ಬಿಸಿಲ ಬೇಗೆಗೆ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್! ಗಗನಕ್ಕೇರುತ್ತಿದೆ ನಿಂಬೆಹಣ್ಣಿನ ಬೆಲೆ

ಬೆಂಗಳೂರು: ಉತ್ತರ ಭಾರತದಲ್ಲಿ ನಿಂಬೆ ಬೆಲೆ ಕೇಜಿಗೆ 350 ರು.ಗೆ ಏರಿ ಇತ್ತೀಚೆಗೆ ನಿಂಬೆಹಣ್ಣಿನ ದರೋಡೆ ಉಂಟಾಗಿದ್ದು. ಈಗ ಉತ್ತರ ಭಾರತ ಮಾತ್ರವಲ್ಲ, ರಾಜ್ಯದಲ್ಲಿ ಕೂಡ ನಿಂಬೆಹಣ್ಣಿನ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಉತ್ತಮ ಗಾತ್ರದ ನಿಂಬೆಹಣ್ಣಿನ ದರ ಪ್ರತಿ ಕೆಜಿಗೆ 300 ರು. ತಲುಪಿದೆ. ಕಡಿಮೆಯಾದ ಇಳುವರಿ, ಬೇಡಿಕೆ ಹೆಚ್ಚಿರುವ ಕೊಲ್ಲಿ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿರುವ ಪರಿಣಾಮ ನಿಂಬೆಹಣ್ಣನ್ನು ಖರೀದಿಸಲು ಜನರು ಹಿಂಜರಿಯುವಂತಾಗಿದೆ.

ಈ ಮುಂಚೆ ಕೇಜಿಗೆ 100-150 ರು. ದರದಲ್ಲಿ ಒಂದು ಕೇಜಿ ದೊಡ್ಡ ಗಾತ್ರದ ನಿಂಬೆಹಣ್ಣು ಸಿಗುತ್ತಿತ್ತು. ಈಗ ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆಯಂಥ ಪೇಟೆಯಲ್ಲಿ ಅತ್ಯಂತ ಎಳೆಯ, ಸಣ್ಣ ಗಾತ್ರದ ನಿಂಬೆಹಣ್ಣು ಕೆಜಿಗೆ ಕನಿಷ್ಠ 100 ರು. ಇದೆ. ಇಂಥ ಒಂದು ನಿಂಬೆಹಣ್ಣಿಗೆ 7-8 ರು. ಕೊಟ್ಟು ಖರೀದಿಸಬೇಕಾಗಿದೆ. ಸ್ವಲ್ಪ ದೊಡ್ಡ ಗಾತ್ರದ ಒಂದು ನಿಂಬೆ ಹಣ್ಣಿಗೆ 9ರಿಂದ 10 ರು.ವರೆಗೆ ಮಾರಾಟ ಮಾಡಲಾಗುತ್ತದೆ. ಆದರೆ ಹಾಪ್‌ಕಾಮ್ಸ್‌ನಲ್ಲಿ ಮಾತ್ರ ಒಂದು ಕೆಜಿ ನಿಂಬೆಹಣ್ಣಿನ ಬೆಲೆ 84 ರು. ಇದೆ.

ಏರಿಕೆಗೆ ಕಾರಣ ಏನು:

ರಾಜ್ಯಾದ್ಯಾಂತ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆಯಿಂದ ನಿಂಬೆ ಹಣ್ಣಿನ ಫಸಲಿನಲ್ಲಿ ಶೇ.40 ರಷ್ಟುಕುಸಿತವಾಗಿದೆ. ಇದು ಸಹ ಬೆಲೆ ಏರಿಕೆಗೆ ಪ್ರಮುಖ ಕಾರಣ. ರಾಜ್ಯದಲ್ಲಿ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನಿಂಬೆ ಬೆಳೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಶೇ.75 ರಷ್ಟುನಿಂಬೆ ಬೆಳೆಯುವ ರೈತರಿದ್ದಾರೆ. ಆದರೆ, ಹೂವು ಬಿಡುವ ತಿಂಗಳಾದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಅಕಾಲಿಕ ಮಳೆ ಬಿದ್ದಿದೆ. ಇದೇ ಕಾರಣದಿಂದ ನಿಂಬೆ ಹೂವು ಶೇ.50 ರಷ್ಟುಉದುರಿ ಹೋಗಿದೆ. ಅಲ್ಲದೆ, 100 ಹಣ್ಣು ಸಿಗುವ ಮರದಲ್ಲಿ ಕೇವಲ 50-60 ಹಣ್ಣು ಮಾತ್ರ ಸಿಗುತ್ತಿದೆ. ಇದು ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ.

ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ನಿಂಬೆ ಹಣ್ಣಿಗೆ ಕೊಂಚ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಜನರು ಸಹ ಹೆಚ್ಚಿನ ನಿಂಬೆ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗದ ಹಿನ್ನೆಲೆಯಲ್ಲಿ ಬೆಲೆ ತುಸು ಹೆಚ್ಚಳವಾಗಿದೆ

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಿಂದ ಬೆಂಗಳೂರು ನಗರಕ್ಕೆ ನಿಂಬೆ ಹಣ್ಣು ಪೂರೈಕೆಯಾಗುತ್ತಿದೆ. ಆದರೆ ಈಗ ಬೇಡಿಕೆ ಹೆಚ್ಚು ಬಂದಿರುವ ಕೊಲ್ಲಿ ರಾಷ್ಟ್ರಗಳಿಗೆ ಮಾರಾಟ ಮಾಡಲಾಗುತ್ತಿರುವುದರಿಂದ ನಗರಕ್ಕೆ ಸಾಕಷ್ಟುನಿಂಬೆಹಣ್ಣು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದಲ್ಲಿ ಹಣ್ಣಿನ ಗಾತ್ರಕ್ಕೆ ಅನುಗುಣವಾಗಿ 7ರಿಂದ 10ರು.ವರೆಗೂ ಮಾರಾಟ ಮಾಡಲಾಗುತ್ತಿದೆ.

ಬೆಲೆ ಭಾರಿ ದುಬಾರಿ ಸಣ್ಣ ನಿಂಬೆಹಣ್ಣು = ಪ್ರತಿ ಹಣ್ಣಿಗೆ 7 ರಿಂದ 8 ರು., ದೊಡ್ಡ ನಿಂಬೆಹಣ್ಣು = ಪ್ರತಿ ಹಣ್ಣಿಗೆ 9 ರಿಂದ 10 ರು., ಮಾರುಕಟ್ಟೆದರ = ಪ್ರತಿ ಕೆ.ಜಿ.ಗೆ 300 ರು.

ನಿಂಬೆ ರಸದ ಬೆಲೆ ಹೆಚ್ಚಳ:

ಸಾಮಾನ್ಯ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ನಿಂಬೆ ಹಣ್ಣಿನ ಜ್ಯೂಸ್‌ (ಪಾನಕ) ಬೆಲೆಯಲ್ಲಿ 10 ರಿಂದ 15 ರು.ಇರುತ್ತಿತ್ತು. ಆದರೆ, ಈಗ ನಿಂಬೆ ಬೆಲೆ ಹೆಚ್ಚಳದಿಂದ 20ರಿಂದ 25 ರು.ಗಳ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ಅಂಗಡಿಗಳ ಮಾಲೀಕರು ವಿವರಿಸಿದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ