“ತಾಂಟ್ರೇ ಬಾ ತಾಂಟ್” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಎಸ್.ಡಿ.ಪಿ.ಐ. ಮುಖಂಡನನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ-ಹಿಂಜಾವೇ

ಬಂಟ್ವಾಳ: ಈಗಾಗಲೇ ಎರಡೆರಡು ಬಾರಿ ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗವಾಗಿ “ತಾಂಟ್ರೇ ಬಾ ತಾಂಟ್” ಎಂಬ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗುತ್ತಿರುವ SDPI ಮುಖಂಡರ ವಿರುದ್ಧ ದೂರು ನೀಡಿದರೂ ಇಲಾಖೆ ಕ್ರಮ ಕೈಗೊಂಡಿಲ್ಲವೆಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ತೋಡಿಕೊಂಡಿದ್ದಾರೆ.

ಎಸ್.ಡಿ.ಪಿ.ಐ. ಮುಖಂಡ ರಿಯಾಝ್ ಫರಂಗಿಪೇಟೆ ಪದೇ ಪದೇ ನೀಡಿರುವ ಹೇಳಿಕೆಗಳ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ ದೂರು ನೀಡಲಾಗಿದ್ದು, ಇನ್ನೂ ಇಲಾಖೆ ಕ್ರಮ ಕೈಗೊಂಡಿಲ್ಲ. ರಿಯಾಝ್ ಫರಂಗಿಪೇಟೆಯನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟಕ್ಕೆ ನಾವು ತಯಾರಿದ್ದೇವೆ ಎಂದು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾ ಘಟಕ ಹೇಳಿದೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ಜಿಲ್ಲಾ ಹಿಂಜಾವೇ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಹಿಂಜಾವೇ ರಾಜ್ಯ ಗೌರವಾಧ್ಯಕ್ಷ ವಜ್ರದೇಹಿ ಸ್ವಾಮೀಜಿ ಸಹಿತ ಹಿಂದು ಮುಖಂಡರನ್ನು ಗುರಿಯಾಗಿಸಿಕೊಂಡು ರಿಯಾಝ್ ಭಾಷಣಗಳನ್ನು ಮಾಡುತ್ತಿದ್ದು, ಇದು ಹಿಂದುಗಳನ್ನು ಪ್ರಚೋದಿಸುವಂತಿದೆ. ಈ ರೀತಿ ಭಾಷಣ ಮಾಡಿ, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವುದರ ವಿರುದ್ಧ ನಾವು ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳನ್ನು ನೀಡಿದ್ದೇವೆ. ಆದರೆ ಪೊಲೀಸರು ಇನ್ನೂ ಸೂಕ್ತ ಕ್ರಮ ಕೈಗೊಂಡಿಲ್ಲ. ವಿಳಂಗ ಗತಿ ಅನುಸರಿಸಿದರೆ, ಹೋರಾಟಕ್ಕೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

ರಿಯಾಝ್ ಫರಂಗಿಪೇಟೆಯನ್ನು ಬಂಧಿಸಿ, ಜಿಲ್ಲೆಯಿಂದ ಗಡೀಪಾರುಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ಮುಂದಿನ ದಿನಗಳಲ್ಲಿ ಈತ ಇದೇರೀತಿ ಸಂಘಪರಿವಾರದ ನಾಯಕರನ್ನು ಸಂಘರ್ಷಕ್ಕೆ ಆಹ್ವಾನ ನೀಡುವ ಹೇಳಿಕೆನ್ನು ಮುಂದುವರಿಸಿದಲ್ಲಿ ಹಿ.ಜಾ.ವೇ.ಯ ಕಾರ್ಯಕರ್ತರು ಕೂಡ ಸೂಕ್ತ ಉತ್ತರ ನೀಡಲಿದ್ದು, ಈ ಸಂದರ್ಭದಲ್ಲಿ ಅಗಬಹುದಾದ ಯಾವುದೇ ಅನಾಹುತಕ್ಕೆ ಪೊಲೀಸ್ ಇಲಾಖೆಯೇ ಕಾರಣವಾಗಲಿದೆ. ಇದೇ ರೀತಿ ಹೇಳಿಕೆಗಳನ್ನು ನೀಡಿದರೆ, ಹಿಂದು ಸಮಾಜ ಸುಮ್ಮನೆ ಕೂರುವುದಿಲ್ಲ, ಮುಂದಿನ ದಿನಗಳಲ್ಲಿ ಅದಕ್ಕೆ ಬೇಕಾದ ಉತ್ತರವನ್ನು ಕೊಡಲು ತಯಾರಿದ್ದೇವೆ ಎಂದು ಎಚ್ಚರಿಸಿದರು. ಇದೇ ವೇಳೆ ಜಿಲ್ಲೆಯಲ್ಲಿ ವಿವಿಧೆಡೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳನ್ನು ಅವರು ಖಂಡಿಸಿದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 234 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 293 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 195 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ