ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ : ತಾರಾನಾಥ ರೈ ಪಡ್ಡಂಬೈಲು ಗುತ್ತು

ಕಾಟುಕುಕ್ಕೆ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮದ ಜ್ಞಾನವಾಹಿನಿ ಪ್ರಯುಕ್ತ ಕಾಟುಕುಕ್ಕೆ ಘಟಕ ಸಮಿತಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿಯ ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕೇರಳ ತುಳು ಅಕಾಡೆಮಿಯ ಸಹಯೋಗದೊಂದಿಗೆ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಕಾಟುಕುಕ್ಕೆಯಲ್ಲಿ ತುಳು ಲಿಪಿ ಕಲಿಕಾ ತರಬೇತಿಗೆ ಚಾಲನೆ ನೀಡಿದೆ.


ತರಬೇತಿಯನ್ನು ದೀಪ ಪ್ರಜ್ವಲಿಸುವ ಮೂಲಕ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತದ ಮಂಡಳಿ ಚೇರ್ಮೆನ್ ನಾರಾಯಣನ್. ಕೆ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಷಷ್ಠ್ಯಬ್ದ ಸಂಭ್ರಮ ಸಮಿತಿ ಕಾಟುಕುಕ್ಕೆಯ ಅಧ್ಯಕ್ಷರಾದ ತಾರಾನಾಥ ರೈ ಪಡ್ಡಂಬೈಲು ಗುತ್ತು ಅವರು ಮಾತನಾಡಿ ಮಾತೃ ಭಾಷೆಯ ಮೇಲಿನ ಪ್ರೀತಿ ಅಭಿಮಾನ ಸದಾ ಜಾಗೃತವಾಗಿರಲಿ ಎಂದರಲ್ಲದೆ,ಈ ಭಾಗದಲ್ಲಿ ಇದು ಪ್ರಥಮ ತರಗತಿಯಾಗಿದೆ. ಸುಬ್ರಾಯನ ಅನುಗ್ರಹದೊಂದಿಗೆ ಹೆಚ್ಚಿನ ಸಂಖ್ಯೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಅಲ್ಲದೇ ನಮ್ಮೂರಿನ ಮಾತೆಯರು ಮಹಿಳಾ ಮಂಡಳಿಯ ಮೂಲಕ ಇಂತಹಾ ಸಮಾಜಮುಖಿ ಚಟುವಟಿಕೆಯಲ್ಲಿ ಸಕ್ರಿಯರಾಗಿರುವುದು ನಿಜಕ್ಕೂ ಅಭಿಮಾನ ಎಂದರು.

ಹಲವು ಊರುಗಳಲ್ಲಿ ತುಳು ಲಿಪಿ ಕಲಿಸಿಕೊಡುವುದಕ್ಕೆ ಹೋಗುತ್ತಿದ್ದೆ. ನನ್ನೂರಿನಲ್ಲಿ ಒಂದು ತರಗತಿಯನ್ನು ನಡೆಸಬೇಕು ಎನ್ನುವುದು ನನ್ನ ಕನಸಾಗಿತ್ತು. ಅದು ಇಂದು ನನಸಾಗಿದೆ. • ಕಾರ್ತಿಕ್ KN ಇಂಜಿನಿಯರಿಂಗ್ ವಿದ್ಯಾರ್ಥಿ
ವಿವೇಕಾನಂದ ಕಾಲೇಜು ಪುತ್ತೂರು.

ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ ಶೆಟ್ಟಿಯವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮಹಿಳಾ ಮಂಡಳಿಯ ಅಧ್ಯಕ್ಷೆ ವಾಣಿ ಜಿ. ಶೆಟ್ಟಿಯವರು ಸ್ವಾಗತಿಸಿದರೆ, ಮಲ್ಲಿಕಾ ಜೆ. ರೈ ಅವರು ಧನ್ಯವಾದ ಸಮರ್ಪಿಸಿದರು. ಸಾಹಿತಿ ರಾಜಶ್ರೀ ಟಿ ರೈ ಪೆರ್ಲ ನಿರೂಪಣೆ ಮಾಡಿದರು. ಸಭಾ ಕಾರ್ಯಕ್ರಮದ ನಂತರ ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದ ಕಾರ್ತಿಕ್ ಮತ್ತು ಜಗನ್ನಾಥ ಇವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಲಿಕಾಪೇಕ್ಷಿಗಳಿಗೆ ತರಗತಿಯನ್ನು ನಡೆಸಿಕೊಟ್ಟರು.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ