ಪ್ರಸಿದ್ಧ MDH ಮಸಾಲ ಪುಡಿಗಳ ಉತ್ಪಾದನಾ ಸಂಸ್ಥೆಮಾಲೀಕ ಧರ್ಮಪಾಲ ಗುಲಾಟಿ ವಿಧಿವಶ

ನವದೆಹಲಿ: ಮಸಾಲಾ ಪುಡಿಗಳ ಉತ್ಪಾದನಾ ಸಂಸ್ಥೆ ಎಂಡಿಎಚ್​ನ ಮಾಲೀಕ ಧರ್ಮಪಾಲ ಗುಲಾಟಿ ಇಂದು ಮುಂಜಾನೆ 5.30ರ ವೇಳೆಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕಳೆದ ಮೂರುವಾರಗಳಿಂದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಸಿಯಾಲ್ ಕೋಟ್​ನಲ್ಲಿ 1923ರಲ್ಲಿ ಜನಿಸಿದ ಧರ್ಮಪಾಲ ಗುಲಾಟಿ ಅವರು ಆಪ್ತವಲಯದಲ್ಲಿ ದಾಲಾಜಿ, ಮಹಾಶಯಾಜಿ ಎಂದೇ ಕರೆಯಿಸಿಕೊಳ್ಳುತ್ತಿದ್ದವರು. ಬಾಲ್ಯದಲ್ಲೇ ಶಾಲೆ ಬಿಟ್ಟ ಅವರು ತಂದೆ ಆರಂಭಿಸಿದ ಮಸಾಲಾ ವ್ಯಾಪಾರಕ್ಕೆ ಜತೆಗೂಡಿದ್ದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಅವರು ಭಾರತಕ್ಕೆ ಆಗಮಿಸಿ ಅಮೃತಸರದಲ್ಲಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು.

ನಂತರ ದೆಹಲಿಗೆ ಆಗಮಿಸಿ ಕರೋಲ್ ಬಾಗ್​ನಲ್ಲಿ ಅಂಗಡಿಯೊಂದನ್ನು ತೆರೆದರು. ಅಧಿಕೃತವಾಗಿ ಕಂಪನಿಯನ್ನು ಆರಂಭಿಸಿದ್ದು 1959ರಲ್ಲಿ. ಮಸಾಲಾ ವ್ಯಾಪಾರವನ್ನು ಉದ್ಯಮ ಸ್ವರೂಪಕ್ಕೆ ತಂದ ಅವರು, ಎಂಡಿಎಚ್ ಮಸಾಲಾವನ್ನು ಜಗತ್ತಿಗೇ ಪರಿಚಯಿಸಿದರು. ಕಳೆದ ವರ್ಷ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಎಂಡಿಎಚ್​ ಮಸಾಲಾ ಕಂಪನಿ ಹೇಳುವ ಪ್ರಕಾರ, ಗುಲಾಟಿ ತಮ್ಮ ವೇತನದ ಶೇಕಡ 90 ಪಾಲನ್ನು ದೇಣಿಗೆ ನೀಡಿದ್ದಾರೆ. 

ಗುಲಾಟಿ ಅವರನ್ನು “ಕಿಂಗ್ ಆಫ್ ಸ್ಪೈಸ್” ಎಂದೇ ಕರೆಯಲಾಗುತ್ತಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯ ಮಾತಾ ಚನ್ನನ್ ದೇವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹಾಶಯ್ ಎಂಬ ಹೆಸರಿನಿಂದ ಜನಪ್ರಿಯರಾಗಿರುವ ಎಂಡಿಎಚ್ ಮಾಲೀಕ ಧರ್ಮಪಾಲ್ ಅವರು ಎಂಡಿಎಚ್ ಮಸಾಲ ಕಂಪನಿ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಅಜ್ಜ ಎಂದೇ ಗುರುತಿಸಲ್ಪಡುತ್ತಿದ್ದರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 62 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ