ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ, ಪ್ರತಿ ಮನೆ ಮನಗಳಲ್ಲಿ ಶ್ರೀರಾಮ ನಾಮ ಜಪಿಸಲಿ : ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಬೆಳ್ತಂಗಡಿ : ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ. ಇದರಿಂದ ಮನಸ್ಸು ಶುದ್ಧವಾಗಲು ಸಾಧ್ಯ. ನಿಷ್ಠೆಯಿಂದ ಧರ್ಮಪಾಲನೆ ಮಾಡುವವರಿಗೆ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ. ರಾಮ ಎಂಬ ಶಬ್ದ ನಮ್ಮ ಜೀವನಾಡಿ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರ ಮನೆಗಳಲ್ಲಿ ಶ್ರೀರಾಮ ನಾಮ ಜಪಿಸಲಿ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.


ಅವರು ಬುಧವಾರ ಕನ್ಯಾಡಿ ದೇವರಗುಡ್ಡೆ ಮಠದಲ್ಲಿ ಶ್ರೀರಾಮಚಂದ್ರ ಪರಿವಾರ ಮೂರ್ತಿಗಳ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠೆ ನೆರವೇರಿಸಿದ ಬಳಿಕ ಆಶಿರ್ವಚನ ನೀಡುತ್ತ ಶತಕೋಟಿ ಭಕ್ತರ ಪ್ರಾರ್ಥನೆ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು ಎಂದಿತ್ತು. ಪ್ರಭು ಶ್ರೀರಾಮಚಂದ್ರನ ಅನುಗ್ರಹ ಇದ್ದರೆ ಎಲ್ಲವೂ ಸಾಧ್ಯ ಎಂಬಂತೆ ಮರೆಯಾಗಿದ್ದ ಅಯೋಧ್ಯೆ ಇಂದು ಮತ್ತೆ ನಿರ್ಮಾಣಗೊಳ್ಳುತ್ತಿರುವುದು ದೇಶದ ಜಗತ್ತಿನ ಶಾಂತಿ, ನೆಮ್ಮದಿಗೆ ದಾರಿ ತಂದುಕೊಂಡಂತೆ. ಶ್ರೀರಾಮನ ಮನಸ್ಸಿನಂತೆ ಪ್ರತಿಯೊಬ್ಬರ ಆತ್ಮದಲ್ಲಿಯೂ ಪವಿತ್ರತೆ ಅಡಗಿದೆ. ಅದನ್ನು ನಾವು ಸದುಪಯೋಗಪಡಿಸಬೇಕೆ ವಿನಃ ಇನ್ನೊಬ್ಬರು ದುರ್ಬಳಕೆ ಮಾಡದಂತೆ ಜಾಗೃತಗೊಳಿಸಬೇಕು. ಪರಸ್ಪರ ನಂಬಿಕೆ, ಪ್ರೀತಿ, ವಿಶ್ವಾಸವಿದ್ದರೆ ಆರೋಗ್ಯಕ್ಕೂ ನೆಮ್ಮದಿ, ಮನಸ್ಸಿಗೂ ನೆಮ್ಮದಿ ಎಂದರು.


ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಟ್ರಸ್ಟಿ ಚಿತ್ತರಂಜನ್ ಗರೋಡಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಡಾ| ಎಂ.ಎಂ ದಯಾಕರ್, ಭಜರಂಗದಳದ ಜಿಲ್ಲಾ ಸಂಚಾಲಕ ಭಾಸ್ಕರ್ ಧರ್ಮಸ್ಥಳ, ಸಾರಿಗೆ ಇಲಾಖಾ ಅಧಿಕಾರಿ ಚರಣ್, ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಉದ್ಯಮಿ ರವಿಪೂಜಾರಿ ಬರಮೇಲು, ಕೃಷ್ಣಪ್ಪ ಗುಡಿಗಾರ್, ಟ್ರಸ್ಟಿ ತುಕರಾಮ್ ಸಾಲಿಯಾನ್, ಬಿಎಸ್‍ಎನ್‍ಎಲ್ ನಿವೃತ್ತ ಅಧಿಕಾರಿ ಅಣ್ಣಿ ಪೂಜಾರಿ, ಯೂತ್ ಕಾಂಗ್ರೇಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ವಾಣಿಜ್ಯ ತೆರಿಗೆ ಇಲಾಖಾ ಸಹಾಯಕ ಕಮಿಷನರ್ ರಾಜು ನಾಯ್ಕ್, ಮೊದಲಾದವರು ಉಪಸ್ಥಿತರಿದ್ದರು.
ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 40 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 59 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ