ಮಾಜಿ ಯೋಧನ ಮನೆಗೆ ಕನ್ನ ಹಾಕಿದ ಕದೀಮರು ಒಂಟಿ ಮಹಿಳೆಯನ್ನು ಹತ್ಯೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಡಿಕೇರಿಯ ಕಳಕೇರಿ ನಿಡುಗಣೆ ಗ್ರಾಮದಲ್ಲಿ ನಡೆದ ಘಟನೆ!

ಮಡಿಕೇರಿ: ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯನ್ನು ಕೊಲೆ ಮಾಡಿ, ಮನೆಯಲ್ಲಿದ್ದ  ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ಮಡಿಕೇರಿ ಹೊರ ವಲಯದ ಕ್ಲಬ್ ಮಹಿಂದ್ರ ಸಮೀಪದ ಕಳಕೇರಿ ನಿಡುಗಣೆ ಗ್ರಾಮದಲ್ಲಿ ನಡೆದಿದೆ.

ಮಾಜಿ ಯೋಧ ದಿ.ಬೈಲಾಡಿ ಹೊನ್ನಪ್ಪ ಅವರ ಪತ್ನಿ ಲಲಿತಾ(70) ಎಂಬವರು ಹತ್ಯೆಗೊಳಗಾದ ಮಹಿಳೆ. ಕಳ್ಳರು ಮನೆಯಲ್ಲಿದ್ದ 50 ಸಾವಿರ ರೂ. ನಗದು, 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಈ ಸಂಬಂಧ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಲಿತಾ ಅವರ ಮನೆಯ ಸಮೀಪ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು, ಹೊರ ರಾಜ್ಯದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು, ಕೆಲಸದವರ ಮೇಲೂ ಸಂಶಯ ವ್ಯಕ್ತವಾಗಿದೆ. ಈ ಘಟನೆ ಪೂರ್ವ ನಿಯೋಜಿತ ಕೃತ್ಯ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಮಡಿಕೇರಿ ಡಿವೈಎಸ್‍ಪಿ ದಿನೇಶ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿ ಕಿರಣ್, ಠಾಣಾಧಿಕಾರಿ ಚಂದ್ರಶೇಖರ್, ಅಪರಾಧ ವಿಭಾಗದ ಠಾಣಾಧಿಕಾರಿ ಸದಾಶಿವ, ಶ್ವಾನ ದಳ, ಬೆರಳಚ್ಚು ವಿಭಾಗದ ಸಿಬ್ಬಂದಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಜಿಲ್ಲಾ ಅಪರಾಧ ಪತ್ತೆ ದಳ ಕೂಡ ತನಿಖೆ ಕೈಗೆತ್ತಿಕೊಂಡಿದೆ.

ಇನ್ನು ಕೊಲೆಯಾದ ಲಲಿತಾ ಅವರು ಕಳೆದ 7 ವರ್ಷಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಮಗಳು ಚಂದ್ರಾವತಿ ಕಲ್ಲುಗುಂಡಿ ಹಾಗೂ ಮತ್ತೋರ್ವ ಮಗಳು ಮೀನಾ ಬೆಂಗಳೂರಿನಲ್ಲಿ ವಾಸವಿದ್ದರೆ ಪುತ್ರ ಗೋಪಾಲಕೃಷ್ಣ ಮೈಸೂರಿನಲ್ಲಿ ಉದ್ಯೋಗದಲ್ಲಿದ್ದರು. ಲಲಿತಾ ಅವರ ಮನೆ ಇರುವ ಪ್ರದೇಶದ ಸುತ್ತ ಕಾಫಿ ತೋಟವಿದ್ದು, ಸೋಮವಾರ ಸಂಜೆ ಮನೆಯ ಹಿಂಬದಿಯ ಬಚ್ಚಲು ಮನೆಯಲ್ಲಿ ಬೆಂಕಿ ಉರಿಸುತ್ತಿದ್ದ ಸಂದರ್ಭ ಸೌದೆಯಿಂದ ಅವರ ತಲೆಯ ಹಿಂಭಾಗಕ್ಕೆ ಹೊಡೆಯಲಾಗಿದೆ. ಲಲಿತಾ ಸ್ಥಳದಲ್ಲೇ ಉಸಿರು ಚೆಲ್ಲಿದ್ದು, ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.

ಲಲಿತಾ ಅವರ ಮಕ್ಕಳು ಪ್ರತಿ ನಿತ್ಯ ಸಂಜೆ 7 ಗಂಟೆಗೆ ತಾಯಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದರು. ಎಂದಿನಂತೆ ಸೋಮವಾರ ಸಂಜೆ ಕೂಡ ತಾಯಿಯ ಮೊಬೈಲ್‍ಗೆ ಕರೆ ಮಾಡಿದಾಗ ಲಲಿತಾ ಕರೆ ಸ್ವೀಕರಿಸಿರಲಿಲ್ಲ. ತಾಯಿ ಮನೆಯ ಹೊರಗಿರಬಹುದೆಂದು ಭಾವಿಸಿದ ಮಕ್ಕಳು ಸ್ವಲ್ಪ ಹೊತ್ತಿನ ಬಳಿಕ ಪದೇ ಪದೇ ತಾಯಿಗೆ ಕರೆ ಮಾಡಿದ್ದಾರೆ. ಆದರೆ ಲಲಿತಾ ಮಾತ್ರ ಮೊಬೈಲ್ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಮಕ್ಕಳು ರಾತ್ರಿ 8 ಗಂಟೆಗೆ ಲಲಿತಾ ಅವರ ಮನೆಯ ಸಮೀಪ ವಾಸವಿರುವ ತಮ್ಮ ಸಂಬಂಧಿಕರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅದರಂತೆ ಸಂಬಂಧಿಕರು ಲಲಿತಾ ಅವರ ಮನೆಗೆ ಬಂದು ನೋಡಿದಾಗ ಮನೆಯ ಮುಂದಿನ ಬಾಗಿಲು ತೆರೆದ ಸ್ಥಿತಿಯಲ್ಲಿದ್ದು, ಒಳ ಹೋಗಿ ನೋಡಿದಾಗ ಮನೆಯ ಒಳಗಿನ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿರುವುದು ಕಂಡು ಬಂದಿದೆ. ಮನೆಯ ಹಿಂಬದಿಯ ಬಚ್ಚಲು ಮನೆಯ ಬಳಿ ತೆರಳಿದಾಗ ಬೆಂಕಿ ಒಲೆಯ ಮುಂದೆ ಲಲಿತಾ ರಕ್ತದ ಮಡುವಲ್ಲಿ ಬಿದ್ದು, ಸಾವನಪ್ಪಿರುವುದು ಕಂಡು ಬಂದಿದೆ. ಬಳಿಕ ಸಂಬಂಧಿಕರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶಾವಾಗಾರಕ್ಕೆ ಸ್ಥಳಾಂತರಿಸಿದ್ದರು.

ಕಳ್ಳತನ
ಲಲಿತಾ ಅವರೇ ಖುದ್ದಾಗಿ ತೋಟ ನಿರ್ವಹಿಸುತ್ತಿದ್ದು ಈ ಬಾರಿ ಉತ್ತಮ ಕಾಫಿ ಫಸಲು ದೊರೆತಿತ್ತು ಎನ್ನಲಾಗಿದ್ದು, ಕೆಲವು ಸಮಯದ ಹಿಂದೆ ಲಲಿತಾ ಕಾಫಿಯನ್ನು ಮಾರಾಟ ಮಾಡಿದ್ದರು. ಮೈಸೂರಿನಲ್ಲಿದ್ದ ಮಗ ಗೋಪಾಲಕೃಷ್ಣ ಇತ್ತೀಚೆಗೆ ಮನೆಗೆ ಬಂದು ಕಾಫಿ ಮಾರಾಟ ಮಾಡಿದ್ದ ಹಣವನ್ನು ಪಡೆದುಕೊಂಡು 50 ಸಾವಿರ ರೂ. ನಗದನ್ನು ತಾಯಿಯ ಖರ್ಚಿಗಾಗಿ ಮನೆಯಲ್ಲಿಟ್ಟಿದ್ದರು. ಲಲಿತಾ ಅವರನ್ನು ಕೊಲೆ ಮಾಡಿದ ಬಳಿಕ ಮನೆಯ ಒಳಗೆ ಪ್ರವೇಶ ಮಾಡಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಕಪಾಟು ಪೆಟ್ಟಿಗೆಗಳನ್ನು ಜಾಲಾಡಿದ್ದು, ಬೀರುವಿನಲ್ಲಿಟ್ಟಿದ್ದ ವಸ್ತುಗಳ ಚೆಲ್ಲಾಪಿಲ್ಲಿಯಾಗಿವೆ. 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಕಾಫಿ ಮಾರಾಟ ಮಾಡಿದ ಹಣ 50 ಸಾವಿರವನ್ನು ದೋಚಿದ್ದಾರೆ.

ಲಲಿತಾ ಅವರ ಪತಿ ದಿ.ಹೊನ್ನಪ್ಪ ಅವರು ಮಾಜಿ ಯೋಧರಾಗಿದ್ದು ಬಂದೂಕು ಮತ್ತು ಆರ್ಮಿ ಕ್ಯಾಂಟೀನ್ ಸೌಲಭ್ಯವನ್ನು ಲಲಿತಾ ಅವರು ಹೊಂದಿದ್ದರು. ಕೋವಿಯಿದ್ದ ಬೀರುವನ್ನು ಕೂಡ ತೆರದು ನೋಡಿರುವ ದುಷ್ಕರ್ಮಿಗಳು ಕೋವಿಯನ್ನು ಅಲ್ಲಿಯೇ ಬಿಟ್ಟಿದ್ದಾರೆ. ಕ್ಯಾಂಟೀನ್‍ನಲ್ಲಿ ದೊರೆಯುತ್ತಿದ್ದ ಮದ್ಯದ ಬಾಟಲಿಗಳನ್ನು ಲಲಿತಾ ಮನೆಯ ಕಬ್ಬಿಣದ ಪೆಟ್ಟಿಗೆಯಲ್ಲಿಟ್ಟಿದ್ದರು. ಈ ಪೆಟ್ಟಿಗೆಯನ್ನು ಕೂಡ ತೆರೆದು ಅದರಲ್ಲಿದ್ದ ದುಬಾರಿ ಬೆಲೆಯ 7 ಮದ್ಯದ ಬಾಟಲಿಗಳನ್ನು ಕೂಡ ಹೊತ್ತೊಯ್ದು ಮನೆಯಿಂದ ಕೇವಲ 150 ಅಡಿ ಮುಂದಿನ ರಸ್ತೆ ಬದಿಯ ಕಾಡಿನಲ್ಲಿ ಕೊಲೆಗಾರರು ಬಚ್ಚಿಟ್ಟಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 62 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ