ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ : ತಾರಾನಾಥ ರೈ ಪಡ್ಡಂಬೈಲು ಗುತ್ತು

ಕಾಟುಕುಕ್ಕೆ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮದ ಜ್ಞಾನವಾಹಿನಿ ಪ್ರಯುಕ್ತ ಕಾಟುಕುಕ್ಕೆ ಘಟಕ ಸಮಿತಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೇರಳ ತುಳು ಅಕಾಡೆಮಿಯ ಸಹಯೋಗದೊಂದಿಗೆ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಕಾಟುಕುಕ್ಕೆಯಲ್ಲಿ ತುಳು ಲಿಪಿ ಕಲಿಕಾ ತರಬೇತಿಗೆ ಚಾಲನೆ ನೀಡಿದೆ.


ತರಬೇತಿಯನ್ನು ದೀಪ ಪ್ರಜ್ವಲಿಸುವ ಮೂಲಕ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತದ ಮಂಡಳಿ ಚೇರ್ಮೆನ್ ನಾರಾಯಣನ್. ಕೆ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಷಷ್ಠ್ಯಬ್ದ ಸಂಭ್ರಮ ಸಮಿತಿ ಕಾಟುಕುಕ್ಕೆಯ ಅಧ್ಯಕ್ಷರಾದ ತಾರಾನಾಥ ರೈ ಪಡ್ಡಂಬೈಲು ಗುತ್ತು ಅವರು ಮಾತನಾಡಿ ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ ಎಂದರಲ್ಲದೆ,ಈ ಭಾಗದಲ್ಲಿ ಇದು ಪ್ರಥಮ ತರಗತಿಯಾಗಿದೆ. ಸುಬ್ರಾಯನ ಅನುಗ್ರಹದೊಂದಿಗೆ ಹೆಚ್ಚಿನ ಸಂಖ್ಯೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಅಲ್ಲದೇ ನಮ್ಮೂರಿನ ಮಾತೆಯರು ಮಹಿಳಾ ಮಂಡಳಿಯ ಮೂಲಕ ಇಂತಹಾ ಸಮಾಜಮುಖಿ ಚಟುವಟಿಕೆಯಲ್ಲಿ ಸಕ್ರಿಯರಾಗಿರುವುದು ನಿಜಕ್ಕೂ ಅಭಿಮಾನ ಎಂದರು.

ಹಲವು ಊರುಗಳಲ್ಲಿ ತುಳು ಲಿಪಿ ಕಲಿಸಿಕೊಡುವುದಕ್ಕೆ ಹೋಗುತ್ತಿದ್ದೆ. ನನ್ನೂರಿನಲ್ಲಿ ಒಂದು ತರಗತಿಯನ್ನು ನಡೆಸಬೇಕು ಎನ್ನುವುದು ನನ್ನ ಕನಸಾಗಿತ್ತು. ಅದು ಇಂದು ನನಸಾಗಿದೆ. • ಕಾರ್ತಿಕ್ KN ಇಂಜಿನಿಯರಿಂಗ್ ವಿದ್ಯಾರ್ಥಿ
ವಿವೇಕಾನಂದ ಕಾಲೇಜು ಪುತ್ತೂರು.

ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ ಶೆಟ್ಟಿಯವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮಹಿಳಾ ಮಂಡಳಿಯ ಅಧ್ಯಕ್ಷೆ ವಾಣಿ ಜಿ. ಶೆಟ್ಟಿಯವರು ಸ್ವಾಗತಿಸಿದರೆ, ಮಲ್ಲಿಕಾ ಜೆ. ರೈ ಅವರು ಧನ್ಯವಾದ ಸಮರ್ಪಿಸಿದರು. ಸಾಹಿತಿ ರಾಜಶ್ರೀ ಟಿ ರೈ ಪೆರ್ಲ ನಿರೂಪಣೆ ಮಾಡಿದರು. ಸಭಾ ಕಾರ್ಯಕ್ರಮದ ನಂತರ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದ ಕಾರ್ತಿಕ್ ಮತ್ತು ಜಗನ್ನಾಥ ಇವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಲಿಕಾಪೇಕ್ಷಿಗಳಿಗೆ ತರಗತಿಯನ್ನು ನಡೆಸಿಕೊಟ್ಟರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 276 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 297 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 198 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ