ಬಿರುವೆರ್ ಕುಡ್ಲ, ಪಲಿಮಾರು ಘಟಕದಿಂದ ಮನೆ ಹಸ್ತಾಂತರ ಕಾರ್ಯಕ್ರಮ

ಮಂಗಳೂರು: ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ‘ಹೃದಯವಂತರು’ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆಯಲ್ಲಿ ಕ್ರಾಂತಿ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗಸಂಸ್ಥೆಯಾದ
ಬಿರುವೆರ್ ಕುಡ್ಲ ಪಲಿಮಾರು ಘಟಕದ ವಿಶೇಷ ಸೇವಾ ಯೋಜನೆಯಡಿಯಲ್ಲಿ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಿತು.

ತೀರಾ ಬಡ ಕುಟುಂಬದಲ್ಲಿ ದಿನಗಳೆಯುತ್ತಿರುವ ಪಲಿಮಾರು ಗ್ರಾಮದ, ಅವರಾಲು ಮಟ್ಟು ನಿವಾಸಿಯಾದ ಶ್ರೀಮತಿ ಕೊಲ್ಲು ಹೆಂಗಸು, ಇವರ ಮನೆಯನ್ನು ಸಂಪೂರ್ಣ ದುರಸ್ತಿಮಾಡಿ, ನವೀಕರಿಸಿ, ಶೌಚಾಲಯವನ್ನು ನಿರ್ಮಿಸಿ, ಪುನರ್ ನಿರ್ಮಾಣಗೊಂಡ ಮನೆಯಲ್ಲಿ ಗಣ ಹೋಮ ಪೂಜೆ ನಡೆಸಿ, ಭಜನೆ ಸತ್ಸಂಗದ ಮೂಲಕ ದೀಪ ಬೆಳಗಿಸಿ ಉದ್ಘಾಟಿಸಿ, ಸರಳ ರೀತಿಯಲ್ಲಿ ಮನೆಯನ್ನು ಹಸ್ತಾಂತರಿಸುವ ಮೂಲಕ ಬಡಕುಟುಂಬಕ್ಕೆ ಆಸರೆಯಾಗಿದ್ದಾರೆ.

ಸರಳ ಕಾರ್ಯಕ್ರಮದಲ್ಲಿ ಸ್ಥಾಪಕಾಧ್ಯಕ್ಷರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್, ಹಾಗೂ ದಾನಿಗಳ ಪರವಾಗಿ ರಾಮದಾಸ್ ಅವರನ್ನು ಸನ್ಮಾನಿಸಲಾಯಿತು.

ಈ ಸತ್ಕಾರ್ಯದಲ್ಲಿ ಗ್ರಾಮದ ಹಿರಿಯವರು, ಹತ್ತು ಸಮಸ್ತರು, ದಾನಿಗಳು, ಅಭಿಮಾನಿಗಳು, ಹಾಗೂ ನಮ್ಮ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್, ಸಂಘಟನಾ ಅಧ್ಯಕ್ಷರಾದ ಚಂದ್ರಶೇಖರ್ ಎಂ ಅಮೀನ್, ಕೇಂದ್ರ ಸಮಿತಿಯ ಕಾರ್ಯದರ್ಶಿಯಾದ ಕಿಶೋರಬಾಬು, ಉಡುಪಿ ಘಟಕದ ಅಧ್ಯಕ್ಷರಾದ ಕಿಶೋರ್, ಬಜಪೆ ಘಟಕದ ಉಪಾಧ್ಯಕ್ಷರಾದ ಚಂದ್ರ ಪೆರಾರ, ಕೇಂದ್ರ ಸಮಿತಿಯ ಇತರ ಪದಾಧಿಕಾರಿಗಳು, ಅನೇಕ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಚಾಲಕರು, ಪಲಿಮಾರು ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು, ಕಾರ್ಯದರ್ಶಿಯಾದ ಪ್ರವೀಣ್ ಆಡ್ವೇ, ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು, ಮಾತೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ