Dj ಹಳ್ಳಿ KJ ಹಳ್ಳಿ ಮಾದರಿಯಲ್ಲಿ ಪೋಲೀಸ್ ಠಾಣೆ, ಆಸ್ಪತ್ರೆಯ ಮೇಲೆ ದಾಳಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ! ಪೋಲೀಸರಿಂದ ಲಾಠಿಚಾರ್ಜ್ ಗಾಳಿಯಲ್ಲಿ ಗುಂಡು, ನಿಷೇದಾಜ್ಞೆ ಹೇರಿಕೆ! ಬೂದಿ ಮುಚ್ಚಿದ ಕೆಂಡದಂತಿರುವ ಹುಬ್ಬಳ್ಳಿ!

ಹುಬ್ಬಳ್ಳಿ: ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೇ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ಸಂಭವಿಸಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ದ್ವೇಷಮಯ ವಾತಾವರಣ ಉಂಟಾಗಿದೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಕೋಮು ದ್ವೇಷದ ಗಲಾಟೆ ನಡೆಯುತ್ತಿದ್ದರೂ ಶಾಂತವಾಗಿದ್ದ ಹುಬ್ಬಳ್ಳಿ ಶನಿವಾರ ರಾತ್ರಿ ಇದೇ ಕಾರಣಕ್ಕೆ ಪ್ರಕ್ಷುಬ್ಧವಾಗಿದೆ. ತಡರಾತ್ರಿ 1ಗಂಟೆವರೆಗೂ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಹಿಂಬಾಗದ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲುತೂರಾಟ ಪ್ರತಿಭಟನೆ ಮುಂದುವರಿಸಿದ್ದರು. ಒಂದು ಹಂತಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದರೂ ನಗರ ಬೂದಿ ಮುಚ್ಚಿದ ಕೆಂಡವಾಗಿದೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯ ಎದುರು ಕಾರವಾರ ರಸ್ತೆಯಲ್ಲಿ ಕಂಡ ಕಂಡ ವಾಹನಗಳಿಗೆ ಉದ್ರಿಕ್ತ ಜನರ ಗುಂಪು ಕಲ್ಲು ತೂರಾಟ ಮಾಡಿದರು. ಘಟನೆ ನಿಯಂತ್ರಣಕ್ಕಾಗಿ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಗೆ ಬರುತ್ತಿದ್ದ ಪೂರ್ವ ಸಂಚಾರಿ ಇನ್‌ಸ್ಪೆಕ್ಟರ್‌ ಕಾಡದೇವರಮಠ, ಕಾನ್‌ಸ್ಟೇಬಲ್‌ ಗುರುಪಾದಪ್ಪ ಸ್ವಾದಿ ಅವರ ಮೇಲೆ ಕಲ್ಲು ತೂರಾಟವಾಯಿತು. ಇಬ್ಬರೂ ಗಾಯಗೊಂಡಿದ್ದಾರೆ. ಕಾಡದೇವರಮಠ ಅವರನ್ನು ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲದೆ ಪೊಲೀಸ್‌ ಜೀಪನ್ನು ಅಡ್ಡಗೆಡವಿ ಧ್ವಂಸಗೊಳಿಸಿದ್ದಾರೆ.

ಇಷ್ಟಕ್ಕೆ ನಿಲ್ಲದೆ, ದಿಡ್ಡಿ ಓಣಿಯ ಗುರವ ಆಸ್ಪತ್ರೆಯೊಳಗೆ ನುಗ್ಗಿದ ಗುಂಪು ಅದನ್ನು ಸಹ ಧ್ವಂಸಗೊಳಿಸಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಮೂರು ಪೊಲೀಸ್‌ ಜೀಪು, 10 ಸ್ಕೂಟರ್‌, ಬಸ್ಸು ಕಾರು ಸೇರಿ ಹಲವು ವಾಹನಗಳು ಜಖಂಗೊಂಡವು. ಪೊಲೀಸ್‌ ಠಾಣೆ, ಸನಿಹದ ಹಿಂದೂ ದೇಗುಲದ ಮೇಲೆಯೂ ಕಲ್ಲು ಎಸೆಯಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು(Police) ಗುಂಪು ಚದುರಿಸಲು ಮುಂದಾದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಲಾಠಿ ಪ್ರಹಾರ ನಡೆಸಿದರು. ಅದಕ್ಕೂ ಬಗ್ಗದಿದ್ದಾಗ ಅಶ್ರುವಾಯು ಸಿಡಿಸಿದರು. ಆಗ ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಎದುರಿದ್ದ ಒಂದಿಷ್ಟುಉದ್ರಿಕ್ತರು ಹಿಂಬಾಗಕ್ಕೆ ಓಡಿಹೋಗಿದ್ದಾರೆ. ಕಾರವಾರ ರಸ್ತೆಯನ್ನು ಬಂದ್‌ ಮಾಡಿ ಸಂಚಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು. ಮುಂದುವರಿದು ಇಡಿ ನಗರಾದ್ಯಂತ ಪೊಲೀಸ್‌ ವಾಹನದ ಮೂಲಕ ಗಸ್ತು ತಿರುಗಿ 144 ಸೆಕ್ಷನ್‌ ಜಾರಿಯಾಗಿದ್ದು ಯಾವುದೆ ಕಾರಣಕ್ಕೂ ಅನಗತ್ಯ ಓಡಾಟ ಮಾಡದಂತೆ, ಒಬ್ಬರೇ ತಿರುಗಾಡದಂತೆ ಎಚ್ಚರಿಕೆ ನೀಡಿದರು.

ಪೊಲೀಸ್‌ ಆಯುಕ್ತ ಲಾಭುರಾಮ, ಡಿಸಿಪಿ ಸಾಹಿಲ್‌ ಬಾಗ್ಲಾ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ಪೊಲೀಸ್‌ ಪಡೆಯೊಂದಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಮುಸಲ್ಮಾನ ಮುಖಂಡರನ್ನು ಕರೆದು ಸಮಾಧಾನ ಪಡಿಸಲು ಯತ್ನಿಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ