ಮಂತ್ರಾಲಯ ಧರ್ಮಜಾಗೃತಿ ತಾಣ: ಡಾ| ಹೆಗ್ಗಡೆ

ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಧರ್ಮ ಜಾಗೃತಿ ತಾಣವಾಗಿದ್ದು ದೈವಶಕ್ತಿ ಹೊಂದಿದ ಪುಣ್ಯಸ್ಥಳ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನುಡಿದರು.

ಶ್ರೀ ಮಠದ ವತಿಯಿಂದ ಡಾ. ಹೆಗ್ಗಡೆಯವರನ್ನು ಗೌರವಿಸಲಾಯಿತು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರದಿಂದ ಪ್ರಾರಂಭವಾದ ಶ್ರೀ ಗುರು ವೈಭವೋತ್ಸವದ ನಿಮಿತ್ತ ನಡೆದ ರಾಯರ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರ ಕಣ್ತಪ್ಪಿಸಿ ಏನೂ ಮಾಡಲು ಸಾಧ್ಯವಿಲ್ಲ ನಮ್ಮ ಕಣ್ಣಿಗೆ ಕಾಣದ ಆಗಾಧ ಯಾವಾಗಲೂ ಜಾಗೃತವಾಗಿರುತ್ತದೆ. ಅದನ್ನೇ ನಾವೆಲ್ಲ ದೈವವೆಂದು ಪೂಜಿಸುತ್ತೇವೆ. 1969ರಲ್ಲಿ ನಾನು ಪ್ರಥಮ ಬಾರಿಗೆ ಮಂತ್ರಾಲಯದ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಆ ಮೇಲೆಯೂ ಸಾಕಷ್ಟು ಬಾರಿ ಬಂದು ಹೋಗಿದ್ದೇನೆ. ಆದರೆ, ಆಗ ಕಂಡ ಮಂತ್ರಾಲಯಕ್ಕೂ ಈಗ ನೋಡುತ್ತಿರುವ ಮಂತ್ರಾಲಯಕ್ಕೂ ಅಗಾಧ ಬದಲಾವಣೆ ಕಂಡು ಬರುತ್ತಿದೆ. ಭೌತಿಕ ಪ್ರಗತಿ ದೊಡ್ಡ ಮಟ್ಟದಲ್ಲಿ ಆಗಿದೆ. ಮಠದ ಪೀಠಾಧಿಪತಿಗಳ ಆಜ್ಞೆ ಅನುಸಾರ ಇಲ್ಲಿಗೆ ಬರುವ ಭಾಗ್ಯ ಸಿಕ್ಕಿದೆ ಎಂದರು.

ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ಗುರುವೈಭೋತ್ಸವ, ಜಾತ್ಯತೀತ, ಧರ್ಮಾತೀತ ಆಚರಣೆಯಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 2009ರಲ್ಲಿ ಮಂತ್ರಾಲಯ ಕ್ಷೇತ್ರದಲ್ಲಿ ಉಂಟಾದ ಪ್ರವಾಹ ವೇಳೆ ಸಂಕಷ್ಟಕ್ಕೀಡಾದ ಜನರಿಗೆ ಅಗತ್ಯ ನೆರವು ನೀಡಿದ್ದಾರೆ. ಸ್ವಯಂ ಸೇವಕರನ್ನು ನೆರವಿಗೆ ಕಳುಹಿಸಿದ ಅವರಿಗೂ ಮಂತ್ರಾಲಯಕ್ಕೂ ವಿಶೇಷ ನಂಟಿದೆ. ಆದರ್ಶ ವ್ಯಕ್ತಿ ಹೇಗಿರಲಿ ಎನ್ನಲು ಹೆಗ್ಗಡೆಯವರಿಗಿಂತ ನಿದರ್ಶನ ಸಿಗುವುದಿಲ್ಲ. ಮಂತ್ರಾಲಯದ ಸೇರಿದಂತೆ ಶ್ರೀಮಠದ ಶಾಖಾ ಮಠ ಗುರುವೈಭೋತ್ಸವ ಕಾರ್ಯ ನಡೆಯಲಿವೆ. ಶ್ರೀಮಠದಲ್ಲಿ ಈ ಆರು ದಿನ ನಡೆಯುವ ಗುರುವೈಭೋತ್ಸವ ಕಾರ್ಯಕ್ರಮದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದರು.

ರಜತದ ಸಿಂಹ, ಅಶ್ವ,ಗಜ, ವಾಹನಗಳನ್ನು ಸಮರ್ಪಿಸಲಾಯಿತು. ಶ್ರೀಮಠದಲ್ಲೇ ಮುದ್ರಿಸಿದ ತಮಿಳು, ಕನ್ನಡ ಹಾಗೂ ತೆಲುಗು ಭಾಷೆಗಳ ಪಂಚಾಂಗವನ್ನು ಬಿಡುಗಡೆ ಗೊಳಿಸಲಾಯಿತು. ವಿದ್ವಾನ್ ರಾಜಾ ಎನ್. ಗಿರಿಯಾಚಾರ್ಯ, ವಿದ್ಯಾಪೀಠದ ಪ್ರಾಚಾರ್ಯ ಎನ್.ವಾದಿರಾಜಾಚಾರ್ಯ, ಪಂಚಮುಖಿ, ಶ್ರೀಮಠದ ವ್ಯವಸ್ಥಾಪಕರಾದ ವೆಂಕಟೇಶ ಜೋಶಿ ಇನ್ನಿತರರಿದ್ದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 265 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ