧ್ಯ ರಾತ್ರಿ ಮದ್ಯ ಕುಡಿದು ಹೊಸ ವರ್ಷಾಚರಣೆಯನ್ನು ಮಾಡುವುದಲ್ಲ ಎಂದು ಹೇಳಿದರು.

ಹಿಂದೂಗಳು ಡಿಸೆಂಬರ್ ೩೧ ರ ರಾತ್ರಿ ಹೊಸ ವರ್ಷ ಆಚರಣೆ ಮಾಡುವುದು ಎಂದರೆ ಒಂದು ದಿನದ ಮತಾಂತರವೇ ಆಗಿದೆ. ಅದಕ್ಕಾಗಿ ಯಾರು ಸಹ ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡಬಾರದು ಅದರ ಬದಲು ಯುಗಾದಿಯಂದು ಹೊಸ ವರ್ಷ ಆಚರಣೆ ಮಾಡಲು ಕರೆ ನೀಡಿದರು. ಅದಕ್ಕೆ ಸ್ಪಂದಿಸಿದ ಯುವಕ ಯುವತಿಯರು  ಡಿಸೆಂಬರ್ ೩೧ ರಂದು ಹೊಸ ವರ್ಷ ಆಚರಣೆ ಮಾಡದೇ, ಯುಗಾದಿಯಂದು ಹೊಸ ವರ್ಷ ಅಚರಣೆ ಮಾಡುತ್ತೇವೆಂದು ಪ್ರತಿಜ್ಞೆ ಮಾಡಿದರು.

ಸೌ. ಲಕ್ಷ್ಮೀ ಪೈಯವರು ಈ ವೇಳೆ ಮುಂದಿನಂತೆ ಪ್ರತಿಜ್ಞೆಯನ್ನು ಮಾಡಿಸಿದರು ‘ನಾವು ಧರ್ಮ ಸಂಸ್ಥಾಪನೆಯ ಕಾರ್ಯ ಮಾಡುವ ಭಗವಾನ್ ಶ್ರೀಕೃಷ್ಣನ ಚರಣದಲ್ಲಿ ಪ್ರತಿಜ್ಞೆ ಮಾಡುತ್ತೇವೆ, ನಾವು ನಮ್ಮ ಸರ್ವಶ್ರೇಷ್ಠ ಪೂರ್ವಜರಾದ ಋಷಿಮುನಿಗಳು ಹಾಕಿಕೊಟ್ಟಿರುವ ಪರಂಪರೆಯನ್ನು ಅಭಿಮಾನದಿಂದ ಪಾಲಿಸುತ್ತೇವೆ.  ನಾವು ಹೊಸ ವರ್ಷವನ್ನು ಡಿಸೆಂಬರ್ ೩೧ ರ ರಾತ್ರಿ ಅಥವಾ ಜನವರಿ ೧ ರಂದು ಆಚರಣೆ ಮಾಡುವುದಿಲ್ಲ. ನಾವು ಹೊಸ ವರ್ಷವನ್ನು ಹಿಂದೂ ಪಂಚಾಂಗದಂತೆ ಯುಗಾದಿಯಂದು ಆಚರಣೆಯನ್ನು ಮಾಡುವೆವು. ಜನವರಿ ೧ ರಂದು ನಾವು ಯಾರಿಗೂ ಶುಭಾಶಯವನ್ನು ಕೋರುವುದಿಲ್ಲ. ಅದರ ಬದಲು ಯುಗಾದಿಯಂದು ಹೊಸ ವರ್ಷದ ಶುಭಾಶಯ ಹೇಳುವೆವು. ನಾವು ನಮ್ಮ ಸ್ನೇಹಿತರಿಗೂ ಹಿಂದೂ ಹೊಸ ವರ್ಷದ ಯುಗಾದಿಯ ಬಗ್ಗೆ ತಿಳಿಸಿ ಧರ್ಮಜಾಗೃತಿ ಮಾಡುವೆವು. ನಾವು ನಮ್ಮ ಪ್ರಾಣ ಇರುವವರೆಗೆ ಆಭಿಮಾನದಿಂದ ನಮ್ಮ ಇತಿಹಾಸ, ಪರಂಪರೆ, ಆಚರಣೆಯನ್ನು ಪಾಲಿಸುವೆವು. ನಮ್ಮ ಪೂರ್ವಜರು ಹಾಕಿ ಕೊಟ್ಟ ಮಾರ್ಗದಲ್ಲಿ ಮುನ್ನಡೆಯುವೆವು’.
ಕೊನೆಯಲ್ಲಿ ಶ್ಲೋಕದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯವಾಯಿತು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 258 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ