ಬದುಕಿರುವಷ್ಟು ಕಾಲ ಇತರರಿಗೆ ಪ್ರೇರಣೆಯಾಗುವ ವ್ಯಕ್ತಿಗಳನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ: ಶ್ರೀದೇವಿ ಪುತ್ತೂರು

ಧರ್ಮಸ್ಥಳ: ಗಣೇಶೋತ್ಸವ ರಾಷ್ಟ್ರೀಯತೆಯ ಭಾವವನ್ನು ಜಾಗರಣ ಮಾಡುವ ಜನರ ಉತ್ಸವ. ಸ್ವಾತಂತ್ರ್ಯ ಹೋರಾಟದಲ್ಲಿ ಬಾಲಗಂಗಾಧರ ತಿಲಕರ ನೇತೃತ್ವದಲ್ಲಿ ಸರ್ವರ ಮನೆಬಾಗಿಲಿಗೆ ದೇವರನ್ನು ಕೊಂಡೊಯ್ದು ಸಂಘಟಿತ ಸಮಾಜವನ್ನು ಕಟ್ಟುವುದಕ್ಕೆ ಸಹಕರಿಸಿದ ಧಾರ್ಮಿಕ ಉತ್ಸವ. ಇದರ ಮೂಲಕ ಸ್ವರಾಜ್ಯ, ಸ್ವದೇಶಿ, ರಾಷ್ಟ್ರೀಯ ಶಿಕ್ಷಣದ ಚಿಂತನೆಗಳನ್ನು ಸಮಾಜದ ಮುಂದಿಡಲು ಸಾಧ್ಯವಾಯಿತು ಎಂದು ಯುವ ವಾಗ್ಮಿ ಶ್ರೀದೇವಿ ಪುತ್ತೂರು ಹೇಳಿದರು.

ಕನ್ಯಾಡಿ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲ್ಪಟ್ಟ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ಭಾರತವನ್ನು ಕೇವಲ ನಕ್ಷೆಯಲ್ಲಿರುವ ದೇಶ ಮಾತ್ರ ಎಂದುಕೊಂಡವರು ಆಕ್ರಮಣಕಾರರಾದರು. ಆದರೆ ಭಾರತಾಂಬೆಯ ಅಂತಃಸತ್ವವನ್ನು ಅರಿತುಕೊಳ್ಳಲು ಹೊರಟವರು ಜ್ಞಾನಮಾರ್ಗದಲ್ಲಿ ಮೋಕ್ಷ ಸಾಧನೆಯತ್ತ ಸಾಗಿದರು. ಹೀಗೆ ಜಗತ್ತಿನ ಜನರಿಗೆ ಅವರವರ ಮನೋಧರ್ಮಕ್ಕೆ ಅನುಗುಣವಾಗಿ ಸ್ಪಂದಿಸಿದ ಶ್ರೇಷ್ಠ ಪರಂಪರೆ ಭಾರತದ್ದು ಎಂದು ಅಭಿಪ್ರಾಯಪಟ್ಟರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಹಸ್ರಾರು ಮಹಾನ್ ಪುರುಷರು ಸ್ವರಾಜ್ಯವೆಂಬ ಧ್ಯೇಯಕ್ಕಾಗಿ ಕಟಿಬದ್ಧರಾಗಿ ತಮ್ಮ ಸರ್ವಸ್ವವನ್ನು ಸಮರ್ಪಿಸಿಕೊಂಡಿದ್ದಾರೆ‌. ಅಂತಹ ವೀರರನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟ ಮಾತೆಯರ ತ್ಯಾಗವನ್ನು ಸ್ಮರಿಸಬೇಕಿದೆ. ಅವರ ತ್ಯಾಗವನ್ನು ಗೌರವಿಸುತ್ತಾ ಪ್ರೇರಣೆಯನ್ನು ಪಡೆದು ಕಾರ್ಯಪ್ರವೃತ್ತರಾಗಬೇಕಾದ ಅಗತ್ಯತೆ ನಮ್ಮ ಮುಂದಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಕನ್ಯಾಡಿ ರಾಮಕ್ಷೇತ್ರದ ಮಠಾಧೀಶರಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸಮಾಜವನ್ನು, ಯುವಕರನ್ನು ಒಗ್ಗೂಡಿಸುವಲ್ಲಿ ಇಂತಹ ಉತ್ಸವಗಳು ಹಿಂದೆ ಕೆಲಸ ಮಾಡಿದ್ದವು. ಇನ್ನು ಮುಂದಿನ ದಿನಗಳಲ್ಲಿ ಅದರ ಅನಿವಾರ್ಯ ನಮಗಿಲ್ಲವೆಂದು ಕೈ ಬಿಡದೆ ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ಕನ್ಯಾಡಿಯ ನೂತನ ಕುಣಿತ ಭಜನಾ ತಂಡ ಭಕ್ತಪ್ರಿಯ ಉದ್ಘಾಟನೆಗೊಂಡಿತು.

ಪೃಥ್ವೀಶ್ ಧರ್ಮಸ್ಥಳ ನಿರೂಪಿಸಿದ ಕಾರ್ಯಕ್ರಮದಲ್ಲಿ ಸುದರ್ಶನ್ ಕನ್ಯಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಬಜಿಲ ಸ್ವಾಗತಿಸಿ ಚಂದ್ರಾವತಿ ಬಜಿಲ ವಂದಿಸಿದರು.

ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಹಿಂದೂ ಧಾರ್ಮಿಕ ಸೇವಾಸಮಿತಿ(ರಿ) ಕನ್ಯಾಡಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 40 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 59 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ