ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಲೋಕಾರ್ಪಣೆಗೆ ಸಿದ್ಧವಾಗಿದೆ ಮಾದರಿ “ಗ್ರಾಮ ಚಾವಡಿ”

ಕಡಿರುದ್ಯಾವರ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಡಿರುದ್ಯಾವರ ಗ್ರಾ.ಪಂ.ಗೆ 48 ಲಕ್ಷ ರೂ ಅನುದಾನದಲ್ಲಿ ಎಪ್ರಿಲ್ 2021ರಲ್ಲಿ ಶಿಲಾನ್ಯಾಸಗೊಂಡ ನೂತನ ಗ್ರಾಮ ಚಾವಡಿ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಇದೀಗ ಫೆ. 4ರಂದು ಉದ್ಘಾಟನೆಗೆ ಸಜ್ಜಾಗಿದೆ.ಮಿತ್ತಬಾಗಿಲು ಗ್ರಾ.ಪಂ.ಗೆ ಒಳಪಟ್ಟಿದ್ದ ಕಡಿರುದ್ಯಾವರ ಗ್ರಾ.ಪಂ.ಗೆ 2018-19ನೇ ಸಾಲಿನ ದೀನ್ ದಯಾಳ್‌ ಉಪಾಧ್ಯಾಯ ಪಂಚಾಯತ್ ಯೋಜನೆಯಲ್ಲಿ 20 ಲಕ್ಷ ರೂ. ಹಾಗೂ ಎಂಎನ್‌ಆರ್‌ಜಿ 28 ಲಕ್ಷ ರೂ. ಸೇರಿ 48 ಲಕ್ಷ ರೂ. ಅನುದಾನದಡಿ ಹಳೆ ಗ್ರಾ.ಪಂ. ಸನಿಹದ 1.37 ಎಕ್ಕರೆ ಖಾಲಿ ನಿವೇಶನದಲ್ಲಿ ಕಟ್ಟಡ ನಿರ್ಮಾಣವಾಗಿದೆ.

ಫೆ.4ರಂದು ಪಂಚಾಯತ್ ಕಟ್ಟಡ ಉದ್ಘಾಟನೆಗೊಳ್ಳಲಿದೆ. ಈ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರಹೆಗ್ಗಡೆಯವರು (ರಾಜ್ಯಸಭಾ ಸದಸ್ಯರು) ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್‌, ಹರೀಶ್‌ ಕುಮಾರ್, ಮಂಜುನಾಥ ಭಂಡಾರಿ, ಹರಿಕೃಷ್ಣ ಬಂಟ್ವಾಳ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಜಿಲ್ಲಾ ಉಪಕಾರ್ಯದರ್ಶಿ ಕೆ.ಆನಂದ ಕುಮಾರ್, ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾಲೂಕಿನ ತಹಶೀಲ್ದಾರ್ ಹಾಗೂ ಕಾರ್ಯಪಾಲಕ ಅಭಿಯಂತರರು ನಿತಿನ್ ಕುಮಾರ್ ನಾಯಕ್‌ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯಂತೆ ಗ್ರಾಮ ಪಂಚಾಯತ್ ಗಳು, ಸ್ವತಂತ್ರವಾಗಿ ಅಭಿವೃದ್ಧಿಯತ್ತ ಮುನ್ನಡೆ ಸಾಗುತ್ತಿರುವುದು ಗ್ರಾಮದ ಅಭಿವೃದ್ಧಿಯ ಸೂಚನೆಯಾಗಿದೆ. ಇತ್ತೀಚೆಗೆ ಹೊಸ ಗ್ರಾಮ ಪಂಚಾಯತ್‌ಗಳು ರಚನೆ ಆದಾಗ ಕುಗ್ರಾಮ ಎಂದೇ ಗುರುತಿಸಲ್ಪಟ್ಟ ದಿಡುಪೆಯ ರಸ್ತೆಯ ಪಕ್ಕದಲ್ಲಿ ಎದ್ದು ನಿಂತು ಬಹಳ ವೇಗವಾಗಿ ಅಭಿವೃದ್ಧಿಯತ್ತ ಸಾಗುತ್ತಿರುವ ಪುಟ್ಟ ಗ್ರಾಮ ಕಡಿರುದ್ಯಾವರ.

ಸುಮಾರು 48ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡದಲ್ಲಿ ವಿಶಾಲವಾದ ಸಭಾಭವನ ಗ್ರಾಮದ ಸಣ್ಣ ಮಟ್ಟದ ಸಭೆ ಸಮಾರಂಭಕ್ಕೆ ಉಪಯೋಗಿಸಬಹುದು. ಮೀಟಿಂಗ್ ಹಾಲ್‌, ಅಧ್ಯಕ್ಷ, ಉಪಾಧ್ಯಕ್ಷರ ಪ್ರತ್ಯೇಕ ಕಛೇರಿಗಳು. ಅಭಿವೃದ್ಧಿ ಅಧಿಕಾರಿ ಕಛೇರಿ, ಕಂಪ್ಯೂಟರ್ ರೂಮ್‌ಗಳು ಹಾಗೂ ಸಿಬ್ಬಂದಿಗಳ ಕ್ಯಾಬಿನ್ ಗಳು ನಿರ್ಮಾಣಗೊಂಡಿದೆ.

ವಿಶೇಷತೆ: ಹೊರಾಂಗಣದಲ್ಲಿ ಗಾರ್ಡನ್, ಹಣ್ಣಿನ ತೋಟ, ಹೂವಿನ ತೋಟ, ಕುಡಿಯುವ ನೀರಿನ ಸುಂದರ ಬಾವಿ, ಧ್ವಜಸ್ತಂಭ, ಸುತ್ತಲೂ ಕಾಂಕ್ರೀಟ್ ರಸ್ತೆ ಹಾಗೂ ಇಡೀ ಪ್ರಾಂಗಣಕ್ಕೆ ಇಂಟರ್ ಲಾಕ್‌ ಅಳವಡಿಸಲಾಗಿದೆ.

ಪ್ರತ್ಯೇಕ ಘನತ್ಯಾಜ್ಯ ಘಟಕದ ನಿವೇಶನದಲ್ಲಿ 1.87 ಎಕರೆ ವಿಸ್ತೀರ್ಣದಲ್ಲಿ ಉಳಿಕೆ ಜಾಗದಲ್ಲಿ ಪಂಚಾಯತ್‌ನ ವತಿಯಿಂದ 520 ಗೇರು ಗಿಡ ಬೆಳಸಲಾಗಿದೆ.

ಸುಸಜ್ಜಿತವಾದ ಘನ ತ್ಯಾಜ್ಯ ಘಟಕ, ಹಳ್ಳಿಗಳ ಪ್ರತಿ ವಾರ್ಡ್‌ಗಳಲ್ಲಿ ಹಂತ-ಹಂತವಾಗಿ ಕಾಂಕ್ರೀಟ್ ರಸ್ತೆಗಳ ಸರ್ಮಾಣಗೊಂಡಿದೆ. ಕೃಷಿಕರಿಗಾಗಿ ಕಿಂಡಿ ಅಣೆಕಟ್ಟುಗಳು ನಿರ್ಮಾಣಗೊಂಡಿದೆ. ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್‌ ಶಾಸಕ ಕೆ.ಪ್ರತಾಪ್ ಸಿಂಹ ನಾಯಕ್ ಇವರ ಅನುದಾನಗಳು ಅಭಿವೃದ್ಧಿಗೆ ಸಹಕಾರಿಯಾಗಿದೆ.

ಒಂಬತ್ತು ಸದಸ್ಯರನ್ನು ಹೊಂದಿರುವ ಕಡಿರುದ್ಯಾವರ ಪಂಚಾಯತ್‌ನಲ್ಲಿ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಅಭಿವೃದ್ಧಿಯಲ್ಲಿ ಉಳಿದ ಸದಸ್ಯರು ಸಾಥ್ ನೀಡುತ್ತಿದ್ದಾರೆ. ಅಭಿವೃದ್ಧಿ ಅಧಿಕಾರಿಯಾಗಿ ಜಯಕೀರ್ತಿ ಕಾರ್ಯನಿರ್ವಹಿಸುತ್ತಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ